ಪ್ರಯಾಣಿಕರಿಗೆ ತೊಂದರೆ: ಭಾನುವಾರವೂ ಕೆಎಸ್ಆರ್ಟಿಸಿ ಬಸ್ಗಳಿಲ್ಲದೇ ಸಾರ್ವಜನಿಕರು ತೊಂದರೆ ಅನುಭವಿಸಿದರು. ರಜಾ ದಿನವಾಗಿದ್ದರಿಂದ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಜನರ ಸಂಖ್ಯೆ ಕಡಿಮೆ ಇತ್ತು. ಆದರೂ, ಮೈಸೂರು, ಬೆಂಗಳೂರು ಹಾಗೂ ಜಿಲ್ಲೆಯ ಪ್ರಮುಖ ಪಟ್ಟಣಗಳಿಗೆ ಹೊರಟಿದ್ದ ಜನರು ಖಾಸಗಿ ಬಸ್ಗಳನ್ನು ಅವಲಂಬಿಸಬೇಕಾಯಿತು.