<p>ಚಾಮರಾಜನಗರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಗಳ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುದಾನ ನೀಡಿದ್ದು, ಮಾದಪುರದಿಂದ ಕಿರಸೂರಿಗೆ ಸಂಪರ್ಕಿಸುವ ರಸ್ತೆಗೆ ₹1.25 ಕೋಟಿ ಮಂಜೂರಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.</p>.<p>ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಮಾದಪುರದಿಂದ ಕಿರಸೂರು ಗ್ರಾಮದವರೆಗೆ 2 ಕಿ.ಮೀ ರಸ್ತೆ ಅಭಿವೃದ್ಧಿಯಾಗಲಿದೆ. ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹೊಂದಿಸುವುದರ ಜೊತೆಗೆ ಕ್ಷೇತ್ರಗಳ ಅಭಿವೃದ್ಧಿಗೂ ಹೆಚ್ಚಿನ ಅನುದಾನ ನೀಡಿದೆ. ಗ್ರಾಮಾಂತರ ಭಾಗಗಳಲ್ಲಿ ಸಂಪರ್ಕ ರಸ್ತೆಗಳು ಅಭಿವೃದ್ಧಿ ಆಗುತ್ತಿದೆ. ಕಾಡಂಚಿನ ಗ್ರಾಮಗಳ ಅಭಿವೃದ್ಧಿಗೂ ವಿಶೇಷ ಒತ್ತು ನೀಡಲಾಗಿದೆ ಎಂದರು.</p>.<p>ತಾಲ್ಲೂಕಿನ ಪುಣಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖ್ಯ ರಸ್ತೆಯಿಂದ ಕುಳ್ಳೂರು ಗ್ರಾಮದವರೆಗೆ ರಸ್ತೆ ಅಭಿವೃದ್ಧಿಗೆ ₹75 ಲಕ್ಷ, ದೊಡ್ಡಮೂಡಹಳ್ಳಿಯಿಂದ ಚಿಕ್ಕಮೂಡಹಳ್ಳಿವರೆಗಿನ ರಸ್ತೆ ಅಭಿವೃದ್ಧಿಗೆ ₹ 75 ಲಕ್ಷ, ಸಂತೇಮರಹಳ್ಳಿ ಮಾರ್ಗದ ಮಾದಾಪುರ ಮುಖ್ಯ ರಸ್ತೆಯಿಂದ ಕಿರಗಸೂರು ಗ್ರಾಮದವರೆಗೆ ಡಾಂಬರೀಕರಣ ಕಾಮಗಾರಿಗೆ ₹ 1.25 ಕೋಟಿ ನೀಡಿದ್ದು, ಗುಣಮಟ್ಟದ ಕಾಮಗಾರಿ ನಡೆಸಿ ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.</p>.<p>ಕಾಡಂಚಿನ ಗ್ರಾಮಗಳ ಜನರಿಗೆ ಕುಡಿಯುವ ನೀರು, ರಸ್ತೆ, ಚರಂಡಿಯಂತಹ ಮೂಲ ಸೌಕರ್ಯ ಕಲ್ಪಿಸಲು ಒತ್ತು ನೀಡಲಾಗಿದೆ. ಹಾಡಿಗಳಿಗೆ ಹೈಮಾಸ್ಟ್ ದೀಪ, ಸೋಲಾರ್ ದೀಪಗಳನ್ನು ಅಳವಡಿಸಲಾಗಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಕಿರಗಸೂರು ಗ್ರಾಮದ ಮುಖಂಡರಾದ ಸೈಯದ್, ಎಂ.ಮೋಹನ್ ಕುಮಾರ್ ಹಾಗೂ ಸೈಯದ್ ಅಮೀನ್ ಸಾಹೇಬ್, ಸೈಯದ್ ತೌಸಿಬ್, ಪುಟ್ಟಪ್ಪ, ಕಿರಣ್ ಕುಮಾರ್, ಎಜಾಜ್ ಅಹಮ್ಮದ್, ಉಮಾಪತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-37-1130853569</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಗಳ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುದಾನ ನೀಡಿದ್ದು, ಮಾದಪುರದಿಂದ ಕಿರಸೂರಿಗೆ ಸಂಪರ್ಕಿಸುವ ರಸ್ತೆಗೆ ₹1.25 ಕೋಟಿ ಮಂಜೂರಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.</p>.<p>ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಮಾದಪುರದಿಂದ ಕಿರಸೂರು ಗ್ರಾಮದವರೆಗೆ 2 ಕಿ.ಮೀ ರಸ್ತೆ ಅಭಿವೃದ್ಧಿಯಾಗಲಿದೆ. ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹೊಂದಿಸುವುದರ ಜೊತೆಗೆ ಕ್ಷೇತ್ರಗಳ ಅಭಿವೃದ್ಧಿಗೂ ಹೆಚ್ಚಿನ ಅನುದಾನ ನೀಡಿದೆ. ಗ್ರಾಮಾಂತರ ಭಾಗಗಳಲ್ಲಿ ಸಂಪರ್ಕ ರಸ್ತೆಗಳು ಅಭಿವೃದ್ಧಿ ಆಗುತ್ತಿದೆ. ಕಾಡಂಚಿನ ಗ್ರಾಮಗಳ ಅಭಿವೃದ್ಧಿಗೂ ವಿಶೇಷ ಒತ್ತು ನೀಡಲಾಗಿದೆ ಎಂದರು.</p>.<p>ತಾಲ್ಲೂಕಿನ ಪುಣಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖ್ಯ ರಸ್ತೆಯಿಂದ ಕುಳ್ಳೂರು ಗ್ರಾಮದವರೆಗೆ ರಸ್ತೆ ಅಭಿವೃದ್ಧಿಗೆ ₹75 ಲಕ್ಷ, ದೊಡ್ಡಮೂಡಹಳ್ಳಿಯಿಂದ ಚಿಕ್ಕಮೂಡಹಳ್ಳಿವರೆಗಿನ ರಸ್ತೆ ಅಭಿವೃದ್ಧಿಗೆ ₹ 75 ಲಕ್ಷ, ಸಂತೇಮರಹಳ್ಳಿ ಮಾರ್ಗದ ಮಾದಾಪುರ ಮುಖ್ಯ ರಸ್ತೆಯಿಂದ ಕಿರಗಸೂರು ಗ್ರಾಮದವರೆಗೆ ಡಾಂಬರೀಕರಣ ಕಾಮಗಾರಿಗೆ ₹ 1.25 ಕೋಟಿ ನೀಡಿದ್ದು, ಗುಣಮಟ್ಟದ ಕಾಮಗಾರಿ ನಡೆಸಿ ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.</p>.<p>ಕಾಡಂಚಿನ ಗ್ರಾಮಗಳ ಜನರಿಗೆ ಕುಡಿಯುವ ನೀರು, ರಸ್ತೆ, ಚರಂಡಿಯಂತಹ ಮೂಲ ಸೌಕರ್ಯ ಕಲ್ಪಿಸಲು ಒತ್ತು ನೀಡಲಾಗಿದೆ. ಹಾಡಿಗಳಿಗೆ ಹೈಮಾಸ್ಟ್ ದೀಪ, ಸೋಲಾರ್ ದೀಪಗಳನ್ನು ಅಳವಡಿಸಲಾಗಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಕಿರಗಸೂರು ಗ್ರಾಮದ ಮುಖಂಡರಾದ ಸೈಯದ್, ಎಂ.ಮೋಹನ್ ಕುಮಾರ್ ಹಾಗೂ ಸೈಯದ್ ಅಮೀನ್ ಸಾಹೇಬ್, ಸೈಯದ್ ತೌಸಿಬ್, ಪುಟ್ಟಪ್ಪ, ಕಿರಣ್ ಕುಮಾರ್, ಎಜಾಜ್ ಅಹಮ್ಮದ್, ಉಮಾಪತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-37-1130853569</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>