<p><strong>ಚಾಮರಾಜನಗರ:</strong> ಧೂಮಪಾನ ಮತ್ತು ತಂಬಾಕು ಉತ್ಪನ್ನಗಳನ್ನು ತ್ಯಜಿಸಿ ಆರೋಗ್ಯ ಕಾಪಾಡಿಕೊಳ್ಳುವ ಮೂಲಕ ತಂಬಾಕು ಮುಕ್ತ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಕರೆ ನೀಡಿದರು.</p>.<p>ಮೈಸೂರಿನ ಕ್ಲಿಯರ್ಮೆಡಿ ರೇಡಿಯಂಟ್ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ರೆಡ್ ಕ್ರಾಸ್, ರೋಟರಿ ಕ್ಲಬ್ ಅಸೋಸಿಯೇಷನ್ ಹಾಗೂ ಬಸವ ರಾಜೇಂದ್ರ ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ನಗರದ ಚಾಮರಾಜೇಶ್ವರ ದೇವಸ್ಥಾನದಿಂದ ಜಿಲ್ಲಾಡಳಿತ ಭವನದವರೆಗೆ ಹಮ್ಮಿಕೊಂಡಿದ್ದ ವಾಕಥಾನ್ಗೆ ಚಾಲನೆ ನೀಡಿ ಮಾತನಾಡಿದರು.</p>.<p>ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಗಂಗಾಧರ್ ಮಾತನಾಡಿ, ತಂಬಾಕು ಸೇವನೆಯಿಂದ ಜಗತ್ತಿನಲ್ಲಿ ಕೋಟ್ಯಂತರ ಮಂದಿ ಮೃತಪಟ್ಟಿದ್ದಾರೆ. ಶಾಲಾ-ಕಾಲೇಜು ಹಂತದಲ್ಲಿಯೇ ತಂಬಾಕು ಸೇವನೆಯತ್ತ ವಿದ್ಯಾರ್ಥಿಗಳು ಆಕರ್ಷಿತರಾಗುತ್ತಿರುವುದು ಆತಂಕದ ವಿಚಾರ. ಈಚೆಗೆ ಗಂಡು–ಹೆಣ್ಣು ಬೇಧವಿಲ್ಲದೆ ಎಲ್ಲರೂ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ತಂಬಾಕು ಸೇವನೆ ಮಾಡಿದವರ ಪಕ್ಕದಲ್ಲಿದ್ದರೂ ಅಕ್ಕಪಕ್ಕದವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಚಿದಂಬರಂ ಮಾತನಾಡಿ, ತಂಬಾಕು ಸೇವನೆಯಿಂದ ಕ್ಯಾನ್ಸರ್ನಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಆರಂಭದಲ್ಲಿ ಮೋಜಿಗಾಗಿ ಆರಂಭವಾಗುವ ಧೂಮಪಾನ ಬಳಿಕ ವ್ಯಸನವಾಗಿ ಜೀವನವನ್ನೇ ಬಲಿ ತೆಗೆದುಕೊಳ್ಳುತ್ತದೆ. ಜೀವಕ್ಕೆ ಮಾರಕವಾಗಿರುವ ತಂಬಾಕು ಉತ್ಪನ್ನಗಳಿಂದ ದೂರವಿರಬೇಕು ಎಂದರು.</p>.<p>ಬಸವ ರಾಜೇಂದ್ರ ಆಸ್ಪತ್ರೆಯ ಡಾ.ಬಸವರಾಜೇಂದ್ರ ಮಾತನಾಡಿ, ರಾಜ್ಯದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಮಾರಾಟವನ್ನು ನಿರ್ಬಂಧಿಸುವ ದೃಢ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.</p>.<p>ಡಾ.ರವಿ ಮಾತನಾಡಿ ‘ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಬಗ್ಗೆ ಉದ್ಯಮಗಳ ಮೋಸದ ತಂತ್ರಗಳನ್ನು ಬಯಲಿಗೆಳೆಯುವುದು, ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳು ಹಾಗೂ ಕ್ಯಾನ್ಸರ್ ತಡೆಗಟ್ಟುವಿಕೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಾಕಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ವಾಕಥಾನ್ನಲ್ಲಿ ಡಾ.ಶ್ವೇತಾ, ಡಾ.ರಕ್ಷಿತ್ ಶೃಂಗೇರಿ, ರೋಟರಿ ಅಧ್ಯಕ್ಷ ಕಾಗಲವಾಡಿ ಚಂದ್ರು, ಮಾಜಿ ಅಧ್ಯಕ್ಷ ಶ್ರೀನಿವಾಸನ್, ಸಿಮ್ಸ್ ಪ್ರಾಂಶುಪಾಲ ಡಾ.ಅಜಯ್, ಐಟಿಐ ಕಾಲೇಜು ಪ್ರಾಂಶುಪಾಲ ಡಾ.ರಂಗಸ್ವಾಮಿ,ಕ್ಲಿಯರ್ಮೆಡಿ ರೇಡಿಯಂಟ್ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ವಿಭಾಗೀಯ ಮುಖ್ಯಸ್ಥ ರವಿಕುಮಾರ್, ವ್ಯವಹಾರ ಮುಖ್ಯಸ್ಥ ಚಲಂ, ಮಾರ್ಕೆಟಿಂಗ್ ಮ್ಯಾನೇಜರ್ ಸುನೀಲ್ ಕುಮಾರ್, ಮೋಹನ್ ಕುಮಾರ್, ನಿತಿನ್, ವಿಮಲ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-37-777535088</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಧೂಮಪಾನ ಮತ್ತು ತಂಬಾಕು ಉತ್ಪನ್ನಗಳನ್ನು ತ್ಯಜಿಸಿ ಆರೋಗ್ಯ ಕಾಪಾಡಿಕೊಳ್ಳುವ ಮೂಲಕ ತಂಬಾಕು ಮುಕ್ತ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಕರೆ ನೀಡಿದರು.</p>.<p>ಮೈಸೂರಿನ ಕ್ಲಿಯರ್ಮೆಡಿ ರೇಡಿಯಂಟ್ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ರೆಡ್ ಕ್ರಾಸ್, ರೋಟರಿ ಕ್ಲಬ್ ಅಸೋಸಿಯೇಷನ್ ಹಾಗೂ ಬಸವ ರಾಜೇಂದ್ರ ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ನಗರದ ಚಾಮರಾಜೇಶ್ವರ ದೇವಸ್ಥಾನದಿಂದ ಜಿಲ್ಲಾಡಳಿತ ಭವನದವರೆಗೆ ಹಮ್ಮಿಕೊಂಡಿದ್ದ ವಾಕಥಾನ್ಗೆ ಚಾಲನೆ ನೀಡಿ ಮಾತನಾಡಿದರು.</p>.<p>ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಗಂಗಾಧರ್ ಮಾತನಾಡಿ, ತಂಬಾಕು ಸೇವನೆಯಿಂದ ಜಗತ್ತಿನಲ್ಲಿ ಕೋಟ್ಯಂತರ ಮಂದಿ ಮೃತಪಟ್ಟಿದ್ದಾರೆ. ಶಾಲಾ-ಕಾಲೇಜು ಹಂತದಲ್ಲಿಯೇ ತಂಬಾಕು ಸೇವನೆಯತ್ತ ವಿದ್ಯಾರ್ಥಿಗಳು ಆಕರ್ಷಿತರಾಗುತ್ತಿರುವುದು ಆತಂಕದ ವಿಚಾರ. ಈಚೆಗೆ ಗಂಡು–ಹೆಣ್ಣು ಬೇಧವಿಲ್ಲದೆ ಎಲ್ಲರೂ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ತಂಬಾಕು ಸೇವನೆ ಮಾಡಿದವರ ಪಕ್ಕದಲ್ಲಿದ್ದರೂ ಅಕ್ಕಪಕ್ಕದವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಚಿದಂಬರಂ ಮಾತನಾಡಿ, ತಂಬಾಕು ಸೇವನೆಯಿಂದ ಕ್ಯಾನ್ಸರ್ನಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಆರಂಭದಲ್ಲಿ ಮೋಜಿಗಾಗಿ ಆರಂಭವಾಗುವ ಧೂಮಪಾನ ಬಳಿಕ ವ್ಯಸನವಾಗಿ ಜೀವನವನ್ನೇ ಬಲಿ ತೆಗೆದುಕೊಳ್ಳುತ್ತದೆ. ಜೀವಕ್ಕೆ ಮಾರಕವಾಗಿರುವ ತಂಬಾಕು ಉತ್ಪನ್ನಗಳಿಂದ ದೂರವಿರಬೇಕು ಎಂದರು.</p>.<p>ಬಸವ ರಾಜೇಂದ್ರ ಆಸ್ಪತ್ರೆಯ ಡಾ.ಬಸವರಾಜೇಂದ್ರ ಮಾತನಾಡಿ, ರಾಜ್ಯದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಮಾರಾಟವನ್ನು ನಿರ್ಬಂಧಿಸುವ ದೃಢ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.</p>.<p>ಡಾ.ರವಿ ಮಾತನಾಡಿ ‘ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಬಗ್ಗೆ ಉದ್ಯಮಗಳ ಮೋಸದ ತಂತ್ರಗಳನ್ನು ಬಯಲಿಗೆಳೆಯುವುದು, ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳು ಹಾಗೂ ಕ್ಯಾನ್ಸರ್ ತಡೆಗಟ್ಟುವಿಕೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಾಕಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ವಾಕಥಾನ್ನಲ್ಲಿ ಡಾ.ಶ್ವೇತಾ, ಡಾ.ರಕ್ಷಿತ್ ಶೃಂಗೇರಿ, ರೋಟರಿ ಅಧ್ಯಕ್ಷ ಕಾಗಲವಾಡಿ ಚಂದ್ರು, ಮಾಜಿ ಅಧ್ಯಕ್ಷ ಶ್ರೀನಿವಾಸನ್, ಸಿಮ್ಸ್ ಪ್ರಾಂಶುಪಾಲ ಡಾ.ಅಜಯ್, ಐಟಿಐ ಕಾಲೇಜು ಪ್ರಾಂಶುಪಾಲ ಡಾ.ರಂಗಸ್ವಾಮಿ,ಕ್ಲಿಯರ್ಮೆಡಿ ರೇಡಿಯಂಟ್ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ವಿಭಾಗೀಯ ಮುಖ್ಯಸ್ಥ ರವಿಕುಮಾರ್, ವ್ಯವಹಾರ ಮುಖ್ಯಸ್ಥ ಚಲಂ, ಮಾರ್ಕೆಟಿಂಗ್ ಮ್ಯಾನೇಜರ್ ಸುನೀಲ್ ಕುಮಾರ್, ಮೋಹನ್ ಕುಮಾರ್, ನಿತಿನ್, ವಿಮಲ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-37-777535088</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>