ಕೆಲವು ತಿಂಗಳು ಜಾಗೃತಿ: ಡಿಸಿಎಫ್ ‘
ಶಿವರಾತ್ರಿ ಯುಗಾದಿ ಸೇರಿದಂತೆ ಬೆಟ್ಟದಲ್ಲಿ ನಡೆಯುವ ವಿವಿಧ ಜಾತ್ರೆಗೆ ಲಕ್ಷಾಂತರ ಭಕ್ತರು ಬರುತ್ತಾರೆ. ಸಾವಿರಾರು ಭಕ್ತರು ಕಾಲ್ನಡಿಗೆಯಲ್ಲಿ ಸಾಗುತ್ತಾರೆ. ಜಾತ್ರೆಯ ನಂತರ ಅವರು ಅರಣ್ಯದಲ್ಲಿ ಎಸೆದಿರುವ ಪ್ಲಾಸ್ಟಿಕ್ ವಸ್ತುಗಳನ್ನು ಸಿಬ್ಬಂದಿ ಸಂಗ್ರಹಿಸುತ್ತಾರೆ. ಇದನ್ನು ತಪ್ಪಿಸಲು ಭಕ್ತರು ಪ್ಲಾಸ್ಟಿಕ್ ಬಳಕೆ ಮಾಡದಂತೆ ಮಾಡಿದರೂ ಅರಣ್ಯದಲ್ಲಿ ಮತ್ತು ಬೆಟ್ಟದಲ್ಲಿ ಎಲ್ಲೆಂದರಲ್ಲಿ ಎಸೆಯದಂತೆ ಮಾಡಲು ಚೆಕ್ಪೋಸ್ಟ್ ನಿರ್ಮಿಸಲಾಗಿದೆ’ ಎಂದು ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಸಂತೋಷ್ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.
‘ಕೆಲವು ತಿಂಗಳುಗಳ ಕಾಲ ನಾವು ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿ ಮೂಡಿಸಲಿದ್ದೇವೆ. ಆ ಬಳಿಕ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳುವುದು ದಂಡವಿಧಿಸುವಂತಹ ಕ್ರಮಗಳನ್ನು ಕೈಗೊಳ್ಳಲಿದ್ದೇವೆ’ ಎಂದು ಅವರು ನೀಡಿದರು.