ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಶನಿವಾರ ಸಂಜೆ ಕುರಟ್ಟಿ ಹೊಸೂರಿಗೆ ಭೇಟಿ ನೀಡಿ ಕಾಯಿಲೆಗೆ ತುತ್ತಾಗಿರುವ ಮಕ್ಕಳನ್ನು ಆರೋಗ್ಯ ಸ್ಥಿತಿ ವಿಚಾರಿಸಿದರು. ಕುಟುಂಬಸ್ಥರು ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದರು. ರೋಗದಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದರು. ಪೋಷಕರಿಗೆ ಸಾಂತ್ವನ ಹೇಳಿದ ಅವರು ‘ಕಾಯಿಲೆಯ ಬಗ್ಗೆ ಪರಿಶೀಲಿಸಿ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುವುದು. ಆರೋಗ್ಯ ಅಧಿಕಾರಿಗಳನ್ನು ಗ್ರಾಮಕ್ಕೆ ಕಳುಹಿಸಿ ಪರಿಶೀಲನೆಗೆ ಸೂಚಿಸಲಾಗುವುದು’ ಎಂದು ಹೇಳಿದರು.