<p><strong>ಚಾಮರಾಜನಗರ:</strong> ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದು, ಸ್ವಾತಂತ್ರ್ಯ ಪೂರ್ವದಿಂದಲೂ ಮಹಿಳಾ ಮೀಸಲಾತಿಯ ಪರವಾಗಿ ನಿಂತಿದ್ದು ಕಾಂಗ್ರೆಸ್ ಮಾತ್ರ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ನಾರಾಯಣ್ ಹೇಳಿದರು.</p>.<p>ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯಕಾರಣಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಹಿಳಾ ಮೀಸಲಾತಿ ಮಸೂದೆ ಜಾರಿ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಯು ಕಾಂಗ್ರೆಸ್ ಪಕ್ಷವನ್ನು ಮಹಿಳಾ ವಿರೋಧಿ ಎಂದು ಬಿಂಬಿಸುತ್ತಿದೆ’ ಎಂದು ಆರೋಪಿಸಿದರು.</p>.<p>‘2023ರಲ್ಲಿ ನಾರಿ ವಂದನ್ ಮಹಿಳಾ ಮೀಸಲಾತಿ ಜಾರಿಯಾಗಿರುವುದಾಗಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದು, ಪ್ರಸ್ತುತ ಮತ್ತೊಮ್ಮೆ ಕಾಯ್ದೆಯನ್ನು ಜಾರಿಗೊಳಿಸಲು ಹೊರಟ ಉದ್ದೇಶವೇನು’ ಎಂದು ಪ್ರಶ್ನಿಸಿದರು.</p>.<p>‘ಸಂವಿಧಾನಕ್ಕೆ 73, 74ನೇ ತಿದ್ದುಪಡಿ ತಂದು ಮಹಿಳೆಯರಿಗೆ ಶೇ33 ರಷ್ಟು ಮೀಸಲಾತಿ ನೀಡಿರುವುದು ಕಾಂಗ್ರೆಸ್ ಸರ್ಕಾರ. ಇಷ್ಟಾದರೂ ಪಂಚ ರಾಜ್ಯಗಳ ಚುನಾವಣೆಯಲ್ಲಿ ಗೆಲುವು ಪಡೆಯಲು ಮಹಿಳಾ ಮೀಸಲಾತಿ ಮಸೂದೆ ಮಂಡಿಸುವುದಾಗಿ ತುರ್ತು ಅಧಿವೇಶನ ಕರೆದು ಜನತೆಯ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡಿತು. ಬಿಜೆಪಿಗೆ ಮಹಿಳೆಯರ ಪರವಾದ ಕಾಳಜಿ ಇದ್ದರೆ ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕಾಂಗ್ರೆನ್ ಪ್ರಚಾರ ಸಮಿತಿ ಬಲಿಷ್ಠವಾದಷ್ಟು ಪಕ್ಷವೂ ಸದೃಢವಾಗಿರುತ್ತದೆ. ಪ್ರಚಾರ ಸಮಿತಿಯ ರೂಪ, ಕಾರ್ಯವೈಖರಿ ಬದಲಾಗಿದ್ದು, ಕಾರ್ಯಕರ್ತರು ಸೇನಾನಿಗಳಂತೆ ಕೆಲಸ ಮಾಡಬೇಕಿದೆ. ಸಮಿತಿಯ ಸಂಯೋಜಕರು, ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಜಿಲ್ಲೆಯ ಎಲ್ಲ ಕಾರ್ಯಕರ್ತರೂ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು’ ಎಂದು ಕರೆ ನೀಡಿದರು.</p>.<p>‘ಕಾಂಗ್ರೆಸ್ ವಿರುದ್ಧ ದೇಶದಾದ್ಯಂತ ವ್ಯಾಪಕ ಅಪಪ್ರಚಾರ ಮಾಡಲಾಗುತ್ತಿದ್ದು, ಪಕ್ಷವನ್ನು ತುಳಿಯುವ ಕೆಲಸ ಮಾಡಲಾಗುತ್ತಿದೆ. ಬಿಜೆಪಿಯ ಅಪಪ್ರಚಾರವನ್ನು ಜನತೆಗೆ ತಿಳಿಸುವ ಕೆಲಸವನ್ನು ಪ್ರಚಾರ ಸಮಿತಿ ಕಾರ್ಯಕರ್ತರು ಮಾಡಬೇಕು’ ಎಂದರು.</p>.<p>‘ಚಾಮರಾಜನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಸುಭದ್ರವಾಗಿದ್ದರೂ ಪ್ರಚಾರ ಸಮಿತಿ ಮತ್ತಷ್ಟು ಬಲಗೊಂಡರೆ ಪಕ್ಷವೂ ಬಲಿಷ್ಠವಾಗುತ್ತದೆ. ಮುಂದಿನ ಚುನಾವಣೆಗಳಲ್ಲಿ ಗೆಲುವಿಗೆ ಸಹಕಾರಿಯಾಗಲಿದೆ’ ಎಂದರು.</p>.<p>ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ‘ಕಾಂಗ್ರೆಸ್ ಎಲ್ಲ ವರ್ಗ, ಧರ್ಮಗಳ ಜನರಿಗೆ ಸಾಮಾಜಿಕ ನ್ಯಾಯ ನೀಡಿದೆ. ಪಕ್ಷದ ಪ್ರಚಾರ ಸಮಿತಿಗೆ 23 ಮಂದಿಯನ್ನು ನೇಮಕ ಮಾಡಿದ್ದು, ಮುಂದೆ ಕೊಳ್ಳೇಗಾಲ ಕ್ಷೇತ್ರದಲ್ಲೂ ಕಾರ್ಯಕ್ರಮ ಆಯೋಜಿಸಿ ಪ್ರಚಾರ ಸಮಿತಿಯನ್ನು ಮತ್ತಷ್ಟು ಬಲಗೊಳಿಸಬೇಕು’ ಎಂದರು.</p>.<p>ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ‘ಕಾಂಗ್ರೆಸ್ ಪ್ರಚಾರ ಸಮಿತಿ ಸೇರಿದಂತೆ ಎಲ್ಲ ಘಟಕಗಳು ತಳಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಮಾಡುವ ಮುಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಧುಸೂದನ್ ಮಾತನಾಡಿ, ‘ಪ್ರಚಾರ ಸಮಿತಿಯನ್ನು ಬಲಿಷ್ಠಗೊಳಿಸಿ ಪಕ್ಷವನ್ನು ಸದೃಢಗೊಳಿಸಿ ಚುನಾವಣೆಗಳಲ್ಲಿ ಗೆಲುವಿಗೆ ಶ್ರಮಿಸಲಾಗುವುದು’ ಎಂದರು.</p>.<p>ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಸಭೆಯಲ್ಲಿ ಪ್ರಚಾರ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಸೈಯದ್ ನಜುರುಲ್ಲಾ, ಆರ್.ಸಿದ್ದರಾಜು, ಇರಸವಾಡಿ ಅಶೋಕ ಕುಮಾರ್, ಹೆಗ್ಗವಾಡಿ ಕೆಂಪರಾಜು, ಕೆರೆಹಳ್ಳಿ ರವಿಕುಮಾರ್, ರಾಜಕುಮಾರ, ನಿಜಾಮುದ್ದೀನ್, ಆರ್.ಡಿ.ಉಲ್ಲಾಸ್, ವಿ.ಶಿವಕುಮಾರ್, ಕಲಾವತಿ, ರವಿ ಬಿಸಲವಾಡಿ, ಅಪ್ಸರ್ ಅಹಮದ್, ಡಿ.ಕೆ.ಶಿವಕುಮಾರ್, ಮನೋಹರ್, ಕೋಟೆಕೆರೆ ಶಂಕರನಾಯಕ, ಪ್ರಸಾದ್, ಸೋಮಳ್ಳಿ ಮುರುಳಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-37-1765193060</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದು, ಸ್ವಾತಂತ್ರ್ಯ ಪೂರ್ವದಿಂದಲೂ ಮಹಿಳಾ ಮೀಸಲಾತಿಯ ಪರವಾಗಿ ನಿಂತಿದ್ದು ಕಾಂಗ್ರೆಸ್ ಮಾತ್ರ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ನಾರಾಯಣ್ ಹೇಳಿದರು.</p>.<p>ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯಕಾರಣಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಹಿಳಾ ಮೀಸಲಾತಿ ಮಸೂದೆ ಜಾರಿ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಯು ಕಾಂಗ್ರೆಸ್ ಪಕ್ಷವನ್ನು ಮಹಿಳಾ ವಿರೋಧಿ ಎಂದು ಬಿಂಬಿಸುತ್ತಿದೆ’ ಎಂದು ಆರೋಪಿಸಿದರು.</p>.<p>‘2023ರಲ್ಲಿ ನಾರಿ ವಂದನ್ ಮಹಿಳಾ ಮೀಸಲಾತಿ ಜಾರಿಯಾಗಿರುವುದಾಗಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದು, ಪ್ರಸ್ತುತ ಮತ್ತೊಮ್ಮೆ ಕಾಯ್ದೆಯನ್ನು ಜಾರಿಗೊಳಿಸಲು ಹೊರಟ ಉದ್ದೇಶವೇನು’ ಎಂದು ಪ್ರಶ್ನಿಸಿದರು.</p>.<p>‘ಸಂವಿಧಾನಕ್ಕೆ 73, 74ನೇ ತಿದ್ದುಪಡಿ ತಂದು ಮಹಿಳೆಯರಿಗೆ ಶೇ33 ರಷ್ಟು ಮೀಸಲಾತಿ ನೀಡಿರುವುದು ಕಾಂಗ್ರೆಸ್ ಸರ್ಕಾರ. ಇಷ್ಟಾದರೂ ಪಂಚ ರಾಜ್ಯಗಳ ಚುನಾವಣೆಯಲ್ಲಿ ಗೆಲುವು ಪಡೆಯಲು ಮಹಿಳಾ ಮೀಸಲಾತಿ ಮಸೂದೆ ಮಂಡಿಸುವುದಾಗಿ ತುರ್ತು ಅಧಿವೇಶನ ಕರೆದು ಜನತೆಯ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡಿತು. ಬಿಜೆಪಿಗೆ ಮಹಿಳೆಯರ ಪರವಾದ ಕಾಳಜಿ ಇದ್ದರೆ ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕಾಂಗ್ರೆನ್ ಪ್ರಚಾರ ಸಮಿತಿ ಬಲಿಷ್ಠವಾದಷ್ಟು ಪಕ್ಷವೂ ಸದೃಢವಾಗಿರುತ್ತದೆ. ಪ್ರಚಾರ ಸಮಿತಿಯ ರೂಪ, ಕಾರ್ಯವೈಖರಿ ಬದಲಾಗಿದ್ದು, ಕಾರ್ಯಕರ್ತರು ಸೇನಾನಿಗಳಂತೆ ಕೆಲಸ ಮಾಡಬೇಕಿದೆ. ಸಮಿತಿಯ ಸಂಯೋಜಕರು, ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಜಿಲ್ಲೆಯ ಎಲ್ಲ ಕಾರ್ಯಕರ್ತರೂ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು’ ಎಂದು ಕರೆ ನೀಡಿದರು.</p>.<p>‘ಕಾಂಗ್ರೆಸ್ ವಿರುದ್ಧ ದೇಶದಾದ್ಯಂತ ವ್ಯಾಪಕ ಅಪಪ್ರಚಾರ ಮಾಡಲಾಗುತ್ತಿದ್ದು, ಪಕ್ಷವನ್ನು ತುಳಿಯುವ ಕೆಲಸ ಮಾಡಲಾಗುತ್ತಿದೆ. ಬಿಜೆಪಿಯ ಅಪಪ್ರಚಾರವನ್ನು ಜನತೆಗೆ ತಿಳಿಸುವ ಕೆಲಸವನ್ನು ಪ್ರಚಾರ ಸಮಿತಿ ಕಾರ್ಯಕರ್ತರು ಮಾಡಬೇಕು’ ಎಂದರು.</p>.<p>‘ಚಾಮರಾಜನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಸುಭದ್ರವಾಗಿದ್ದರೂ ಪ್ರಚಾರ ಸಮಿತಿ ಮತ್ತಷ್ಟು ಬಲಗೊಂಡರೆ ಪಕ್ಷವೂ ಬಲಿಷ್ಠವಾಗುತ್ತದೆ. ಮುಂದಿನ ಚುನಾವಣೆಗಳಲ್ಲಿ ಗೆಲುವಿಗೆ ಸಹಕಾರಿಯಾಗಲಿದೆ’ ಎಂದರು.</p>.<p>ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ‘ಕಾಂಗ್ರೆಸ್ ಎಲ್ಲ ವರ್ಗ, ಧರ್ಮಗಳ ಜನರಿಗೆ ಸಾಮಾಜಿಕ ನ್ಯಾಯ ನೀಡಿದೆ. ಪಕ್ಷದ ಪ್ರಚಾರ ಸಮಿತಿಗೆ 23 ಮಂದಿಯನ್ನು ನೇಮಕ ಮಾಡಿದ್ದು, ಮುಂದೆ ಕೊಳ್ಳೇಗಾಲ ಕ್ಷೇತ್ರದಲ್ಲೂ ಕಾರ್ಯಕ್ರಮ ಆಯೋಜಿಸಿ ಪ್ರಚಾರ ಸಮಿತಿಯನ್ನು ಮತ್ತಷ್ಟು ಬಲಗೊಳಿಸಬೇಕು’ ಎಂದರು.</p>.<p>ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ‘ಕಾಂಗ್ರೆಸ್ ಪ್ರಚಾರ ಸಮಿತಿ ಸೇರಿದಂತೆ ಎಲ್ಲ ಘಟಕಗಳು ತಳಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಮಾಡುವ ಮುಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಧುಸೂದನ್ ಮಾತನಾಡಿ, ‘ಪ್ರಚಾರ ಸಮಿತಿಯನ್ನು ಬಲಿಷ್ಠಗೊಳಿಸಿ ಪಕ್ಷವನ್ನು ಸದೃಢಗೊಳಿಸಿ ಚುನಾವಣೆಗಳಲ್ಲಿ ಗೆಲುವಿಗೆ ಶ್ರಮಿಸಲಾಗುವುದು’ ಎಂದರು.</p>.<p>ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಸಭೆಯಲ್ಲಿ ಪ್ರಚಾರ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಸೈಯದ್ ನಜುರುಲ್ಲಾ, ಆರ್.ಸಿದ್ದರಾಜು, ಇರಸವಾಡಿ ಅಶೋಕ ಕುಮಾರ್, ಹೆಗ್ಗವಾಡಿ ಕೆಂಪರಾಜು, ಕೆರೆಹಳ್ಳಿ ರವಿಕುಮಾರ್, ರಾಜಕುಮಾರ, ನಿಜಾಮುದ್ದೀನ್, ಆರ್.ಡಿ.ಉಲ್ಲಾಸ್, ವಿ.ಶಿವಕುಮಾರ್, ಕಲಾವತಿ, ರವಿ ಬಿಸಲವಾಡಿ, ಅಪ್ಸರ್ ಅಹಮದ್, ಡಿ.ಕೆ.ಶಿವಕುಮಾರ್, ಮನೋಹರ್, ಕೋಟೆಕೆರೆ ಶಂಕರನಾಯಕ, ಪ್ರಸಾದ್, ಸೋಮಳ್ಳಿ ಮುರುಳಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-37-1765193060</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>