<p><strong>ಮಹದೇಶ್ವರ ಬೆಟ್ಟ:</strong> ‘ಅರಣ್ಯದಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಮೀತಿಮೀರಿದ್ದು, ಜನ–ಜಾನುವಾರುಗಳ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಮಾನವ ಪ್ರಾಣಿ ಸಂಘರ್ಷ ತಡೆಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲವಾಗಿದ್ದಾರೆ’ ಎಂದು ಆರೋಪಿಸಿ ರಾಜ್ಯ ರೈತ ಸಂಘದ ವತಿಯಿಂದ ಮಹದೇಶ್ವರ ಬೆಟ್ಟದ ಕೊಳ್ಳೇಗಾಲ ಚೆಕ್ಪೋಸ್ಟ್ ಬಳಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.</p>.<p>ಅರಣ್ಯ ಇಲಾಖೆಯ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಕಾರರು ಕೆಲಕಾಲ ರಸ್ತೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪೊನ್ನಾಚಿ ಗ್ರಾಮದ ರೈತ ಮಹಿಳೆ ಕಮಲ ಮಾತನಾಡಿ, ‘ಗ್ರಾಮದಲ್ಲಿ ಹಲವು ಭಾರಿ ಆನೆ ಹಾಗೂ ಚಿರತೆಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಭಯದಲ್ಲಿ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ದಿನಗಳ ಹಿಂದಷ್ಟೆ ಚಿರತೆ ದಾಲಿಗೆ ಎಮ್ಮೆ ಬಲಿಯಾಗಿದೆ. ವನ್ಯಜೀವಿಗಳ ಹಾವಳಿ ತಡೆಗೆ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳ ಬೇಜವಾಬ್ದಾರಿಯಿಂದ ಪ್ರಾಣಿಗಳು ನಾಡಿನತ್ತ ಮುಖಮಾಡಿವೆ, ಜಾನುವಾರುಗಳು ಕಾಡುಪ್ರಾಣಿಗಳ ಆಹಾರವಾಗುತ್ತಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅರಣ್ಯ ಇಲಾಖೆಯ ನಿರ್ಲಕ್ಷದಿಂದ ಭಾನುವಾರ ನಾಗಮಲೆಯಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾಗಿದ್ದು, ಮನುಷ್ಯರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಮುಂದುವರಿಸಿದರೆ ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ಅರಣ್ಯದಂಚಿನಲ್ಲಿ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಮಾಡುತ್ತಿರುವ ರೈತರಿಗೆ ಅರಣ್ಯ ಕಾನೂನು ಹಾಗೂ ನಿಯಮಗಳ ಹೆಸರಿನಲ್ಲಿ ಕಿರುಕುಳ ನೀಡಲಾಗುತ್ತಿದೆ. ಅರಣ್ಯವನ್ನು ನಂಬಿ ಜೀವನ ಮಾಡುತ್ತಿರುವ ಸ್ಥಳೀಯರು ಮಾನಸಿಕ ಹಿಂಸೆಯಿಂದ ಬೇಸತ್ತಿದ್ದು, ಊರು ತೊರೆಯುವಂತಹ ಪರಿಸ್ಥಿತಿಗೆ ಬಂದಿದ್ದಾರೆ. ಕಾಡಂಚಿನ ಜನರ ಜೀವನ ಅಸ್ತವ್ಯಸ್ಥವಾಗಿದ್ದು ದನ ಕರು ಹಾಗೂ ಕುರಿಗಳನ್ನು ಮೇಯಿಸಲು ಬಿಡಲು ಹೆದರುವಂತಾಗಿದೆ, ಅರಣ್ಯದೊಳಗೆ ಜಾನುವಾರು ಪ್ರವೇಶ ನಿರ್ಬಂಧಿಸಿದ್ದು ಸ್ಥಳೀಯರ ಮೇಲೆ ಪ್ರಕರಣ ದಾಖಲಿಸುವ, ಮಾನಸಿಕ ಹಿಂಸೆ ನೀಡುವ ಕೆಲಸ ನಡೆಯುತ್ತಿದೆ’ ಎಂದು ಆರೋಪಿಸಿದರು.</p>.<p>‘ಅಧಿಕಾರಿಗಳ ವಿರುದ್ಧ ಮಾತನಾಡಿದರೆ ಸುಳ್ಳು ಆರೋಪಗಳಡಿ ಪ್ರಕರಣ ದಾಖಲು ಮಾಡಲಾಗುತ್ತಿದೆ. ಪ್ರಾಣಿಗಳು ಗ್ರಾಮಕ್ಕೆ ಬಂದು ಜಾನುವಾರು ಹೊತ್ತೊಯ್ದರೆ ಪ್ರಕರಣ ದಾಖಲಿಸ, ಪರಿಹಾರ ನೀಡದ ಅಧಿಕಾರಿಗಳು, ಸಾಕು ನಾಯಿಗಳಿಂದ ಪ್ರಾಣಿಗಳು ಮೃತಪಟ್ಟರೆ ಮಾಲೀಕರನ್ನು ಆರೋಪಿಗಳ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ’ ಎಂದು ರೈತ ಮುಖಂಡ ಚಂಗಡಿ ಕರಿಯಪ್ಪ ವಾಗ್ದಾಳಿ ನಡೆಸಿದರು.</p>.<p>ಕಾಡಂಚಿನಲ್ಲಿರುವ ರೈತರಿಗೆ ಅರಣ್ಯ ಇಲಾಖೆಯಿಂದ ರಕ್ಷಣೆ ಸಿಗಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ಎಸಿಎಫ್ ಮರಿಸ್ವಾಮಿ, ಎಸಿಎಫ್ ಸಂದೀಪ್ ಮತ್ತು ಪೊಲೀಸರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-37-2020292063</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇಶ್ವರ ಬೆಟ್ಟ:</strong> ‘ಅರಣ್ಯದಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಮೀತಿಮೀರಿದ್ದು, ಜನ–ಜಾನುವಾರುಗಳ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಮಾನವ ಪ್ರಾಣಿ ಸಂಘರ್ಷ ತಡೆಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲವಾಗಿದ್ದಾರೆ’ ಎಂದು ಆರೋಪಿಸಿ ರಾಜ್ಯ ರೈತ ಸಂಘದ ವತಿಯಿಂದ ಮಹದೇಶ್ವರ ಬೆಟ್ಟದ ಕೊಳ್ಳೇಗಾಲ ಚೆಕ್ಪೋಸ್ಟ್ ಬಳಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.</p>.<p>ಅರಣ್ಯ ಇಲಾಖೆಯ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಕಾರರು ಕೆಲಕಾಲ ರಸ್ತೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪೊನ್ನಾಚಿ ಗ್ರಾಮದ ರೈತ ಮಹಿಳೆ ಕಮಲ ಮಾತನಾಡಿ, ‘ಗ್ರಾಮದಲ್ಲಿ ಹಲವು ಭಾರಿ ಆನೆ ಹಾಗೂ ಚಿರತೆಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಭಯದಲ್ಲಿ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ದಿನಗಳ ಹಿಂದಷ್ಟೆ ಚಿರತೆ ದಾಲಿಗೆ ಎಮ್ಮೆ ಬಲಿಯಾಗಿದೆ. ವನ್ಯಜೀವಿಗಳ ಹಾವಳಿ ತಡೆಗೆ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳ ಬೇಜವಾಬ್ದಾರಿಯಿಂದ ಪ್ರಾಣಿಗಳು ನಾಡಿನತ್ತ ಮುಖಮಾಡಿವೆ, ಜಾನುವಾರುಗಳು ಕಾಡುಪ್ರಾಣಿಗಳ ಆಹಾರವಾಗುತ್ತಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅರಣ್ಯ ಇಲಾಖೆಯ ನಿರ್ಲಕ್ಷದಿಂದ ಭಾನುವಾರ ನಾಗಮಲೆಯಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾಗಿದ್ದು, ಮನುಷ್ಯರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಮುಂದುವರಿಸಿದರೆ ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ಅರಣ್ಯದಂಚಿನಲ್ಲಿ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಮಾಡುತ್ತಿರುವ ರೈತರಿಗೆ ಅರಣ್ಯ ಕಾನೂನು ಹಾಗೂ ನಿಯಮಗಳ ಹೆಸರಿನಲ್ಲಿ ಕಿರುಕುಳ ನೀಡಲಾಗುತ್ತಿದೆ. ಅರಣ್ಯವನ್ನು ನಂಬಿ ಜೀವನ ಮಾಡುತ್ತಿರುವ ಸ್ಥಳೀಯರು ಮಾನಸಿಕ ಹಿಂಸೆಯಿಂದ ಬೇಸತ್ತಿದ್ದು, ಊರು ತೊರೆಯುವಂತಹ ಪರಿಸ್ಥಿತಿಗೆ ಬಂದಿದ್ದಾರೆ. ಕಾಡಂಚಿನ ಜನರ ಜೀವನ ಅಸ್ತವ್ಯಸ್ಥವಾಗಿದ್ದು ದನ ಕರು ಹಾಗೂ ಕುರಿಗಳನ್ನು ಮೇಯಿಸಲು ಬಿಡಲು ಹೆದರುವಂತಾಗಿದೆ, ಅರಣ್ಯದೊಳಗೆ ಜಾನುವಾರು ಪ್ರವೇಶ ನಿರ್ಬಂಧಿಸಿದ್ದು ಸ್ಥಳೀಯರ ಮೇಲೆ ಪ್ರಕರಣ ದಾಖಲಿಸುವ, ಮಾನಸಿಕ ಹಿಂಸೆ ನೀಡುವ ಕೆಲಸ ನಡೆಯುತ್ತಿದೆ’ ಎಂದು ಆರೋಪಿಸಿದರು.</p>.<p>‘ಅಧಿಕಾರಿಗಳ ವಿರುದ್ಧ ಮಾತನಾಡಿದರೆ ಸುಳ್ಳು ಆರೋಪಗಳಡಿ ಪ್ರಕರಣ ದಾಖಲು ಮಾಡಲಾಗುತ್ತಿದೆ. ಪ್ರಾಣಿಗಳು ಗ್ರಾಮಕ್ಕೆ ಬಂದು ಜಾನುವಾರು ಹೊತ್ತೊಯ್ದರೆ ಪ್ರಕರಣ ದಾಖಲಿಸ, ಪರಿಹಾರ ನೀಡದ ಅಧಿಕಾರಿಗಳು, ಸಾಕು ನಾಯಿಗಳಿಂದ ಪ್ರಾಣಿಗಳು ಮೃತಪಟ್ಟರೆ ಮಾಲೀಕರನ್ನು ಆರೋಪಿಗಳ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ’ ಎಂದು ರೈತ ಮುಖಂಡ ಚಂಗಡಿ ಕರಿಯಪ್ಪ ವಾಗ್ದಾಳಿ ನಡೆಸಿದರು.</p>.<p>ಕಾಡಂಚಿನಲ್ಲಿರುವ ರೈತರಿಗೆ ಅರಣ್ಯ ಇಲಾಖೆಯಿಂದ ರಕ್ಷಣೆ ಸಿಗಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ಎಸಿಎಫ್ ಮರಿಸ್ವಾಮಿ, ಎಸಿಎಫ್ ಸಂದೀಪ್ ಮತ್ತು ಪೊಲೀಸರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-37-2020292063</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>