<p><strong>ಕೊಳ್ಳೇಗಾಲ:</strong> ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಬದಿಯಲ್ಲಿ ಮದ್ಯ ವ್ಯಸನಿಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಮದ್ಯವ್ಯಸನಿಗಳು ಕುಳಿತುಕೊಳ್ಳುತ್ತಿದ್ದ ಕಲ್ಲುಗಳಿಗೆ ಆಯಿಲ್ ಸುರಿದು ಬಣ್ಣ ಬಳಿಯುತ್ತಿದ್ದಾರೆ.</p>.<p>ಪ್ರವಾಸಿ ತಾಣಗಳಾದ ಭರಚುಕ್ಕಿ ಜಲಪಾತ, ವೆಸ್ಲಿ ಸೇತುವೆ, ಮಧ್ಯ ರಂಗನಾಥ ಸ್ವಾಮಿ ದೇವಾಲಯ, ಸೋಮೇಶ್ವರ ದೇವಾಲಯ, ಶಿವನಸಮುದ್ರದ ಆದಿಶಕ್ತಿ ಮಾರಮ್ಮ ದೇವಾಲಯ, ದರ್ಗಾ ಕಾವೇರಿ ನದಿ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಶಿವನಸಮುದ್ರ ರಸ್ತೆಯ ಮೂಲಕ ಪ್ರವಾಸಿಗರು ತೆರಳಬೇಕಿದ್ದು, ಆ ರಸ್ತೆಯ ಮೇಲೆ ಮದ್ಯ ವ್ಯಸನಿಗಳು ಕುಳಿತು ಮದ್ಯಪಾನ ಮಾಡುತ್ತಿದ್ದರು. ಇದರಿಂದ ಪ್ರವಾಸಿಗರಿಗೆ ಪ್ರತಿನಿತ್ಯ ಕಿರಿಕಿರಿ ಉಂಟಾಗುತ್ತಿತ್ತು. ಇದೀಗ ಪೊಲೀಸರು ಇದಕ್ಕೆ ಕಡಿವಾಣ ಹಾಕಿದ್ದಾರೆ.</p>.<p>‘ಈ ಪ್ರವಾಸಿ ತಾಣಗಳನ್ನು ವೀಕ್ಷಿಸಲು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಪ್ರವಾಸಿಗರು ಬರುತ್ತಿದ್ದು, ಕಿರಿದಾದ ರಸ್ತೆಯಲ್ಲೇ ಎರಡು ಬದಿಯಲ್ಲಿ ಮದ್ಯ ಸೇವನೆ ಹೆಚ್ಚಾಗಿ ಮಾಡುತ್ತಿದ್ದರಿಂದ ತೊಂದರೆಯಾಗಿತ್ತು. ಈ ಬಗ್ಗೆ ಪ್ರಜಾವಾಣಿಯ ಮೇ 13ರ ಸಂಚಿಕೆಯಲ್ಲಿ ‘ರಸ್ತೆ ಬದಿಯಲ್ಲಿಯೇ ಮದ್ಯ ಸೇವನೆ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು.</p>.<p>ಇದರಿಂದ ಎಚ್ಚೆತ್ತ ಗ್ರಾಮಾಂತರ ಪೊಲೀಸರು ರಸ್ತೆ ಬದಿಯಲ್ಲಿ ಮದ್ಯಪಾನ ಮಾಡದಂತೆ ಅರಿವು ಮೂಡಿಸಿದ್ದಾರೆ. ಅಲ್ಲದೇ ಬಾರ್ ಮಾಲೀಕರಿಗೂ ಎಚ್ಚರಿಕೆ ನೀಡಿದ್ದಾರೆ. ಕಲ್ಲುಗಳ ಮೇಲೆ ಆಯಿಲ್ ಹಾಗೂ ಬಣ್ಣವನ್ನು ಹಾಕಿದ್ದಾರೆ. ರಸ್ತೆಯ ಎರಡೂ ಬದಿಯನ್ನು ಪಂಚಾಯಿತಿಯವರಿಂದ ಸ್ವಚ್ಛಪಡಿಸಿದ್ದಾರೆ.</p>.<p>‘ಈ ಜಾಗದಲ್ಲಿ ಮದ್ಯಪಾನ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಪೊಲೀಸರು ಎಚ್ಚರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-37-2080880408</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ:</strong> ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಬದಿಯಲ್ಲಿ ಮದ್ಯ ವ್ಯಸನಿಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಮದ್ಯವ್ಯಸನಿಗಳು ಕುಳಿತುಕೊಳ್ಳುತ್ತಿದ್ದ ಕಲ್ಲುಗಳಿಗೆ ಆಯಿಲ್ ಸುರಿದು ಬಣ್ಣ ಬಳಿಯುತ್ತಿದ್ದಾರೆ.</p>.<p>ಪ್ರವಾಸಿ ತಾಣಗಳಾದ ಭರಚುಕ್ಕಿ ಜಲಪಾತ, ವೆಸ್ಲಿ ಸೇತುವೆ, ಮಧ್ಯ ರಂಗನಾಥ ಸ್ವಾಮಿ ದೇವಾಲಯ, ಸೋಮೇಶ್ವರ ದೇವಾಲಯ, ಶಿವನಸಮುದ್ರದ ಆದಿಶಕ್ತಿ ಮಾರಮ್ಮ ದೇವಾಲಯ, ದರ್ಗಾ ಕಾವೇರಿ ನದಿ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಶಿವನಸಮುದ್ರ ರಸ್ತೆಯ ಮೂಲಕ ಪ್ರವಾಸಿಗರು ತೆರಳಬೇಕಿದ್ದು, ಆ ರಸ್ತೆಯ ಮೇಲೆ ಮದ್ಯ ವ್ಯಸನಿಗಳು ಕುಳಿತು ಮದ್ಯಪಾನ ಮಾಡುತ್ತಿದ್ದರು. ಇದರಿಂದ ಪ್ರವಾಸಿಗರಿಗೆ ಪ್ರತಿನಿತ್ಯ ಕಿರಿಕಿರಿ ಉಂಟಾಗುತ್ತಿತ್ತು. ಇದೀಗ ಪೊಲೀಸರು ಇದಕ್ಕೆ ಕಡಿವಾಣ ಹಾಕಿದ್ದಾರೆ.</p>.<p>‘ಈ ಪ್ರವಾಸಿ ತಾಣಗಳನ್ನು ವೀಕ್ಷಿಸಲು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಪ್ರವಾಸಿಗರು ಬರುತ್ತಿದ್ದು, ಕಿರಿದಾದ ರಸ್ತೆಯಲ್ಲೇ ಎರಡು ಬದಿಯಲ್ಲಿ ಮದ್ಯ ಸೇವನೆ ಹೆಚ್ಚಾಗಿ ಮಾಡುತ್ತಿದ್ದರಿಂದ ತೊಂದರೆಯಾಗಿತ್ತು. ಈ ಬಗ್ಗೆ ಪ್ರಜಾವಾಣಿಯ ಮೇ 13ರ ಸಂಚಿಕೆಯಲ್ಲಿ ‘ರಸ್ತೆ ಬದಿಯಲ್ಲಿಯೇ ಮದ್ಯ ಸೇವನೆ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು.</p>.<p>ಇದರಿಂದ ಎಚ್ಚೆತ್ತ ಗ್ರಾಮಾಂತರ ಪೊಲೀಸರು ರಸ್ತೆ ಬದಿಯಲ್ಲಿ ಮದ್ಯಪಾನ ಮಾಡದಂತೆ ಅರಿವು ಮೂಡಿಸಿದ್ದಾರೆ. ಅಲ್ಲದೇ ಬಾರ್ ಮಾಲೀಕರಿಗೂ ಎಚ್ಚರಿಕೆ ನೀಡಿದ್ದಾರೆ. ಕಲ್ಲುಗಳ ಮೇಲೆ ಆಯಿಲ್ ಹಾಗೂ ಬಣ್ಣವನ್ನು ಹಾಕಿದ್ದಾರೆ. ರಸ್ತೆಯ ಎರಡೂ ಬದಿಯನ್ನು ಪಂಚಾಯಿತಿಯವರಿಂದ ಸ್ವಚ್ಛಪಡಿಸಿದ್ದಾರೆ.</p>.<p>‘ಈ ಜಾಗದಲ್ಲಿ ಮದ್ಯಪಾನ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಪೊಲೀಸರು ಎಚ್ಚರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-37-2080880408</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>