ಚಾಮರಾಜನಗರ: ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ತುರ್ತು ಹಾಗೂ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ದೂರವಾಣಿ ಮೂಲಕ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಂದ ಜಿಲ್ಲೆಯ ಸ್ಥಿತಿಗತಿಗಳ ಬಗ್ಗೆ ಸಚಿವರು ಗುರುವಾರ ಮಾಹಿತಿ ಪಡೆದಿದ್ದಾರೆ.
ಮಳೆಯಿಂದ ಕೃಷಿ, ತೋಟಗಾರಿಕೆ ಬೆಳೆಹಾನಿ, ಜಾನುವಾರು, ಮನೆ ಮತ್ತು ಮೂಲ ಸೌಕರ್ಯಗಳಿಗೆ ಹಾನಿಯಾದಲ್ಲಿ ಸಮರೋಪಾದಿಯಲ್ಲಿ ಪರಿಸ್ಥಿತಿ ನಿಭಾಯಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಜನಸಾಮಾನ್ಯರ ಸಂಕಷ್ಟಗಳಿಗೆ ತುರ್ತಾಗಿ ಸ್ಪಂದಿಸುವಂತೆ ಅವರು ಸೂಚನೆ ನೀಡಿದ್ದಾರೆ.