<p><strong>ಚಾಮರಾಜನಗರ:</strong> ನಗರದ ಸತ್ಯಮಂಗಲ ರಸ್ತೆಯ ಸಿದ್ಧಾರ್ಥ ಚಿತ್ರಮಂದಿರದ ಬಳಿ ಶನಿವಾರ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ಹೋಗುತ್ತಿದ್ದ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮಧ್ಯಾಹ್ನ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ತಾಲ್ಲೂಕಿನ ಬ್ಯಾಡಮೂಡ್ಲು ಗ್ರಾಮದ ಮಣಿಕಂಠ (24) ಹಾಗೂ ಹೊಂಗನೂರು ಗ್ರಾಮದ ನಾಕಶೆಟ್ಟಿ ಎಂಬುವವರ ಮಗ ನಟರಾಜು (24) ಮೃತಪಟ್ಟವರು.</p>.<p>ಮಣಿಕಂಠ ಹಾಗೂ ನಟರಾಜ ಅವರು ಸ್ನೇಹಿತರಾಗಿದ್ದು, ಪಲ್ಸರ್ ಬೈಕ್ನಲ್ಲಿ ಚಾಮರಾಜನಗರದಿಂದ ಸೋಮವಾರಪೇಟೆಯ ಕಡೆಗೆ ಹೋಗುತ್ತಿದ್ದರು. ಈ ವೇಳೆ ಟಿಪ್ಪರ್ ಒಂದು ಹಿಂಬದಿಯಿಂದ ಡಿಕ್ಕಿ ಹೊಡೆದು, ಯುವಕರ ಮೇಲೆ ಹರಿದಿದೆ. ಇಬ್ಬರ ಮುಖ ಕೂಡ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಯುವಕರು ಬೈಕ್ನಲ್ಲಿ ಊಟದ ಪಾರ್ಸೆಲ್ ತೆಗೆದುಕೊಂಡು ಹೋಗುತ್ತಿದ್ದರು. ಅಪಘಾತದ ಬಳಿಕ ಇಬ್ಬರ ಮೃತದೇಹ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ಊಟ ಚೆಲ್ಲಾಪಿಲ್ಲಿಯಾಗಿತ್ತು.</p>.<p>ಚಾಲಕ ಟಿಪ್ಪರ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ನಗರದ ಸತ್ಯಮಂಗಲ ರಸ್ತೆಯ ಸಿದ್ಧಾರ್ಥ ಚಿತ್ರಮಂದಿರದ ಬಳಿ ಶನಿವಾರ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ಹೋಗುತ್ತಿದ್ದ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮಧ್ಯಾಹ್ನ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ತಾಲ್ಲೂಕಿನ ಬ್ಯಾಡಮೂಡ್ಲು ಗ್ರಾಮದ ಮಣಿಕಂಠ (24) ಹಾಗೂ ಹೊಂಗನೂರು ಗ್ರಾಮದ ನಾಕಶೆಟ್ಟಿ ಎಂಬುವವರ ಮಗ ನಟರಾಜು (24) ಮೃತಪಟ್ಟವರು.</p>.<p>ಮಣಿಕಂಠ ಹಾಗೂ ನಟರಾಜ ಅವರು ಸ್ನೇಹಿತರಾಗಿದ್ದು, ಪಲ್ಸರ್ ಬೈಕ್ನಲ್ಲಿ ಚಾಮರಾಜನಗರದಿಂದ ಸೋಮವಾರಪೇಟೆಯ ಕಡೆಗೆ ಹೋಗುತ್ತಿದ್ದರು. ಈ ವೇಳೆ ಟಿಪ್ಪರ್ ಒಂದು ಹಿಂಬದಿಯಿಂದ ಡಿಕ್ಕಿ ಹೊಡೆದು, ಯುವಕರ ಮೇಲೆ ಹರಿದಿದೆ. ಇಬ್ಬರ ಮುಖ ಕೂಡ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಯುವಕರು ಬೈಕ್ನಲ್ಲಿ ಊಟದ ಪಾರ್ಸೆಲ್ ತೆಗೆದುಕೊಂಡು ಹೋಗುತ್ತಿದ್ದರು. ಅಪಘಾತದ ಬಳಿಕ ಇಬ್ಬರ ಮೃತದೇಹ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ಊಟ ಚೆಲ್ಲಾಪಿಲ್ಲಿಯಾಗಿತ್ತು.</p>.<p>ಚಾಲಕ ಟಿಪ್ಪರ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>