<p><strong>ಚಾಮರಾಜನಗರ</strong>: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಮನೋನಿಧಿ ವಿದ್ಯಾಸಂಸ್ಥೆಯಿಂದ ಜಾಗೃತಿ ಜಾಥಾ ನಡೆಸಲಾಯಿತು.</p>.<p>ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಈ ಜಾಗೃತಿ ಜಾಥಾಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ಶಶಿಧರ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್. ಚಿದಂಬರ ಚಾಲನೆ ನೀಡಿದರು.</p>.<p>ಜಿಲ್ಲಾಡಳಿತ ಭವನದ ಮುಂಭಾಗದಿಂದ ಪ್ರಾರಂಭಗೊಂಡ ಜಾಥಾವು ಬಿ.ರಾಚಯ್ಯ ಜೋಡಿ ರಸ್ತೆ, ಭುವನೇಶ್ವರಿ ವೃತ್ತದಿಂದ ಚಾಮರಾಜೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅಂತ್ಯಗೊಂಡಿತು.</p>.<p>ಬಳಿಕ ದೇವಾಲಯದ ಆವರಣದಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ಕುರಿತು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕಿರು ನಾಟಕ ಹಾಗೂ ಮೂಕಾಭಿನಯವನ್ನು ಪ್ರದರ್ಶನ ಮಾಡಿದರು. ವಿದ್ಯಾಸಂಸ್ಥೆಯ ಮುಖ್ಯಸ್ಥೆ ಡಾ.ಶೈಲಜಾ ಕೃಪಾನಿಧಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.</p>.<p>ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲ್ಬರ್ಟ್ ಮನೋರಾಜ್, ಸದಸ್ಯರಾದ ಸ್ತುತ್ಯ ಮನೋನಿಧಿ ಮತ್ತು ಸ್ತೋತ್ರ ಮನೋನಿಧಿ, ನರ್ಸಿಂಗ್ ಕಾಲೇಜು, ಪ್ಯಾರಾ ಮೆಡಿಕಲ್ ಕಾಲೇಜು, ಫಾರ್ಮಸಿ ಕಾಲೇಜು, ಪಿ.ಯು ಕಾಲೇಜು, ಅಲ್ಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-37-232631636</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಮನೋನಿಧಿ ವಿದ್ಯಾಸಂಸ್ಥೆಯಿಂದ ಜಾಗೃತಿ ಜಾಥಾ ನಡೆಸಲಾಯಿತು.</p>.<p>ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಈ ಜಾಗೃತಿ ಜಾಥಾಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ಶಶಿಧರ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್. ಚಿದಂಬರ ಚಾಲನೆ ನೀಡಿದರು.</p>.<p>ಜಿಲ್ಲಾಡಳಿತ ಭವನದ ಮುಂಭಾಗದಿಂದ ಪ್ರಾರಂಭಗೊಂಡ ಜಾಥಾವು ಬಿ.ರಾಚಯ್ಯ ಜೋಡಿ ರಸ್ತೆ, ಭುವನೇಶ್ವರಿ ವೃತ್ತದಿಂದ ಚಾಮರಾಜೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅಂತ್ಯಗೊಂಡಿತು.</p>.<p>ಬಳಿಕ ದೇವಾಲಯದ ಆವರಣದಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ಕುರಿತು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕಿರು ನಾಟಕ ಹಾಗೂ ಮೂಕಾಭಿನಯವನ್ನು ಪ್ರದರ್ಶನ ಮಾಡಿದರು. ವಿದ್ಯಾಸಂಸ್ಥೆಯ ಮುಖ್ಯಸ್ಥೆ ಡಾ.ಶೈಲಜಾ ಕೃಪಾನಿಧಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.</p>.<p>ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲ್ಬರ್ಟ್ ಮನೋರಾಜ್, ಸದಸ್ಯರಾದ ಸ್ತುತ್ಯ ಮನೋನಿಧಿ ಮತ್ತು ಸ್ತೋತ್ರ ಮನೋನಿಧಿ, ನರ್ಸಿಂಗ್ ಕಾಲೇಜು, ಪ್ಯಾರಾ ಮೆಡಿಕಲ್ ಕಾಲೇಜು, ಫಾರ್ಮಸಿ ಕಾಲೇಜು, ಪಿ.ಯು ಕಾಲೇಜು, ಅಲ್ಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-37-232631636</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>