<p>ಚಾಮರಾಜನಗರ: ನಗರದ ಯಡಬೆಟ್ಟದಲ್ಲಿರುವ ಸರ್ಕಾರಿ ಮೆಡಿಕಲ್ ಕಾಲೇಜಿನ ಕೇಂದ್ರ ಪ್ರಯೋಗಾಲಯದ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ವಹಿಸುವುದು ಬೇಡ ಎಂದು ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಎಂ.ಬಿ.ನಾಗಣ್ಣಗೌಡ ಒತ್ತಾಯಿಸಿದರು.</p>.<p>ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿರುವ ಕೇಂದ್ರ ಪ್ರಯೋಗಾಲಯದ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸಿರುವುದು ಜನವಿರೋಧಿ ಕ್ರಮವಾಗಿದ್ದು ಬಡ ರೋಗಿಗಳಿಗೆ ಆರ್ಥಿಕ ಹೊರೆಯಾಗಲಿದೆ ಎಂದರು.</p>.<p>ಕ್ಷೇತ್ರದ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಕೇಂದ್ರ ಪ್ರಯೋಗಾಲಯದ ನಿರ್ವಹಣೆಯು ಸರ್ಕಾರಿ ವ್ಯವಸ್ಥೆಯಲ್ಲಿ ಮುಂದುವರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಹಿಂದೆ ಮೆಡಿಕಲ್ ಕಾಲೇಜಿಗೆ ಸೇರಿದ ಪ್ರಯೋಗಾಲಯದ ನಿರ್ವಹಣೆಯನ್ನು ಕಾಲೇಜಿನಿಂದಲೇ ನಿರ್ವಹಿಸಲಾಗುತಿತ್ತು. ವಾರ್ಷಿಕ ₹ 3 ಕೋಟಿ ವ್ಯಯವಾಗುತ್ತಿತ್ತು. ಎಲ್ಲ ಬಗೆಯ ಕಾಯಿಲೆಗಳ ತಪಾಸಣೆ ನಡೆಯುತ್ತಿತ್ತು. ಖಾಸಗಿ ಲ್ಯಾಬೊರೇಟರಿಗಳ ಲಾಬಿಗೆ ಮಣಿದಿರುವ ಸಿಮ್ಸ್ ಆಡಳಿತ ಪ್ರಯೋಗಾಲಯದ ನಿರ್ವಹಣೆಯನ್ನು ಮ್ಯಾಕ್ಸಿಂ ಬಯೋಮೆಡಿಕಲ್ಸ್ ಎಂಬ ಏಜೆನ್ಸಿಗೆ ವಹಿಸುವ ತೀರ್ಮಾನ ಮಾಡಿದ್ದಾರೆ.</p>.<p>ಈ ಮೂಲಕ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಯತ್ನ ನಡೆದಿದೆ. ಇದರಿಂದ ವಾರ್ಷಿಕ ಹೆಚ್ಚುವರಿ ಹೊರೆ ಬೀಳಲಿದ್ದು ಆಸ್ಪತ್ರೆಯಲ್ಲಿ ತಪಾಸಣಾ ದರ ದುಬಾರಿಯಾಗಲಿದೆ ಎಂದರು.</p>.<p>ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದಿರುವ ಮಾಹಿತಿಯಲ್ಲಿ ಪ್ರಯೋಗಾಲಯದ ಯಂತ್ರಗಳೆಲ್ಲವೂ ಸುಸ್ಥಿತಿಯಲ್ಲಿರುವುದು ತಿಳಿದುಬಂದಿದೆ. ಹೀಗಿರುವಾಗ ಖಾಸಗಿಯವರಿಗೆ ಪ್ರಯೋಗಾಲಯದ ನಿರ್ವಹಣೆಯ ಗುತ್ತಿಗೆ ನೀಡುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.</p>.<p>ಸಿಮ್ಸ್ ನಿರ್ದೇಶಕರ ಅವಧಿಯಲ್ಲಿ ನಿಯಮಬಾಹಿರವಾಗಿ ನಡೆಸಿರುವ ಖರೀದಿ, ಕಾಮಗಾರಿಗಳು, ಹುದ್ದೆಗಳ ಬಡ್ತಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಬೇಕು. ಪ್ರಯೋಗಾಲಯದ ನಿರ್ವಹಣೆಯನ್ನು ಖಾಸಗಿ ಏಜೆನ್ಸಿಗೆ ವಹಿಸಿರುವ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಈ ಸಂದರ್ಭ ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿಯ ಎಸ್.ಕೆ.ರಾಜೂಗೌಡ, ರಾಜೇಂದ್ರ ಸಿಂಗ್ ಬಾಬು, ಕರ್ನಾಟಕ ರಾಷ್ಟ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಶಿವದೇವಪ್ಪ, ಎಸ್.ಸಿದ್ದಯ್ಯ, ಚಿನ್ನಸ್ವಾಮಿ, ಮಾದೇಶ್, ರೈತಸಂಘದ ಮಲ್ಲೇಶ್, ಮಂಜು ಕೊತ್ತಲವಾಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-37-934451391</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ನಗರದ ಯಡಬೆಟ್ಟದಲ್ಲಿರುವ ಸರ್ಕಾರಿ ಮೆಡಿಕಲ್ ಕಾಲೇಜಿನ ಕೇಂದ್ರ ಪ್ರಯೋಗಾಲಯದ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ವಹಿಸುವುದು ಬೇಡ ಎಂದು ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಎಂ.ಬಿ.ನಾಗಣ್ಣಗೌಡ ಒತ್ತಾಯಿಸಿದರು.</p>.<p>ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿರುವ ಕೇಂದ್ರ ಪ್ರಯೋಗಾಲಯದ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸಿರುವುದು ಜನವಿರೋಧಿ ಕ್ರಮವಾಗಿದ್ದು ಬಡ ರೋಗಿಗಳಿಗೆ ಆರ್ಥಿಕ ಹೊರೆಯಾಗಲಿದೆ ಎಂದರು.</p>.<p>ಕ್ಷೇತ್ರದ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಕೇಂದ್ರ ಪ್ರಯೋಗಾಲಯದ ನಿರ್ವಹಣೆಯು ಸರ್ಕಾರಿ ವ್ಯವಸ್ಥೆಯಲ್ಲಿ ಮುಂದುವರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಹಿಂದೆ ಮೆಡಿಕಲ್ ಕಾಲೇಜಿಗೆ ಸೇರಿದ ಪ್ರಯೋಗಾಲಯದ ನಿರ್ವಹಣೆಯನ್ನು ಕಾಲೇಜಿನಿಂದಲೇ ನಿರ್ವಹಿಸಲಾಗುತಿತ್ತು. ವಾರ್ಷಿಕ ₹ 3 ಕೋಟಿ ವ್ಯಯವಾಗುತ್ತಿತ್ತು. ಎಲ್ಲ ಬಗೆಯ ಕಾಯಿಲೆಗಳ ತಪಾಸಣೆ ನಡೆಯುತ್ತಿತ್ತು. ಖಾಸಗಿ ಲ್ಯಾಬೊರೇಟರಿಗಳ ಲಾಬಿಗೆ ಮಣಿದಿರುವ ಸಿಮ್ಸ್ ಆಡಳಿತ ಪ್ರಯೋಗಾಲಯದ ನಿರ್ವಹಣೆಯನ್ನು ಮ್ಯಾಕ್ಸಿಂ ಬಯೋಮೆಡಿಕಲ್ಸ್ ಎಂಬ ಏಜೆನ್ಸಿಗೆ ವಹಿಸುವ ತೀರ್ಮಾನ ಮಾಡಿದ್ದಾರೆ.</p>.<p>ಈ ಮೂಲಕ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಯತ್ನ ನಡೆದಿದೆ. ಇದರಿಂದ ವಾರ್ಷಿಕ ಹೆಚ್ಚುವರಿ ಹೊರೆ ಬೀಳಲಿದ್ದು ಆಸ್ಪತ್ರೆಯಲ್ಲಿ ತಪಾಸಣಾ ದರ ದುಬಾರಿಯಾಗಲಿದೆ ಎಂದರು.</p>.<p>ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದಿರುವ ಮಾಹಿತಿಯಲ್ಲಿ ಪ್ರಯೋಗಾಲಯದ ಯಂತ್ರಗಳೆಲ್ಲವೂ ಸುಸ್ಥಿತಿಯಲ್ಲಿರುವುದು ತಿಳಿದುಬಂದಿದೆ. ಹೀಗಿರುವಾಗ ಖಾಸಗಿಯವರಿಗೆ ಪ್ರಯೋಗಾಲಯದ ನಿರ್ವಹಣೆಯ ಗುತ್ತಿಗೆ ನೀಡುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.</p>.<p>ಸಿಮ್ಸ್ ನಿರ್ದೇಶಕರ ಅವಧಿಯಲ್ಲಿ ನಿಯಮಬಾಹಿರವಾಗಿ ನಡೆಸಿರುವ ಖರೀದಿ, ಕಾಮಗಾರಿಗಳು, ಹುದ್ದೆಗಳ ಬಡ್ತಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಬೇಕು. ಪ್ರಯೋಗಾಲಯದ ನಿರ್ವಹಣೆಯನ್ನು ಖಾಸಗಿ ಏಜೆನ್ಸಿಗೆ ವಹಿಸಿರುವ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಈ ಸಂದರ್ಭ ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿಯ ಎಸ್.ಕೆ.ರಾಜೂಗೌಡ, ರಾಜೇಂದ್ರ ಸಿಂಗ್ ಬಾಬು, ಕರ್ನಾಟಕ ರಾಷ್ಟ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಶಿವದೇವಪ್ಪ, ಎಸ್.ಸಿದ್ದಯ್ಯ, ಚಿನ್ನಸ್ವಾಮಿ, ಮಾದೇಶ್, ರೈತಸಂಘದ ಮಲ್ಲೇಶ್, ಮಂಜು ಕೊತ್ತಲವಾಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-37-934451391</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>