<p><strong>ಮಹದೇಶ್ವರ ಬೆಟ್ಟ</strong>: ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಾದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವವು ಮಾ.27ರಿಂದ 30ರ ವರೆಗೆ ನಡೆಯಲಿದೆ.</p>.<p>ಮಹೋತ್ಸವದ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ, ನೆರೆಯ ತಮಿಳುನಾಡಿನಿಂದ ಕಾಲ್ನಡಿಗೆಯಲ್ಲಿ ಸಾವಿರಾರು ಭಕ್ತರು ಮಾದಪ್ಪನ ಸನ್ನಿಧಿಗೆ ಬರುತ್ತಿದ್ದಾರೆ. ಮಂಗಳವಾರ ಸಂಜೆ ಬಂದವರಿಗೆ ರಂಗಮಂದಿರದ ಆವರಣ ಹಾಗೂ ಅಕ್ಕಪಕ್ಕದಲ್ಲಿ ಉಳಿಯಲು ವ್ಯವಸ್ಥೆ ಕಲ್ಪಿಸಲಾಗಿದೆ.</p>.<p>ಗುರುವಾರ ಜಾತ್ರೆ ಪ್ರಾರಂಭವಾಗಲಿದ್ದು, ಶುಕ್ರವಾರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಜರುಗಲಿದೆ. ಶನಿವಾರ ಯುಗಾದಿ ಅಮಾವಾಸ್ಯೆಯ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದೆ. ಭಾನುವಾರ ಚಂದ್ರಮಾನ ಯುಗಾದಿ ಪ್ರಯುಕ್ತವಾಗಿ ಬೆಳಿಗ್ಗೆ 8ರಿಂದ 9 ಗಂಟೆಯವರೆಗೆ ನಡೆಯುವ ಶುಭ ಮುಹೂರ್ತದಲ್ಲಿ ಮಾದೇಶ್ವರ ಸ್ವಾಮಿಯ ಮಹಾ ರಥೋತ್ಸವ ನಡೆಯಲಿದೆ.</p>.<p>ವಿದ್ಯುತ್ ದೀಪಾಲಂಕಾರ: ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಸುತ್ತಲೂ ಹಾಗೂ ಕೊಳ್ಳೇಗಾಲಕ್ಕೆ ತೆರಳುವ ಚೆಕ್ ಪೋಸ್ಟ್ನಿಂದ ಪಾಲರ್ಗೆ ತೆರಳುವ ಚೆಕ್ಪೋಸ್ಟ್ ವರೆಗೆ, ಆಡಳಿತ ಕಚೇರಿ, ರಂಗಮಂದಿರದ ಆವರಣದ ಮುಂಭಾಗದ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.</p>.<p>ಪ್ರಾಧಿಕಾರದ ವತಿಯಿಂದ ಕುಡಿಯುವ ನೀರು, ನೆರೆಳಿನ ವ್ಯವಸ್ಥೆ, ನಿರಂತರ ಅನ್ನ ದಾಸೋಹ ಸೇರಿ ಎಲ್ಲ ಬಗೆಯ ಸೌಕರ್ಯ ಕಲ್ಪಿಸಲಾಗಿದೆ.</p>.<p>ಗುರುವಾರ ಯುಗಾದಿ ಜಾತ್ರೆ ಪ್ರಾರಂಭ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಶುಕ್ರವಾರ ಭಾನುವಾರ ನಡೆಯಲಿದೆ ಮಹಾರಥೋತ್ಸವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇಶ್ವರ ಬೆಟ್ಟ</strong>: ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಾದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವವು ಮಾ.27ರಿಂದ 30ರ ವರೆಗೆ ನಡೆಯಲಿದೆ.</p>.<p>ಮಹೋತ್ಸವದ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ, ನೆರೆಯ ತಮಿಳುನಾಡಿನಿಂದ ಕಾಲ್ನಡಿಗೆಯಲ್ಲಿ ಸಾವಿರಾರು ಭಕ್ತರು ಮಾದಪ್ಪನ ಸನ್ನಿಧಿಗೆ ಬರುತ್ತಿದ್ದಾರೆ. ಮಂಗಳವಾರ ಸಂಜೆ ಬಂದವರಿಗೆ ರಂಗಮಂದಿರದ ಆವರಣ ಹಾಗೂ ಅಕ್ಕಪಕ್ಕದಲ್ಲಿ ಉಳಿಯಲು ವ್ಯವಸ್ಥೆ ಕಲ್ಪಿಸಲಾಗಿದೆ.</p>.<p>ಗುರುವಾರ ಜಾತ್ರೆ ಪ್ರಾರಂಭವಾಗಲಿದ್ದು, ಶುಕ್ರವಾರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಜರುಗಲಿದೆ. ಶನಿವಾರ ಯುಗಾದಿ ಅಮಾವಾಸ್ಯೆಯ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದೆ. ಭಾನುವಾರ ಚಂದ್ರಮಾನ ಯುಗಾದಿ ಪ್ರಯುಕ್ತವಾಗಿ ಬೆಳಿಗ್ಗೆ 8ರಿಂದ 9 ಗಂಟೆಯವರೆಗೆ ನಡೆಯುವ ಶುಭ ಮುಹೂರ್ತದಲ್ಲಿ ಮಾದೇಶ್ವರ ಸ್ವಾಮಿಯ ಮಹಾ ರಥೋತ್ಸವ ನಡೆಯಲಿದೆ.</p>.<p>ವಿದ್ಯುತ್ ದೀಪಾಲಂಕಾರ: ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಸುತ್ತಲೂ ಹಾಗೂ ಕೊಳ್ಳೇಗಾಲಕ್ಕೆ ತೆರಳುವ ಚೆಕ್ ಪೋಸ್ಟ್ನಿಂದ ಪಾಲರ್ಗೆ ತೆರಳುವ ಚೆಕ್ಪೋಸ್ಟ್ ವರೆಗೆ, ಆಡಳಿತ ಕಚೇರಿ, ರಂಗಮಂದಿರದ ಆವರಣದ ಮುಂಭಾಗದ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.</p>.<p>ಪ್ರಾಧಿಕಾರದ ವತಿಯಿಂದ ಕುಡಿಯುವ ನೀರು, ನೆರೆಳಿನ ವ್ಯವಸ್ಥೆ, ನಿರಂತರ ಅನ್ನ ದಾಸೋಹ ಸೇರಿ ಎಲ್ಲ ಬಗೆಯ ಸೌಕರ್ಯ ಕಲ್ಪಿಸಲಾಗಿದೆ.</p>.<p>ಗುರುವಾರ ಯುಗಾದಿ ಜಾತ್ರೆ ಪ್ರಾರಂಭ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಶುಕ್ರವಾರ ಭಾನುವಾರ ನಡೆಯಲಿದೆ ಮಹಾರಥೋತ್ಸವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>