’ಐದು ಶತಮಾನಗಳಿಂದ ನಡೆದು ಬಂದಿರುವ ಈ ಜಾತ್ರೆಯಲ್ಲಿ ಪ್ರಾಣಿ, ಪಕ್ಷಿ ಬಲಿ, ಬಲಿ ಪೀಠ ಮುಂತಾದ ಆಚರಣೆಗಳಿಲ್ಲ. ಇದನ್ನು ನೀವು ಖುದ್ದಾಗಿ ಪರಿಶೀಲಿಸಬಹುದು. ಪ್ರಾಣಿ ಬಲಿ ನಿಷೇಧಕ್ಕೆ ಸಂಬಂಧಿಸಿದ ಆದೇಶವು ಅವಾಸ್ತವಿಕ, ಊಹಾಪೋಹ ಮಾಹಿತಿಗಳನ್ನು ಆಧರಿಸಿದೆ. ಈ ಆದೇಶ ಮಂಟೇಸ್ವಾಮಿ ಪರಂಪರೆ ಒಕ್ಕಲುಗಳ ಭಕ್ತರ ಆಚರಣೆ ಮತ್ತು ನಂಬಿಕೆ, ಧಾರ್ಮಿಕ ವಿಧಿಗಳಿಗೆ ಧಕ್ಕೆ ಉಂಟುಮಾಡುತ್ತದೆ. ಜೊತೆಗೆ ಸಾಂವಿಧಾನಿಕ ಹಕ್ಕನ್ನು ಉಲ್ಲಂಘಿಸುತ್ತದೆ’ ಎಂದು ಮನವಿಯಲ್ಲಿ ಅವರು ಹೇಳಿದ್ದಾರೆ.