<p><strong>ಚಾಮರಾಜನಗರ</strong>: ತಾಲ್ಲೂಕಿನ ಕಣ್ಣೇಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುತ್ತುಗೋಡೆ ಸಂಪೂರ್ಣ ಶಿಥಿಲಗೊಂಡು ಬೀಳುವ ಹಂತ ತಲುಪಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಸಂಪೂರ್ಣವಾಗಿ ಬಾಗಿಕೊಂಡು ಬೀಳುವ ಹಂತದಲ್ಲಿರುವ ಕಾಂಪೌಂಡ್ಗೆ ಮರದ ದಿಮ್ಮಿಗಳನ್ನು ಆಸರೆಯಾಗಿ ಕೊಟ್ಟು ನಿಲ್ಲಿಸಲಾಗಿದೆ. ಜೂನ್ 1ರಿಂದ ಶಾಲೆ ಆರಂಭವಾಗುತ್ತಿದ್ದು ಅವಘಡ ಸಂಭವಿಸುವ ಮುನ್ನ ಎಚ್ಚೆತ್ತುಕೊಂಡು ದುರಸ್ತಿ ಮಾಡಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<p>ಕಾಂಪೌಂಡ್ಗೆ ಹೊಂದಿಕೊಂಡಿರುವ ಗೇಟ್ ಮೂಲಕವೇ ವಿದ್ಯಾರ್ಥಿಗಳು ಶಾಲೆಯ ಆವರಣ ಪ್ರವೇಶಿಸಬೇಕಿದ್ದು ಈ ಸಂದರ್ಭ ಕಾಂಪೌಂಡ್ ಕುಸಿಯವ ಭೀತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-37-1070844211</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ತಾಲ್ಲೂಕಿನ ಕಣ್ಣೇಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುತ್ತುಗೋಡೆ ಸಂಪೂರ್ಣ ಶಿಥಿಲಗೊಂಡು ಬೀಳುವ ಹಂತ ತಲುಪಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಸಂಪೂರ್ಣವಾಗಿ ಬಾಗಿಕೊಂಡು ಬೀಳುವ ಹಂತದಲ್ಲಿರುವ ಕಾಂಪೌಂಡ್ಗೆ ಮರದ ದಿಮ್ಮಿಗಳನ್ನು ಆಸರೆಯಾಗಿ ಕೊಟ್ಟು ನಿಲ್ಲಿಸಲಾಗಿದೆ. ಜೂನ್ 1ರಿಂದ ಶಾಲೆ ಆರಂಭವಾಗುತ್ತಿದ್ದು ಅವಘಡ ಸಂಭವಿಸುವ ಮುನ್ನ ಎಚ್ಚೆತ್ತುಕೊಂಡು ದುರಸ್ತಿ ಮಾಡಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<p>ಕಾಂಪೌಂಡ್ಗೆ ಹೊಂದಿಕೊಂಡಿರುವ ಗೇಟ್ ಮೂಲಕವೇ ವಿದ್ಯಾರ್ಥಿಗಳು ಶಾಲೆಯ ಆವರಣ ಪ್ರವೇಶಿಸಬೇಕಿದ್ದು ಈ ಸಂದರ್ಭ ಕಾಂಪೌಂಡ್ ಕುಸಿಯವ ಭೀತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-37-1070844211</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>