ಚಾಮರಾಜನಗರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಎಂ.ಅಶ್ವಿನಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿದ್ದ ಮೈಸೂರು ವಿಭಾಗೀಯ ಆಯುಕ್ತ ಜಯರಾಂ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದ ಎಂ.ಅಶ್ವಿನಿ ಅವರನ್ನು ಅಭಿನಂದಿಸಿದೇ ಹೋಗಿದ್ದಾರೆ ಎಂದು ಉಪಾಧ್ಯಕ್ಷ ಕೆ.ಎಸ್.ಮಹೇಶ್ ಹಾಗೂ ಕಾಂಗ್ರೆಸ್ ಸದಸ್ಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋವಿಡ್-19 ಕಾರಣಕ್ಕೆ ಅವರು ದೂರದಿಂದಲೇ ಅಭಿನಂದಿಸಿದ್ದಾರೆ ಎಂದು ಅಧಿಕಾರಿಗಳ ಸಮಜಾಯಿಷಿ ನೀಡಿದ್ದಾರೆ.
ಪರಿಶಿಷ್ಟ ವರ್ಗದ ಮಹಿಳೆಗೆ ಅವಮಾನ ಮಾಡುತ್ತಿದ್ದೀರಿ. ಕ್ಯಾಬಿನೆಟ್ ಸ್ಥಾನಮಾನದ ಸ್ಥಾನಕ್ಕೆ ಹಾಗೂ ಜನಪ್ರತಿನಿಧಿಗಳಿಗೆ ಅಪಮಾನ ಮಾಡುತ್ತಿದ್ದೀರಿ ಎಂದು ಸದಸ್ಯರ ಆರೋಪ ಮಾಡಿದ್ದಾರೆ. ಪ್ರಾದೇಶಿಕ ಆಯುಕ್ತರು ವಾಪಸ್ ಬರಲು ಪಟ್ಟು ಹಿಡಿದ್ದಾರೆ.