<p><strong>ಚಾಮರಾಜನಗರ/ಗುಂಡ್ಲುಪೇಟೆ: </strong>ಜಿಲ್ಲೆಯ ಜನರು ಹೊಸ ವರ್ಷವನ್ನು ಸರಳವಾಗಿ ಸಂಭ್ರಮದಿಂದ ಬರಮಾಡಿಕೊಂಡರು. ಕೋವಿಡ್ ಕಾರಣದಿಂದ ರಾತ್ರಿ ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆಗೆ ನಿಷೇಧ ಇದ್ದುದರಿಂದ ನಗರ, ಪಟ್ಟಣಗಳಲ್ಲಿ ಹೆಚ್ಚು ಜನರು ಕಂಡು ಬರಲಿಲ್ಲ.</p>.<p>ಹಾಗಿದ್ದರೂ, ನಗರ ನಿವಾಸಿಗಳು ತಮ್ಮ ಮನೆಗಳ ಬಳಿ ಪಟಾಕಿಗಳನ್ನು ಸಿಡಿಸಿದರು. ಕೇಕ್ ಕತ್ತರಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಗ್ರಾಮೀಣ ಭಾಗಗಳಲ್ಲೂ ಯುವಕರು ಹೊಸ ವರ್ಷವನ್ನು ಸ್ವಾಗತಿಸಿದರು. ರಸ್ತೆಗಳಲ್ಲಿ ಸ್ವಾಗತಕೋರುವ ಸಂದೇಶಗಳನ್ನು ಬರೆದು ಸಂಭ್ರಮಿಸಿದರು.</p>.<p>ಸ್ನೇಹಿತರಿಗೆ, ನೆಂಟರಿಷ್ಟರಿಗೆ ಹೊಸ ವರ್ಷದ ಶುಭಾಶಯ ತಿಳಿಸಲು ಜನರು ಸಾಮಾಜಿಕ ಜಾಲತಾಣಗಳ ಮೊರೆ ಹೋದರು.</p>.<p>ಹೊಸ ವರ್ಷದ ಮೊದಲ ದಿನ ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಹಿಂದೂಗಳು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.</p>.<p class="Subhead">ಭಕ್ತರ ಸಂಖ್ಯೆ ಕಡಿಮೆ: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಭಕ್ತರ ಸಂಖ್ಯೆ ಕಡಿಮೆ ಇತ್ತು. ಸಾಮಾನ್ಯವಾಗಿ ಹೊಸ ವರ್ಷದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯ ಭಕ್ತರು ಸೇರುತ್ತಾರೆ. ಈ ಬಾರಿ ಕೋವಿಡ್ ಕಾರಣದಿಂದ ಹೊಸ ವರ್ಷಾಚರಣೆಗೆ ಹಲವು ನಿರ್ಬಂಧಗಳು ಹೇರಿದ್ದರಿಂದ ಹೊರಗಡೆಯಿಂದ ಹೆಚ್ಚಿನ ಭಕ್ತರು ಬಂದಿರಲಿಲ್ಲ.</p>.<p>ಯಳಂದೂರು ತಾಲ್ಲೂಕಿನ ಬಿಳಿಗಿರಿ ರಂಗನಬೆಟ್ಟದ ರಂಗನಾಥಸ್ವಾಮಿ ದೇವಾಲಯದಲ್ಲಿ ಸಾಮಾನ್ಯ ದಿನಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.</p>.<p>ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ ಪ್ರದೇಶದ ಐದು ಕಿ.ಮೀ ವ್ಯಾಪ್ತಿ, ಹೊಗೆನಕಲ್ ಜಲಪಾತ, ಚಾಮರಾಜನಗರ ತಾಲ್ಲೂಕಿನ ಚಿಕ್ಕಹೊಳೆ–ಸುವರ್ಣಾವತಿ ಜಲಾಶಯಕ್ಕೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿತ್ತು.</p>.<p class="Briefhead"><strong>ಗೋಪಾಲಸ್ವಾಮಿಬೆಟ್ಟದಲ್ಲಿ ಜನಜಂಗುಳಿ</strong></p>.<p>ಆದರೆ, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಬಂಡೀಪುರ ಮತ್ತು ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವರ್ಷದ ಮೊದಲ ದಿನ ಪ್ರವಾಸಿಗರ ದಂಡೇ ಹರಿದು ಬಂತು.</p>.<p>ಹೊಸ ವರ್ಷದ ಪ್ರಯುಕ್ತಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ 10ಕ್ಕೂ ಹೆಚ್ಚು ಬಸ್ಗಳನ್ನು ಬಿಡಲಾಯಿತು. ಧನುರ್ಮಾಸ ಕಾರಣಕ್ಕೆ ನೂತನ ವಧು-ವರರು ಕೂಡ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.</p>.<p>ಬಂಡೀಪುರ ಸಫಾರಿಗೆ ಬೆಳಗ್ಗೆ ಒಮ್ಮಲೆ ನೂರಾರು ಮಂದಿ ಬಂದ ಕಾರಣ ಎಲ್ಲರಿಗೂ ಟಿಕೆಟ್ ಸಿಗಲಿಲ್ಲ. ಸಂಜೆ ಸಫಾರಿಗೆ ಬಂದಿದ್ದವರ ಸಂಖ್ಯೆಯೂ ಹೆಚ್ಚಿತ್ತು.</p>.<p class="Subhead"><strong>ಬೀದಿ ಬದಿ ವ್ಯಾಪಾರ ಜೋರು: </strong>ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಸಫಾರಿ, ದೇವಸ್ಥಾನಗಳಿಗೆ ತೆರಳಿದ ಹಿನ್ನೆಲೆಯಲ್ಲಿ ಊಟಿ ರಸ್ತೆಯಲ್ಲಿನ ಬೀದಿ ಬದಿ ವ್ಯಾಪಾರಿಗಳಿಗೆ ಹೆಚ್ಚಿನ ವಹಿವಾಟು ನಡೆಯಿತು. ಎಳೆ ನೀರು, ಟೀ, ಜ್ಯೂಸ್ ಸೇರಿದಂತೆ ತಂಪು ಪಾನಿಯಗಳಿಗೆ ಬೇಡಿಕೆ ಹೆಚ್ಚಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ/ಗುಂಡ್ಲುಪೇಟೆ: </strong>ಜಿಲ್ಲೆಯ ಜನರು ಹೊಸ ವರ್ಷವನ್ನು ಸರಳವಾಗಿ ಸಂಭ್ರಮದಿಂದ ಬರಮಾಡಿಕೊಂಡರು. ಕೋವಿಡ್ ಕಾರಣದಿಂದ ರಾತ್ರಿ ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆಗೆ ನಿಷೇಧ ಇದ್ದುದರಿಂದ ನಗರ, ಪಟ್ಟಣಗಳಲ್ಲಿ ಹೆಚ್ಚು ಜನರು ಕಂಡು ಬರಲಿಲ್ಲ.</p>.<p>ಹಾಗಿದ್ದರೂ, ನಗರ ನಿವಾಸಿಗಳು ತಮ್ಮ ಮನೆಗಳ ಬಳಿ ಪಟಾಕಿಗಳನ್ನು ಸಿಡಿಸಿದರು. ಕೇಕ್ ಕತ್ತರಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಗ್ರಾಮೀಣ ಭಾಗಗಳಲ್ಲೂ ಯುವಕರು ಹೊಸ ವರ್ಷವನ್ನು ಸ್ವಾಗತಿಸಿದರು. ರಸ್ತೆಗಳಲ್ಲಿ ಸ್ವಾಗತಕೋರುವ ಸಂದೇಶಗಳನ್ನು ಬರೆದು ಸಂಭ್ರಮಿಸಿದರು.</p>.<p>ಸ್ನೇಹಿತರಿಗೆ, ನೆಂಟರಿಷ್ಟರಿಗೆ ಹೊಸ ವರ್ಷದ ಶುಭಾಶಯ ತಿಳಿಸಲು ಜನರು ಸಾಮಾಜಿಕ ಜಾಲತಾಣಗಳ ಮೊರೆ ಹೋದರು.</p>.<p>ಹೊಸ ವರ್ಷದ ಮೊದಲ ದಿನ ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಹಿಂದೂಗಳು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.</p>.<p class="Subhead">ಭಕ್ತರ ಸಂಖ್ಯೆ ಕಡಿಮೆ: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಭಕ್ತರ ಸಂಖ್ಯೆ ಕಡಿಮೆ ಇತ್ತು. ಸಾಮಾನ್ಯವಾಗಿ ಹೊಸ ವರ್ಷದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯ ಭಕ್ತರು ಸೇರುತ್ತಾರೆ. ಈ ಬಾರಿ ಕೋವಿಡ್ ಕಾರಣದಿಂದ ಹೊಸ ವರ್ಷಾಚರಣೆಗೆ ಹಲವು ನಿರ್ಬಂಧಗಳು ಹೇರಿದ್ದರಿಂದ ಹೊರಗಡೆಯಿಂದ ಹೆಚ್ಚಿನ ಭಕ್ತರು ಬಂದಿರಲಿಲ್ಲ.</p>.<p>ಯಳಂದೂರು ತಾಲ್ಲೂಕಿನ ಬಿಳಿಗಿರಿ ರಂಗನಬೆಟ್ಟದ ರಂಗನಾಥಸ್ವಾಮಿ ದೇವಾಲಯದಲ್ಲಿ ಸಾಮಾನ್ಯ ದಿನಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.</p>.<p>ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ ಪ್ರದೇಶದ ಐದು ಕಿ.ಮೀ ವ್ಯಾಪ್ತಿ, ಹೊಗೆನಕಲ್ ಜಲಪಾತ, ಚಾಮರಾಜನಗರ ತಾಲ್ಲೂಕಿನ ಚಿಕ್ಕಹೊಳೆ–ಸುವರ್ಣಾವತಿ ಜಲಾಶಯಕ್ಕೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿತ್ತು.</p>.<p class="Briefhead"><strong>ಗೋಪಾಲಸ್ವಾಮಿಬೆಟ್ಟದಲ್ಲಿ ಜನಜಂಗುಳಿ</strong></p>.<p>ಆದರೆ, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಬಂಡೀಪುರ ಮತ್ತು ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವರ್ಷದ ಮೊದಲ ದಿನ ಪ್ರವಾಸಿಗರ ದಂಡೇ ಹರಿದು ಬಂತು.</p>.<p>ಹೊಸ ವರ್ಷದ ಪ್ರಯುಕ್ತಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ 10ಕ್ಕೂ ಹೆಚ್ಚು ಬಸ್ಗಳನ್ನು ಬಿಡಲಾಯಿತು. ಧನುರ್ಮಾಸ ಕಾರಣಕ್ಕೆ ನೂತನ ವಧು-ವರರು ಕೂಡ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.</p>.<p>ಬಂಡೀಪುರ ಸಫಾರಿಗೆ ಬೆಳಗ್ಗೆ ಒಮ್ಮಲೆ ನೂರಾರು ಮಂದಿ ಬಂದ ಕಾರಣ ಎಲ್ಲರಿಗೂ ಟಿಕೆಟ್ ಸಿಗಲಿಲ್ಲ. ಸಂಜೆ ಸಫಾರಿಗೆ ಬಂದಿದ್ದವರ ಸಂಖ್ಯೆಯೂ ಹೆಚ್ಚಿತ್ತು.</p>.<p class="Subhead"><strong>ಬೀದಿ ಬದಿ ವ್ಯಾಪಾರ ಜೋರು: </strong>ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಸಫಾರಿ, ದೇವಸ್ಥಾನಗಳಿಗೆ ತೆರಳಿದ ಹಿನ್ನೆಲೆಯಲ್ಲಿ ಊಟಿ ರಸ್ತೆಯಲ್ಲಿನ ಬೀದಿ ಬದಿ ವ್ಯಾಪಾರಿಗಳಿಗೆ ಹೆಚ್ಚಿನ ವಹಿವಾಟು ನಡೆಯಿತು. ಎಳೆ ನೀರು, ಟೀ, ಜ್ಯೂಸ್ ಸೇರಿದಂತೆ ತಂಪು ಪಾನಿಯಗಳಿಗೆ ಬೇಡಿಕೆ ಹೆಚ್ಚಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>