<p><strong>ಚಾಮರಾಜನಗರ: ‘</strong>ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ (ಚುಡಾ) ವ್ಯಾಪ್ತಿಗೆ ಬರುವ ನಗರಸಭೆ ಮತ್ತು ಗ್ರಾಮಗಳಲ್ಲಿ ಅಕ್ರಮ ಭೂ ವಿಂಗಡಣೆ ಮಾಡಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಪ್ರಾಧಿಕಾರದ ಅಧ್ಯಕ್ಷ ಪಿ.ಬಿ.ಶಾಂತಮೂರ್ತಿ ಕುಲಗಾಣ ಮಂಗಳವಾರ ಎಚ್ಚರಿಸಿದರು.</p>.<p>ಪ್ರಾಧಿಕಾರದ 75ನೇ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ‘ಕಾನೂನನ್ನು ಪಾಲಿಸದೆ ಸರ್ಕಾರಕ್ಕೆ ನಷ್ಟ ಉಂಟು ಮಾಡುವುದರ ಜೊತೆಗೆ ಅಭಿವೃದ್ಧಿಗೆ ಮಾರಕವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಅಕ್ರಮ ಭೂ ವಿಂಗಡಣೆ ಮಾಡಿ ಮಾರಾಟ ಮಾಡುವವರಿಗೆ ನೋಟಿಸ್ ಜಾರಿ ಮಾಡಲಾಗುವುದು’ ಎಂದರು.</p>.<p>‘ಪ್ರಾಧಿಕಾರದ ವತಿಯಿಂದ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ. ಆದರೂ ಕೆಲವರಿಂದ ನಗರಾಭಿವೃದ್ಧಿಗೆ ತೊಂದರೆಯಾಗುತ್ತಿದೆ. ಸಾಮಾನ್ಯ ಜನರಿಗೆ ಕಾನೂನು ಅರಿವು ಇಲ್ಲದಿರುವುದನ್ನು ದುರುಪಯೋಗಪಡಿಸಿಕೊಂಡು ವೈಯಕ್ತಿಕ ಲಾಭಕ್ಕಾಗಿ ಮಾರಾಟಗಾರರಿಂದ ಕೊಂಡುಕೊಳ್ಳುವವರಿಗೆ ತಪ್ಪು ಮಾಹಿತಿಗಳನ್ನು ನೀಡಿ ಮೋಸ ಮಾಡುತ್ತಿರುವುದು ಗಮನಕ್ಕೆ ಬಂದಿರುತ್ತದೆ.</p>.<p>ಜನ ಸಾಮಾನ್ಯರು ವಂಚನೆಗೊಳಗಾಗದೆ ಇಂತಹ ಸಂದರ್ಭಗಳಲ್ಲಿ ಸಂಪೂರ್ಣ ಮಾಹಿತಿ ತೆಗೆದುಕೊಂಡು ಜಾಗ ಖರೀದಿಸಬೇಕು. ಯಾವುದೇ ಒತ್ತಡಗಳಿಗೆ ಮಣಿದು ಕಡಿಮೆ ಹಣದಲ್ಲಿ ನಿವೇಶನ ಸಿಗುತ್ತದೆ ಎಂದು ಕೊಂಡುಕೊಳ್ಳುವುವರಿಂದ ಕಾನೂನು ತೊಡಕುಗಳು ಎದುರಾಗಿ ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ’ ಎಂದು ಅವರು ಹೇಳಿದರು.</p>.<p>‘ಅಕ್ರಮ ಭೂ ವಿಂಗಡಣೆಯಾಗಿರುವ ತುಂಡು-ತುಂಡು ಭೂಮಿ ಖರೀದಿಸುವುದಾಗಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಯಾರೂ ಮುಂದಾಗಬಾರದು. ಬಡಾವಣೆ ನಿರ್ಮಾಣ ಮಾಡಲು ಬಯಸುವವರು ಜಮೀನುಗಳನ್ನು ಕೊಂಡುಕೊಳ್ಳುವಾಗ ಅಗತ್ಯ ದಾಖಲೆಗಳ ಸಮೇತ ಕೂಲಂಕಷವಾಗಿ ಪರಿಶೀಲಿಸಿ ಕೊಂಡುಕೊಳ್ಳಬೇಕು’ ಎಂದರು.</p>.<p>ಅನುಮತಿ: ವಸತಿ, ವಾಣಿಜ್ಯ ಹಾಗೂ ಕೈಗಾರಿಕೆ ಉದ್ದೇಶದ ಆರು ವಿನ್ಯಾಸಗಳಿಗೆ ಸಭೆ ಅನುಮೋದನೆ ನೀಡಿತು. ಒಂದು ಭೂ ಉಪಯೋಗ ಬದಲಾವಣೆ ಹಾಗೂ ಒಂದು ಭೂ ಪರಿವರ್ತನೆ ವಿಷಯಗಳಿಗೆ ಸಭೆಯು ಒಪ್ಪಿಗೆ ನೀಡಿತು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಎಂ.ಎಸ್.ಪಂಕಜಾ, ನಗರಸಭೆ ಆಯುಕ್ತ ಕರಿಬಸವಯ್ಯ, ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸದಸ್ಯರಾದ ಪರಶಿವಮೂರ್ತಿ ಎಸ್.ಆರ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಅನ್ನಪೂರ್ಣ, ಕೂಸಣ್ಣ, ಆರ್.ರಂಗಸ್ವಾಮಿ, ಕೆಂಪನಾಯ್ಕ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: ‘</strong>ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ (ಚುಡಾ) ವ್ಯಾಪ್ತಿಗೆ ಬರುವ ನಗರಸಭೆ ಮತ್ತು ಗ್ರಾಮಗಳಲ್ಲಿ ಅಕ್ರಮ ಭೂ ವಿಂಗಡಣೆ ಮಾಡಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಪ್ರಾಧಿಕಾರದ ಅಧ್ಯಕ್ಷ ಪಿ.ಬಿ.ಶಾಂತಮೂರ್ತಿ ಕುಲಗಾಣ ಮಂಗಳವಾರ ಎಚ್ಚರಿಸಿದರು.</p>.<p>ಪ್ರಾಧಿಕಾರದ 75ನೇ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ‘ಕಾನೂನನ್ನು ಪಾಲಿಸದೆ ಸರ್ಕಾರಕ್ಕೆ ನಷ್ಟ ಉಂಟು ಮಾಡುವುದರ ಜೊತೆಗೆ ಅಭಿವೃದ್ಧಿಗೆ ಮಾರಕವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಅಕ್ರಮ ಭೂ ವಿಂಗಡಣೆ ಮಾಡಿ ಮಾರಾಟ ಮಾಡುವವರಿಗೆ ನೋಟಿಸ್ ಜಾರಿ ಮಾಡಲಾಗುವುದು’ ಎಂದರು.</p>.<p>‘ಪ್ರಾಧಿಕಾರದ ವತಿಯಿಂದ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ. ಆದರೂ ಕೆಲವರಿಂದ ನಗರಾಭಿವೃದ್ಧಿಗೆ ತೊಂದರೆಯಾಗುತ್ತಿದೆ. ಸಾಮಾನ್ಯ ಜನರಿಗೆ ಕಾನೂನು ಅರಿವು ಇಲ್ಲದಿರುವುದನ್ನು ದುರುಪಯೋಗಪಡಿಸಿಕೊಂಡು ವೈಯಕ್ತಿಕ ಲಾಭಕ್ಕಾಗಿ ಮಾರಾಟಗಾರರಿಂದ ಕೊಂಡುಕೊಳ್ಳುವವರಿಗೆ ತಪ್ಪು ಮಾಹಿತಿಗಳನ್ನು ನೀಡಿ ಮೋಸ ಮಾಡುತ್ತಿರುವುದು ಗಮನಕ್ಕೆ ಬಂದಿರುತ್ತದೆ.</p>.<p>ಜನ ಸಾಮಾನ್ಯರು ವಂಚನೆಗೊಳಗಾಗದೆ ಇಂತಹ ಸಂದರ್ಭಗಳಲ್ಲಿ ಸಂಪೂರ್ಣ ಮಾಹಿತಿ ತೆಗೆದುಕೊಂಡು ಜಾಗ ಖರೀದಿಸಬೇಕು. ಯಾವುದೇ ಒತ್ತಡಗಳಿಗೆ ಮಣಿದು ಕಡಿಮೆ ಹಣದಲ್ಲಿ ನಿವೇಶನ ಸಿಗುತ್ತದೆ ಎಂದು ಕೊಂಡುಕೊಳ್ಳುವುವರಿಂದ ಕಾನೂನು ತೊಡಕುಗಳು ಎದುರಾಗಿ ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ’ ಎಂದು ಅವರು ಹೇಳಿದರು.</p>.<p>‘ಅಕ್ರಮ ಭೂ ವಿಂಗಡಣೆಯಾಗಿರುವ ತುಂಡು-ತುಂಡು ಭೂಮಿ ಖರೀದಿಸುವುದಾಗಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಯಾರೂ ಮುಂದಾಗಬಾರದು. ಬಡಾವಣೆ ನಿರ್ಮಾಣ ಮಾಡಲು ಬಯಸುವವರು ಜಮೀನುಗಳನ್ನು ಕೊಂಡುಕೊಳ್ಳುವಾಗ ಅಗತ್ಯ ದಾಖಲೆಗಳ ಸಮೇತ ಕೂಲಂಕಷವಾಗಿ ಪರಿಶೀಲಿಸಿ ಕೊಂಡುಕೊಳ್ಳಬೇಕು’ ಎಂದರು.</p>.<p>ಅನುಮತಿ: ವಸತಿ, ವಾಣಿಜ್ಯ ಹಾಗೂ ಕೈಗಾರಿಕೆ ಉದ್ದೇಶದ ಆರು ವಿನ್ಯಾಸಗಳಿಗೆ ಸಭೆ ಅನುಮೋದನೆ ನೀಡಿತು. ಒಂದು ಭೂ ಉಪಯೋಗ ಬದಲಾವಣೆ ಹಾಗೂ ಒಂದು ಭೂ ಪರಿವರ್ತನೆ ವಿಷಯಗಳಿಗೆ ಸಭೆಯು ಒಪ್ಪಿಗೆ ನೀಡಿತು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಎಂ.ಎಸ್.ಪಂಕಜಾ, ನಗರಸಭೆ ಆಯುಕ್ತ ಕರಿಬಸವಯ್ಯ, ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸದಸ್ಯರಾದ ಪರಶಿವಮೂರ್ತಿ ಎಸ್.ಆರ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಅನ್ನಪೂರ್ಣ, ಕೂಸಣ್ಣ, ಆರ್.ರಂಗಸ್ವಾಮಿ, ಕೆಂಪನಾಯ್ಕ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>