<p>ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ): ಮಲೆ ಮಹದೇಶ್ವರನ ಬೆಟ್ಟದ ನಾಗಮಲೆಗೆ ಪಾದಯಾತ್ರೆ ಹೊರಟಿದ್ದ ಬಾಲಕನನ್ನು ಕೊಂದು ಹಾಕಿದ ಚಿರತೆ ಸೆರೆಗೆ ಅರಣ್ಯ ಇಲಾಖೆ ತೀವ್ರ ಶೋಧ ನಡೆಸಿದೆ.</p>.<p>ನಾಗಮಲೆ ಗ್ರಾಮದಲ್ಲಿಚಿರತೆಯೊಂದು ಸೋಮವಾರ ರಾತ್ರಿ ಎರಡು ಮೇಕೆಗಳನ್ನು ಹೊತ್ತೊಯ್ದಿದ್ದು, ಸ್ಥಳೀಯರ ಆತಂಕ ಹೆಚ್ಚಿದೆ.</p>.<p>ಮಂಗಳವಾರ ಇಲಾಖೆಯ 40 ಸಿಬ್ಬಂದಿಯನ್ನೊಳಗೊಂಡ ತಂಡ ಅರಣ್ಯದೊಳಗೆ ಕಾರ್ಯಾಚರಣೆ ನಡೆಸಿತು. ದಾಳಿ ನಡೆದ ಜಾಗದ ಸುತ್ತಮುತ್ತ ನಾಲ್ಕು ಬೋನುಗಳನ್ನು ಇರಿಸಲಾಗಿದ್ದು ಎರಡು ಥರ್ಮಲ್ ಡ್ರೋನ್ ಸೇರಿದಂತೆ ನಾಲ್ಕು ಡ್ರೋನ್ ಹಾಗೂ 20 ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಬಳಸಿಕೊಳ್ಳಲಾಗಿದೆ.</p>.<p>ಬಾಲಕನ ಮೇಲೆ ದಾಳಿ ನಡೆಸಿದ ಜಾಗದಲ್ಲಿ ಇರಿಸಲಾಗಿದ್ದ ಕ್ಯಾಮೆರಾದಲ್ಲಿ ಚಿರತೆ ಪತ್ತೆಯಾಗಿದ್ದು, ಶೀಘ್ರ ಸೆರೆ ಹಿಡಿಯಲಾಗುವುದು ಎಂದು ಕಾವೇರಿ ವನ್ಯಧಾಮದ ಚಾಮರಾಜನಗರ ವೃತ್ತದ ಸಿಸಿಎಫ್ ಮಾಲತಿಪ್ರಿಯಾ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>ಪರಿಹಾರ: ಮೃತ ಬಾಲಕನ ಕುಟುಂಬಕ್ಕೆ ಮೊದಲ ಹಂತದಲ್ಲಿ ₹ 5 ಲಕ್ಷ ಪರಿಹಾರ ವಿತರಿಸಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಸಹಿತ ಅಗತ್ಯ ದಾಖಲೆಗಳು ಬಂದ ಬಳಿಕ ಉಳಿಕೆ ₹ 15 ಲಕ್ಷ ಪರಿಹಾರ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-38-1550345844</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ): ಮಲೆ ಮಹದೇಶ್ವರನ ಬೆಟ್ಟದ ನಾಗಮಲೆಗೆ ಪಾದಯಾತ್ರೆ ಹೊರಟಿದ್ದ ಬಾಲಕನನ್ನು ಕೊಂದು ಹಾಕಿದ ಚಿರತೆ ಸೆರೆಗೆ ಅರಣ್ಯ ಇಲಾಖೆ ತೀವ್ರ ಶೋಧ ನಡೆಸಿದೆ.</p>.<p>ನಾಗಮಲೆ ಗ್ರಾಮದಲ್ಲಿಚಿರತೆಯೊಂದು ಸೋಮವಾರ ರಾತ್ರಿ ಎರಡು ಮೇಕೆಗಳನ್ನು ಹೊತ್ತೊಯ್ದಿದ್ದು, ಸ್ಥಳೀಯರ ಆತಂಕ ಹೆಚ್ಚಿದೆ.</p>.<p>ಮಂಗಳವಾರ ಇಲಾಖೆಯ 40 ಸಿಬ್ಬಂದಿಯನ್ನೊಳಗೊಂಡ ತಂಡ ಅರಣ್ಯದೊಳಗೆ ಕಾರ್ಯಾಚರಣೆ ನಡೆಸಿತು. ದಾಳಿ ನಡೆದ ಜಾಗದ ಸುತ್ತಮುತ್ತ ನಾಲ್ಕು ಬೋನುಗಳನ್ನು ಇರಿಸಲಾಗಿದ್ದು ಎರಡು ಥರ್ಮಲ್ ಡ್ರೋನ್ ಸೇರಿದಂತೆ ನಾಲ್ಕು ಡ್ರೋನ್ ಹಾಗೂ 20 ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಬಳಸಿಕೊಳ್ಳಲಾಗಿದೆ.</p>.<p>ಬಾಲಕನ ಮೇಲೆ ದಾಳಿ ನಡೆಸಿದ ಜಾಗದಲ್ಲಿ ಇರಿಸಲಾಗಿದ್ದ ಕ್ಯಾಮೆರಾದಲ್ಲಿ ಚಿರತೆ ಪತ್ತೆಯಾಗಿದ್ದು, ಶೀಘ್ರ ಸೆರೆ ಹಿಡಿಯಲಾಗುವುದು ಎಂದು ಕಾವೇರಿ ವನ್ಯಧಾಮದ ಚಾಮರಾಜನಗರ ವೃತ್ತದ ಸಿಸಿಎಫ್ ಮಾಲತಿಪ್ರಿಯಾ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>ಪರಿಹಾರ: ಮೃತ ಬಾಲಕನ ಕುಟುಂಬಕ್ಕೆ ಮೊದಲ ಹಂತದಲ್ಲಿ ₹ 5 ಲಕ್ಷ ಪರಿಹಾರ ವಿತರಿಸಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಸಹಿತ ಅಗತ್ಯ ದಾಖಲೆಗಳು ಬಂದ ಬಳಿಕ ಉಳಿಕೆ ₹ 15 ಲಕ್ಷ ಪರಿಹಾರ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-38-1550345844</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>