<p><strong>ಹನೂರು</strong>: ತಾಲ್ಲೂಕಿನ ಹುಣಸೆಪಾಳ್ಯದಲ್ಲಿ ರೈತ ಜಡೇರುದ್ರ ಎಂಬುವವರ ಸೇರಿದ ಹಸುವನ್ನು ಚಿರತೆಯೊಂದು ದಾಳಿ ಮಾಡಿ ಕೊಂದಿದೆ.</p>.<p>ಜಡೇರುದ್ರ ಅವರು ಸಮೀಪದ ಜಯಪ್ಪ ಎಂಬುವವರ ಜಮೀನಿನಲ್ಲಿ ಹಸು ಮೇಯಲು ಬಿಟ್ಟಿದ್ದರು. ಮೇಯುತ್ತಿದ್ದ ಹಸು ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ದಾಳಿ ತೀವ್ರತೆಗೆ ಸ್ಥಳದಲ್ಲೇ ಮೃತಪಟ್ಟಿದೆ.</p>.<p>‘ಹನೂರು ತಾಲ್ಲೂಕಿನಲ್ಲಿ ಅಲ್ಲಲ್ಲಿ ಚಿರತೆ ದಾಳಿ ಮುಂದುವರೆದಿದೆ. ಹಸು, ಮೇಕೆ, ಕುರಿಗಳನ್ನು ಬೇಟೆಯಾಡಿ ಕೊಲ್ಲುತ್ತಿವೆ. ಇದರಿಂದ ಜನರು ಭಯದಲ್ಲೇ ಜೀವನ ನಡೆಸಬೇಕಾದ ಅನಿವಾರ್ಯ ಎದುರಾಗಿದೆ. ಅಧಿಕಾರಿಗಳು ಚಿರತೆ ಹಾವಳಿಗೆ ಕಡಿವಾಣ ಹಾಕಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ</p>.<p><strong>ಪರಿಹಾರಕ್ಕಾಗಿ ಮನವಿ:</strong> ಹಸು ನಂಬಿ ಜೀವನ ಸಾಗಿಸುತ್ತಿದ್ದ ರೈತರಿಗೆ ನಷ್ಟವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು, ರೈತರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು</strong>: ತಾಲ್ಲೂಕಿನ ಹುಣಸೆಪಾಳ್ಯದಲ್ಲಿ ರೈತ ಜಡೇರುದ್ರ ಎಂಬುವವರ ಸೇರಿದ ಹಸುವನ್ನು ಚಿರತೆಯೊಂದು ದಾಳಿ ಮಾಡಿ ಕೊಂದಿದೆ.</p>.<p>ಜಡೇರುದ್ರ ಅವರು ಸಮೀಪದ ಜಯಪ್ಪ ಎಂಬುವವರ ಜಮೀನಿನಲ್ಲಿ ಹಸು ಮೇಯಲು ಬಿಟ್ಟಿದ್ದರು. ಮೇಯುತ್ತಿದ್ದ ಹಸು ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ದಾಳಿ ತೀವ್ರತೆಗೆ ಸ್ಥಳದಲ್ಲೇ ಮೃತಪಟ್ಟಿದೆ.</p>.<p>‘ಹನೂರು ತಾಲ್ಲೂಕಿನಲ್ಲಿ ಅಲ್ಲಲ್ಲಿ ಚಿರತೆ ದಾಳಿ ಮುಂದುವರೆದಿದೆ. ಹಸು, ಮೇಕೆ, ಕುರಿಗಳನ್ನು ಬೇಟೆಯಾಡಿ ಕೊಲ್ಲುತ್ತಿವೆ. ಇದರಿಂದ ಜನರು ಭಯದಲ್ಲೇ ಜೀವನ ನಡೆಸಬೇಕಾದ ಅನಿವಾರ್ಯ ಎದುರಾಗಿದೆ. ಅಧಿಕಾರಿಗಳು ಚಿರತೆ ಹಾವಳಿಗೆ ಕಡಿವಾಣ ಹಾಕಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ</p>.<p><strong>ಪರಿಹಾರಕ್ಕಾಗಿ ಮನವಿ:</strong> ಹಸು ನಂಬಿ ಜೀವನ ಸಾಗಿಸುತ್ತಿದ್ದ ರೈತರಿಗೆ ನಷ್ಟವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು, ರೈತರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>