‘ಶಾಲೆಯಲ್ಲಿ ಸಿನಿಮಾ ನಟ ಅವಿನಾಶ್, ಚಲನಚಿತ್ರ ಗೀತ ರಚನೆಕಾರ ಎಂ.ಎನ್.ವ್ಯಾಸರಾವ್ ಹಾಗೂ ಹಲವು ಲೇಖಕರು ಓದಿದ ಐತಿಹಾಸಿಕ ತಾಣ. ಈಗ ದಿನೇ ದಿನೇ ಮಳೆ, ಬಿಸಿಲಿಗೆ ಸೊರಗುತ್ತಿದೆ. ಮಾಡಿನ ಸುತ್ತಲೂ ಸಸಿಗಳು ಬೆಳೆದು, ಗೋಡೆಗಳ ಶಿಥಿಲಗೊಳ್ಳುತ್ತಿವೆ. ಮಕ್ಕಳು ಶಾಲೆಗೆ ಬರುವ ಮೊದಲು ಶಾಲೆಯ ಕಟ್ಟಡದ ದೃಢತೆಯ ಬಗ್ಗೆ ತಜ್ಞರಿಂದ ಪರೀಕ್ಷಿಸಬೇಕು. ನಂತರ ತರಗತಿಗಳನ್ನು ನಡೆಸಬೇಕು’ ಎನ್ನುತ್ತಾರೆ ಎಸ್ಡಿಎಂಸಿ ಸದಸ್ಯ ರಾಜು.