<p>ಮೈಸೂರು: ‘ಜಯದೇವ ಹೃದ್ರೋಗ ಸಂಸ್ಥೆ ಯಿಂದ ಚಾಮರಾಜ ನಗರದಲ್ಲಿ ಅಲ್ಲಿನ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾಡಳಿತದ ಸಹಕಾರದಲ್ಲಿ ವಾರಕ್ಕೊಮ್ಮೆ ಸಾರ್ವಜನಿಕರಿಗೆ ಹೃದಯ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲು ಚಿಂತನೆ ನಡೆಸಲಾಗಿದೆ’ ಎಂದು ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಬಿ. ದಿನೇಶ್ ತಿಳಿಸಿದರು.</p>.<p>ಇಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ಗಡಿನಾಡು ಚಾಮರಾಜನಗರದಲ್ಲಿ ಸಣ್ಣ ಹೃದ್ರೋಗ ಘಟಕ ಪ್ರಾರಂಭಿಸಿ, ಹೃದಯ ಸಮಸ್ಯೆ ಇರುವವರಿಗೆ ಪ್ರತಿ ಸೋಮವಾರ ಅಥವಾ ಬುಧವಾರ ತಪಾಸಣೆ ನಡೆಸಲಾ ಗುವುದು. ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ಕರೆಸಲಾಗುವುದು’ ಎಂದರು.</p>.<p>‘ಮಳೆಗಾಲ ಪ್ರಾರಂಭ ಆಗುತ್ತಿರುವುದರಿಂದ ಹೃದಯಾಘಾತದ ಬಗ್ಗೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು. ಉತ್ತರ ಭಾರತದಲ್ಲಿ ಬಿಸಿಲಿನ ಬೇಗೆಗೆ ಶರೀರದಲ್ಲಿ ನೀರಿನ ಕೊರತೆ ಉಂಟಾಗಿ ಬೇರೆ ಬೇರೆ ಕಾಯಿಲೆ ಗಳಿಗೆ ಜನರು ತುತ್ತಾಗುತ್ತಿದ್ದಾರೆ. ಆದ್ದರಿಂದ ಹೃದಯ ರೋಗಿಗಳು ಪ್ರತಿ 3 ತಿಂಗಳಿಗೊಮ್ಮೆ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಯುವಕರಲ್ಲಿ ಹೆಚ್ಚಾಗಿ ಹೃದಯಾಘಾತ ಸಂಭವಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮದ್ಯಪಾನ, ಧೂಮಪಾನ, ಮಾದಕವಸ್ತುಗಳ ಸೇವನೆಯನ್ನು ತ್ಯಜಿಸಿ ಉತ್ತಮವಾದ ಜೀವನಶೈಲಿ ಅಳವಡಿಸಿಕೊಳ್ಳಬೇಕು. ವ್ಯಾಯಾಮ, ನಡಿಗೆಯ ಅಭ್ಯಾಸ ರೂಢಿಸಿಕೊಳ್ಳಬೇಕು’ ಎಂದರು.</p>.<p>‘ಮನೆ ಆಹಾರ ಸೇವಿಸಬೇಕು. ಸೊಪ್ಪು, ಕಾಳು, ತರಕಾರಿಗಳನ್ನು ಹೆಚ್ಚಾಗಿ ಉಪಯೋಗಿಸಬೇಕು. ಬೇಕರಿ ತಿನಿಸುಗಳನ್ನು ತಿನ್ನಬಾರದು. 40 ವರ್ಷ ಮೇಲಿನವರು ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆಗ ಮಾತ್ರ ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ’ ಎಂದರು.</p>.<p>‘ಬೆಂಗಳೂರಿನ ಗೋವಿಂದರಾಜ ನಗರ, ಚರಕ ಆಸ್ಪತ್ರೆಗಳಲ್ಲೂ 3 ತಿಂಗಳಲ್ಲಿ ಜಯದೇವ ಹೃದ್ರೋಗ ಘಟಕ ಪ್ರಾರಂಭಿಸಲಾಗುತ್ತಿದೆ. ಮೈಸೂರಿನಲ್ಲಿ 200 ಹಾಸಿಗೆಗಳ ಹೆಚ್ಚುವರಿ ಕಟ್ಟಡಕ್ಕೆ ಇನ್ನೊಂದು ತಿಂಗಳಲ್ಲಿ ಶಂಕುಸ್ಥಾಪನೆ ನಡೆಸುತ್ತೇವೆ. ಹುಬ್ಬಳ್ಳಿಯಲ್ಲಿ 437 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಆಸ್ಪತ್ರೆಯನ್ನು ಸೆಪ್ಟೆಂಬರ್ನಲ್ಲಿ ಸಾರ್ವಜನಿಕರ ಸೇವೆಗೆ ಸಿದ್ಧವಾಗಲಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-37-1491682374</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಜಯದೇವ ಹೃದ್ರೋಗ ಸಂಸ್ಥೆ ಯಿಂದ ಚಾಮರಾಜ ನಗರದಲ್ಲಿ ಅಲ್ಲಿನ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾಡಳಿತದ ಸಹಕಾರದಲ್ಲಿ ವಾರಕ್ಕೊಮ್ಮೆ ಸಾರ್ವಜನಿಕರಿಗೆ ಹೃದಯ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲು ಚಿಂತನೆ ನಡೆಸಲಾಗಿದೆ’ ಎಂದು ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಬಿ. ದಿನೇಶ್ ತಿಳಿಸಿದರು.</p>.<p>ಇಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ಗಡಿನಾಡು ಚಾಮರಾಜನಗರದಲ್ಲಿ ಸಣ್ಣ ಹೃದ್ರೋಗ ಘಟಕ ಪ್ರಾರಂಭಿಸಿ, ಹೃದಯ ಸಮಸ್ಯೆ ಇರುವವರಿಗೆ ಪ್ರತಿ ಸೋಮವಾರ ಅಥವಾ ಬುಧವಾರ ತಪಾಸಣೆ ನಡೆಸಲಾ ಗುವುದು. ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ಕರೆಸಲಾಗುವುದು’ ಎಂದರು.</p>.<p>‘ಮಳೆಗಾಲ ಪ್ರಾರಂಭ ಆಗುತ್ತಿರುವುದರಿಂದ ಹೃದಯಾಘಾತದ ಬಗ್ಗೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು. ಉತ್ತರ ಭಾರತದಲ್ಲಿ ಬಿಸಿಲಿನ ಬೇಗೆಗೆ ಶರೀರದಲ್ಲಿ ನೀರಿನ ಕೊರತೆ ಉಂಟಾಗಿ ಬೇರೆ ಬೇರೆ ಕಾಯಿಲೆ ಗಳಿಗೆ ಜನರು ತುತ್ತಾಗುತ್ತಿದ್ದಾರೆ. ಆದ್ದರಿಂದ ಹೃದಯ ರೋಗಿಗಳು ಪ್ರತಿ 3 ತಿಂಗಳಿಗೊಮ್ಮೆ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಯುವಕರಲ್ಲಿ ಹೆಚ್ಚಾಗಿ ಹೃದಯಾಘಾತ ಸಂಭವಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮದ್ಯಪಾನ, ಧೂಮಪಾನ, ಮಾದಕವಸ್ತುಗಳ ಸೇವನೆಯನ್ನು ತ್ಯಜಿಸಿ ಉತ್ತಮವಾದ ಜೀವನಶೈಲಿ ಅಳವಡಿಸಿಕೊಳ್ಳಬೇಕು. ವ್ಯಾಯಾಮ, ನಡಿಗೆಯ ಅಭ್ಯಾಸ ರೂಢಿಸಿಕೊಳ್ಳಬೇಕು’ ಎಂದರು.</p>.<p>‘ಮನೆ ಆಹಾರ ಸೇವಿಸಬೇಕು. ಸೊಪ್ಪು, ಕಾಳು, ತರಕಾರಿಗಳನ್ನು ಹೆಚ್ಚಾಗಿ ಉಪಯೋಗಿಸಬೇಕು. ಬೇಕರಿ ತಿನಿಸುಗಳನ್ನು ತಿನ್ನಬಾರದು. 40 ವರ್ಷ ಮೇಲಿನವರು ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆಗ ಮಾತ್ರ ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ’ ಎಂದರು.</p>.<p>‘ಬೆಂಗಳೂರಿನ ಗೋವಿಂದರಾಜ ನಗರ, ಚರಕ ಆಸ್ಪತ್ರೆಗಳಲ್ಲೂ 3 ತಿಂಗಳಲ್ಲಿ ಜಯದೇವ ಹೃದ್ರೋಗ ಘಟಕ ಪ್ರಾರಂಭಿಸಲಾಗುತ್ತಿದೆ. ಮೈಸೂರಿನಲ್ಲಿ 200 ಹಾಸಿಗೆಗಳ ಹೆಚ್ಚುವರಿ ಕಟ್ಟಡಕ್ಕೆ ಇನ್ನೊಂದು ತಿಂಗಳಲ್ಲಿ ಶಂಕುಸ್ಥಾಪನೆ ನಡೆಸುತ್ತೇವೆ. ಹುಬ್ಬಳ್ಳಿಯಲ್ಲಿ 437 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಆಸ್ಪತ್ರೆಯನ್ನು ಸೆಪ್ಟೆಂಬರ್ನಲ್ಲಿ ಸಾರ್ವಜನಿಕರ ಸೇವೆಗೆ ಸಿದ್ಧವಾಗಲಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-37-1491682374</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>