<p><strong>ಚಾಮರಾಜನಗರ:</strong> ಗುರುವಾರದಿಂದ ಆರಂಭವಾಗಿರುವ ಚಿಕ್ಕಲ್ಲೂರು ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧದ ಹೆಸರಿನಲ್ಲಿ ಮುಗ್ಧ ಭಕ್ತರ ನಂಬಿಕೆ, ಆಚರಣೆಗೆ ಅಡ್ಡಿಯಾಗದಂತೆ ಜಿಲ್ಲಾಡಳಿತ ಕ್ರಮ ವಹಿಸಬೇಕು ಎಂದು ಮಂಟೇಸ್ವಾಮಿ, ರಾಚಪ್ಪಾಜಿ, ಸಿದ್ದಪ್ಪಾಜಿ ಪರಂಪರೆ ರಕ್ಷಣಾ ಹೋರಾಟ ಸಮಿತಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮನವಿ ಮಾಡಿದೆ.</p>.<p>ಸಮಿತಿಯ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಈ ಸಂಬಂಧ ಮನವಿ ಸಲ್ಲಿಸಿದ್ದು, ಜಿಲ್ಲಾಡಳಿತ ಹೊರಡಿಸಿರುವ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ ಆದೇಶದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. </p>.<p>’ಐದು ಶತಮಾನಗಳಿಂದ ನಡೆದು ಬಂದಿರುವ ಈ ಜಾತ್ರೆಯಲ್ಲಿ ಪ್ರಾಣಿ, ಪಕ್ಷಿ ಬಲಿ, ಬಲಿ ಪೀಠ ಮುಂತಾದ ಆಚರಣೆಗಳಿಲ್ಲ. ಇದನ್ನು ನೀವು ಖುದ್ದಾಗಿ ಪರಿಶೀಲಿಸಬಹುದು. ಪ್ರಾಣಿ ಬಲಿ ನಿಷೇಧಕ್ಕೆ ಸಂಬಂಧಿಸಿದ ಆದೇಶವು ಅವಾಸ್ತವಿಕ, ಊಹಾಪೋಹ ಮಾಹಿತಿಗಳನ್ನು ಆಧರಿಸಿದೆ. ಈ ಆದೇಶ ಮಂಟೇಸ್ವಾಮಿ ಪರಂಪರೆ ಒಕ್ಕಲುಗಳ ಭಕ್ತರ ಆಚರಣೆ ಮತ್ತು ನಂಬಿಕೆ, ಧಾರ್ಮಿಕ ವಿಧಿಗಳಿಗೆ ಧಕ್ಕೆ ಉಂಟುಮಾಡುತ್ತದೆ. ಜೊತೆಗೆ ಸಾಂವಿಧಾನಿಕ ಹಕ್ಕನ್ನು ಉಲ್ಲಂಘಿಸುತ್ತದೆ’ ಎಂದು ಮನವಿಯಲ್ಲಿ ಅವರು ಹೇಳಿದ್ದಾರೆ. </p>.<p>‘ಈ ಒಕ್ಕಲುಗಳ ಭಕ್ತರ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳು, ಮಾಂಸಾಹಾರದ ಅಡುಗೆ ಮತ್ತು ಪಂಕ್ತಿ ಭೀಜನೆ ಮಾಡುವುದಕ್ಕೆ ಅಡ್ಡಿಯಾಗದಂತೆ ನೋಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಆದರೆ, ತಾವು ಹೊರಡಿಸಿರುವ ಆದೇಶದಲ್ಲಿ ಈ ಅಂಶಗಳನ್ನು ಪರಿಗಣಿಸಲಾಗಿಲ್ಲ’ ಎಂದು ಹೇಳಿದ್ದಾರೆ. </p>.<p>‘ದೇವರ ಹೆಸರಿನಲ್ಲಿ ನಡೆಯುವ ಪ್ರಾಣಿಬಲಿ ಅನಾಗರಿಕ, ಅಸಂವಿಧಾನಿಕ ಹಾಗೂ ಅಪರಾಧವಾಗಿದ್ದು ಅದನ್ನು ನಾವೂ ಖಂಡಿಸುತ್ತೇವೆ. ಆದರೆ, ಪ್ರಾಣಿ ಬಲಿ ನಿಷೇಧದ ನೆಪದಲ್ಲಿ ಪ್ರಾಣಿ ಬಲಿ ನಡೆಯದ ಈ ಜಾತ್ರೆಯಲ್ಲಿ ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ನಡೆಸುವ ಯಾವುದೇ ಕಾನೂನು ಜಾರಿ ಪ್ರಕ್ರಿಯೆಗಳು ಅಮಾಯಕ ಜನ ಸಂಸ್ಕೃತಿಯ ಮೇಲೆ ಪ್ರಹಾರವಾಗಿದ್ದು, ಅದನ್ನು ಖಂಡಿಸಿತ್ತೇವೆ’ ಎಂದು ಮನವಿಯಲ್ಲಿ ಹೇಳಿದ್ದಾರೆ. </p>.<p>ಸಮಿತಿ ಅಧ್ಯಕ್ಷ ಎಸ್.ಎಂ.ಉಗ್ರ ನರಸಿಂಹೇಗೌಡ, ಕಾರ್ಯದರ್ಶಿ ಶಂಭುಲಿಂಗಸ್ವಾಮಿ ಮತ್ತು ಜಾನಪದ ವಿದ್ವಾಂಸ ಮಹಾದೇವಶಂಕನಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಗುರುವಾರದಿಂದ ಆರಂಭವಾಗಿರುವ ಚಿಕ್ಕಲ್ಲೂರು ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧದ ಹೆಸರಿನಲ್ಲಿ ಮುಗ್ಧ ಭಕ್ತರ ನಂಬಿಕೆ, ಆಚರಣೆಗೆ ಅಡ್ಡಿಯಾಗದಂತೆ ಜಿಲ್ಲಾಡಳಿತ ಕ್ರಮ ವಹಿಸಬೇಕು ಎಂದು ಮಂಟೇಸ್ವಾಮಿ, ರಾಚಪ್ಪಾಜಿ, ಸಿದ್ದಪ್ಪಾಜಿ ಪರಂಪರೆ ರಕ್ಷಣಾ ಹೋರಾಟ ಸಮಿತಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮನವಿ ಮಾಡಿದೆ.</p>.<p>ಸಮಿತಿಯ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಈ ಸಂಬಂಧ ಮನವಿ ಸಲ್ಲಿಸಿದ್ದು, ಜಿಲ್ಲಾಡಳಿತ ಹೊರಡಿಸಿರುವ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ ಆದೇಶದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. </p>.<p>’ಐದು ಶತಮಾನಗಳಿಂದ ನಡೆದು ಬಂದಿರುವ ಈ ಜಾತ್ರೆಯಲ್ಲಿ ಪ್ರಾಣಿ, ಪಕ್ಷಿ ಬಲಿ, ಬಲಿ ಪೀಠ ಮುಂತಾದ ಆಚರಣೆಗಳಿಲ್ಲ. ಇದನ್ನು ನೀವು ಖುದ್ದಾಗಿ ಪರಿಶೀಲಿಸಬಹುದು. ಪ್ರಾಣಿ ಬಲಿ ನಿಷೇಧಕ್ಕೆ ಸಂಬಂಧಿಸಿದ ಆದೇಶವು ಅವಾಸ್ತವಿಕ, ಊಹಾಪೋಹ ಮಾಹಿತಿಗಳನ್ನು ಆಧರಿಸಿದೆ. ಈ ಆದೇಶ ಮಂಟೇಸ್ವಾಮಿ ಪರಂಪರೆ ಒಕ್ಕಲುಗಳ ಭಕ್ತರ ಆಚರಣೆ ಮತ್ತು ನಂಬಿಕೆ, ಧಾರ್ಮಿಕ ವಿಧಿಗಳಿಗೆ ಧಕ್ಕೆ ಉಂಟುಮಾಡುತ್ತದೆ. ಜೊತೆಗೆ ಸಾಂವಿಧಾನಿಕ ಹಕ್ಕನ್ನು ಉಲ್ಲಂಘಿಸುತ್ತದೆ’ ಎಂದು ಮನವಿಯಲ್ಲಿ ಅವರು ಹೇಳಿದ್ದಾರೆ. </p>.<p>‘ಈ ಒಕ್ಕಲುಗಳ ಭಕ್ತರ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳು, ಮಾಂಸಾಹಾರದ ಅಡುಗೆ ಮತ್ತು ಪಂಕ್ತಿ ಭೀಜನೆ ಮಾಡುವುದಕ್ಕೆ ಅಡ್ಡಿಯಾಗದಂತೆ ನೋಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಆದರೆ, ತಾವು ಹೊರಡಿಸಿರುವ ಆದೇಶದಲ್ಲಿ ಈ ಅಂಶಗಳನ್ನು ಪರಿಗಣಿಸಲಾಗಿಲ್ಲ’ ಎಂದು ಹೇಳಿದ್ದಾರೆ. </p>.<p>‘ದೇವರ ಹೆಸರಿನಲ್ಲಿ ನಡೆಯುವ ಪ್ರಾಣಿಬಲಿ ಅನಾಗರಿಕ, ಅಸಂವಿಧಾನಿಕ ಹಾಗೂ ಅಪರಾಧವಾಗಿದ್ದು ಅದನ್ನು ನಾವೂ ಖಂಡಿಸುತ್ತೇವೆ. ಆದರೆ, ಪ್ರಾಣಿ ಬಲಿ ನಿಷೇಧದ ನೆಪದಲ್ಲಿ ಪ್ರಾಣಿ ಬಲಿ ನಡೆಯದ ಈ ಜಾತ್ರೆಯಲ್ಲಿ ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ನಡೆಸುವ ಯಾವುದೇ ಕಾನೂನು ಜಾರಿ ಪ್ರಕ್ರಿಯೆಗಳು ಅಮಾಯಕ ಜನ ಸಂಸ್ಕೃತಿಯ ಮೇಲೆ ಪ್ರಹಾರವಾಗಿದ್ದು, ಅದನ್ನು ಖಂಡಿಸಿತ್ತೇವೆ’ ಎಂದು ಮನವಿಯಲ್ಲಿ ಹೇಳಿದ್ದಾರೆ. </p>.<p>ಸಮಿತಿ ಅಧ್ಯಕ್ಷ ಎಸ್.ಎಂ.ಉಗ್ರ ನರಸಿಂಹೇಗೌಡ, ಕಾರ್ಯದರ್ಶಿ ಶಂಭುಲಿಂಗಸ್ವಾಮಿ ಮತ್ತು ಜಾನಪದ ವಿದ್ವಾಂಸ ಮಹಾದೇವಶಂಕನಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>