ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶಿಗೌಡನಪುರ | ಮಳೆಗೆ ನೆನೆದಿದ್ದ ಗೋಡೆ ಕುಸಿದು‌ ಮಗು ಸಾವು

Last Updated 17 ಸೆಪ್ಟೆಂಬರ್ 2019, 15:21 IST
ಅಕ್ಷರ ಗಾತ್ರ

ಚಾಮರಾಜನಗರ: ತಾಲ್ಲೂಕಿನ ದೇಶಿಗೌಡನಪುರ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ಮನೆಯ ಗೋಡೆ ಕುಸಿದು, ನಾಲ್ಕು ವರ್ಷದ ಬಾಲಕ ವೀರಭದ್ರಸ್ವಾಮಿ ಮೃತಪಟ್ಟಿದ್ದಾನೆ.

ಬಾಲಕನ ತಾಯಿ ಚನ್ನಾಜಮ್ಮ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆ ಮಲ್ಲೇಶ್‌ ಅಪಾಯದಿಂದ ಪಾರಾಗಿದ್ದಾರೆ.

ಈ ಕುಟುಂಬವು ತುಂಬಾ ಹಳೆಯದಾದ ನಾಡಹೆಂಚಿನ ಮನೆಯಲ್ಲಿ ವಾಸಿಸುತ್ತಿತ್ತು.ಸೋಮವಾರ ರಾತ್ರಿ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ, ಮಣ್ಣಿನ ಗೋಡೆ ನೆನೆದಿತ್ತು. ಬೆಳಗಿನ ಜಾವ 4.30ರ ಸುಮಾರಿಗೆ ಗೋಡೆ ಕುಸಿದಿದೆ. ಗೋಡೆಯಡಿ ಸಿಲುಕಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ಮಹೇಶ್‌, ಸಂತ್ರಸ್ತ ಕುಟುಂಬಕ್ಕೆ ₹ 5 ಲಕ್ಷ ಪರಿಹಾರದ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT