ತಾಲ್ಲೂಕಿನ ಕುರಟ್ಟಿ ಹೊಸೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಚಂಗಡಿ ಗ್ರಾಮ ಮಲೆಮಹದೇಶ್ವರ ವನ್ಯಧಾಮದ ದಟ್ಟಾರಣ್ಯದೊಳಗಿದ್ದುಇಲ್ಲಿನ ಜನರು ಅಗತ್ಯ ಮೂಲಸೌಕರ್ಯದಿಂದ ವಂಚಿತಗೊಂಡು ಬದುಕುತ್ತಿದ್ದರು. ನಮಗೆ ಮೂಲಸೌಕರ್ಯ ಒದಗಿಸಿಕೊಡಿ ಎಂದು ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಬೇಸತ್ತಿದ್ದ ಗ್ರಾಮಸ್ಥರು ಸಾಕಷ್ಟು ಬಾರಿ ಚುನಾವಣೆಗಳನ್ನು ಬಹಿಷ್ಕರಿಸಿದ್ದರು.