<p><strong>ಚಾಮರಾಜನಗರ</strong>: ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆರಕಣಾಂಬಿ ಹುಂಡಿಯಲ್ಲಿ ಗ್ರಾಮಸ್ಥರ ವಿರೋಧದ ಮಧ್ಯೆಯೂ ಮದ್ಯ ಮಾರಾಟ ಮಳಿಗೆ ತೆರೆಯಲು ಸ್ಥಳೀಯ ಪಂಚಾಯಿತಿ ಅಧಿಕಾರಿಗಳು ಜನರಲ್ ಲೈಸೆನ್ಸ್ ನೀಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶಶಿಕುಮಾರ್ ಆರೋಪಿಸಿದರು.</p>.<p>ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮದ್ಯದಂಗಡಿ ತೆರೆಯಲು ಉದ್ದೇಶಿಸಿರುವ ಜಾಗದಲ್ಲಿ ಜನವಸತಿ ಪ್ರದೇಶ, ಸಮೀಪದಲ್ಲಿ ದೇವಸ್ಥಾನ ಇದೆ. ಪ್ರತಿನಿತ್ಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಾಗಿ ಓಡಾಡುತ್ತಾರೆ. ಈ ಭಾಗದಲ್ಲಿ ಮದ್ಯದಂಗಡಿ ಶುರು ಮಾಡಿದರೆ ಸಾರ್ವಜನಿಕರಿಗೆ ತೊಂದರೆಯಲಾಗಲಿದೆ, ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿ ಮಹಿಳೆಯರು ನಿರ್ಭೀತಿಯಿಂದ ಓಡಾಡಲು ಸಾಧ್ಯವಾಗುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಈಗಾಗಲೇ ತೆರಕಣಾಂಬಿಯಲ್ಲಿ ಹಲವು ಬಾರ್ಗಳಿದ್ದು ಮದ್ಯವ್ಯಸನಿಗಳ ಹಾವಳಿ ವಿಪರೀತವಾಗಿದೆ, ಮದ್ಯಸೇವಿಸಿ ಬಾಟಲಿ ಹಾಗೂ ಪೌಚ್ಗಳನ್ನು ರೈತರ ಕೃಷಿ ಭೂಮಿಗೆ ಬಿಸಾಡಲಾಗುತ್ತಿದ್ದು ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗಿದೆ. ಹೀಗಿದ್ದರೂ ಮತ್ತೊಂದು ಮದ್ಯದಂಗಡಿ ತೆರೆಯಲು ಅನುಮತಿ ನೀಡಿರುವುದು ಬೇಸರದ ಸಂಗತಿ ಎಂದರು.</p>.<p>ವರ್ಷದ ಹಿಂದೆ ತೆರಕಣಾಂಬಿ ಗ್ರಾಮ ಪಂಚಾಯಿತಿಯಲ್ಲಿ ಮದ್ಯದಗಂಡಿಗೆ ಅನುಮತಿ ನೀಡಲು ಗ್ರಾಮಸಭೆಯಲ್ಲಿ ನಿರಾಕರಿಸಲಾಗಿತ್ತು. ಪಂಚಾಯಿತಿ ಅಧ್ಯಕ್ಷರ ಹಾಗೂ ಸದಸ್ಯರ ಅವಧಿ ಮುಗಿದ ಬಳಿಕ ಪಿಡಿಒ ಮದ್ಯದ ಅಂಗಡಿಗೆ ಜನರಲ್ ಲೈಸೆನ್ಸ್ ಹಾಗೂ ಎನ್ಒಸಿ ನೀಡಿದ್ದು ಖಂಡನೀಯ. ಈ ಸಂಬಂಧ ಅಬಕಾರಿ ಅಧಿಕಾರಿ ಹಾಗೂ ಇನ್ಸ್ಪೆಕ್ಟರ್ಗೆ ಮನವಿ ಮಾಡಿದರೂ ಸ್ಥಳ ಮಹಜರು ಮಾಡುವಾಗ ದೂರುದಾರರನ್ನು ಸಂಪರ್ಕಿಸದೆ ಏಕಪಕ್ಷೀಯವಾಗಿ ನಡೆಸಿ ವರದಿ ಸಲ್ಲಿಸಲಾಗಿದೆ.</p>.<p>ಗ್ರಾಮಸ್ಥರ ಸುರಕ್ಷತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಜಿಲ್ಲಾಧಿಕಾರಿ ಮಧ್ಯೆ ಪ್ರವೇಶಿಸಿ ಹೊಸ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು. ನೀಡಿದರೆ ಗ್ರಾಮಸ್ಥರೆಲ್ಲರೂ ಸೇರಿ ತೀವ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಗ್ರಾಮದ ಮುಖಂಢರಾದ ಸುರೇಶ್, ನಂದೀಶ್, ಪ್ರದೀಪ್, ವಿನೋದ್, ಮಂಜು, ಪ್ರತಾಪ್, ಶಂಭು, ಜಗದೀಶ್, ಮನೋಜ್, ಅಶೋಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-37-1942377330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆರಕಣಾಂಬಿ ಹುಂಡಿಯಲ್ಲಿ ಗ್ರಾಮಸ್ಥರ ವಿರೋಧದ ಮಧ್ಯೆಯೂ ಮದ್ಯ ಮಾರಾಟ ಮಳಿಗೆ ತೆರೆಯಲು ಸ್ಥಳೀಯ ಪಂಚಾಯಿತಿ ಅಧಿಕಾರಿಗಳು ಜನರಲ್ ಲೈಸೆನ್ಸ್ ನೀಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶಶಿಕುಮಾರ್ ಆರೋಪಿಸಿದರು.</p>.<p>ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮದ್ಯದಂಗಡಿ ತೆರೆಯಲು ಉದ್ದೇಶಿಸಿರುವ ಜಾಗದಲ್ಲಿ ಜನವಸತಿ ಪ್ರದೇಶ, ಸಮೀಪದಲ್ಲಿ ದೇವಸ್ಥಾನ ಇದೆ. ಪ್ರತಿನಿತ್ಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಾಗಿ ಓಡಾಡುತ್ತಾರೆ. ಈ ಭಾಗದಲ್ಲಿ ಮದ್ಯದಂಗಡಿ ಶುರು ಮಾಡಿದರೆ ಸಾರ್ವಜನಿಕರಿಗೆ ತೊಂದರೆಯಲಾಗಲಿದೆ, ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿ ಮಹಿಳೆಯರು ನಿರ್ಭೀತಿಯಿಂದ ಓಡಾಡಲು ಸಾಧ್ಯವಾಗುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಈಗಾಗಲೇ ತೆರಕಣಾಂಬಿಯಲ್ಲಿ ಹಲವು ಬಾರ್ಗಳಿದ್ದು ಮದ್ಯವ್ಯಸನಿಗಳ ಹಾವಳಿ ವಿಪರೀತವಾಗಿದೆ, ಮದ್ಯಸೇವಿಸಿ ಬಾಟಲಿ ಹಾಗೂ ಪೌಚ್ಗಳನ್ನು ರೈತರ ಕೃಷಿ ಭೂಮಿಗೆ ಬಿಸಾಡಲಾಗುತ್ತಿದ್ದು ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗಿದೆ. ಹೀಗಿದ್ದರೂ ಮತ್ತೊಂದು ಮದ್ಯದಂಗಡಿ ತೆರೆಯಲು ಅನುಮತಿ ನೀಡಿರುವುದು ಬೇಸರದ ಸಂಗತಿ ಎಂದರು.</p>.<p>ವರ್ಷದ ಹಿಂದೆ ತೆರಕಣಾಂಬಿ ಗ್ರಾಮ ಪಂಚಾಯಿತಿಯಲ್ಲಿ ಮದ್ಯದಗಂಡಿಗೆ ಅನುಮತಿ ನೀಡಲು ಗ್ರಾಮಸಭೆಯಲ್ಲಿ ನಿರಾಕರಿಸಲಾಗಿತ್ತು. ಪಂಚಾಯಿತಿ ಅಧ್ಯಕ್ಷರ ಹಾಗೂ ಸದಸ್ಯರ ಅವಧಿ ಮುಗಿದ ಬಳಿಕ ಪಿಡಿಒ ಮದ್ಯದ ಅಂಗಡಿಗೆ ಜನರಲ್ ಲೈಸೆನ್ಸ್ ಹಾಗೂ ಎನ್ಒಸಿ ನೀಡಿದ್ದು ಖಂಡನೀಯ. ಈ ಸಂಬಂಧ ಅಬಕಾರಿ ಅಧಿಕಾರಿ ಹಾಗೂ ಇನ್ಸ್ಪೆಕ್ಟರ್ಗೆ ಮನವಿ ಮಾಡಿದರೂ ಸ್ಥಳ ಮಹಜರು ಮಾಡುವಾಗ ದೂರುದಾರರನ್ನು ಸಂಪರ್ಕಿಸದೆ ಏಕಪಕ್ಷೀಯವಾಗಿ ನಡೆಸಿ ವರದಿ ಸಲ್ಲಿಸಲಾಗಿದೆ.</p>.<p>ಗ್ರಾಮಸ್ಥರ ಸುರಕ್ಷತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಜಿಲ್ಲಾಧಿಕಾರಿ ಮಧ್ಯೆ ಪ್ರವೇಶಿಸಿ ಹೊಸ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು. ನೀಡಿದರೆ ಗ್ರಾಮಸ್ಥರೆಲ್ಲರೂ ಸೇರಿ ತೀವ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಗ್ರಾಮದ ಮುಖಂಢರಾದ ಸುರೇಶ್, ನಂದೀಶ್, ಪ್ರದೀಪ್, ವಿನೋದ್, ಮಂಜು, ಪ್ರತಾಪ್, ಶಂಭು, ಜಗದೀಶ್, ಮನೋಜ್, ಅಶೋಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-37-1942377330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>