<p><strong>ಚಾಮರಾಜನಗರ:</strong> ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆಯಲು ಯತ್ನಿಸಿರುವ ಘಟನೆಯನ್ನು ಪರಿಶಿಷ್ಟ ಜಾತಿ ನೌಕರರ ಕ್ಷೇಮಾಭಿವೃದ್ಧಿ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ ಹೇಳಿದರು.</p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವರ್ತನೆ ಖಂಡನೀಯ. ಆರೋಪಿಯನ್ನು ವಕೀಲ ವೃತ್ತಿಯಿಂದ ವಜಾಗೊಳಿಸಿ ದೇಶದಿಂದ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿದರು.</p>.<p>ಮಧ್ಯಪ್ರದೇಶದ ವಕೀಲ ಅನಿಲ್ ಮಿಶ್ರಾ ಎಂಬಾತ ಅಂಬೇಡ್ಕರ್ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದು ಅಂಬೇಡ್ಕರ್, ಸಂವಿಧಾನಕ್ಕೆ ಅಗೌರವ ತೋರಿಸಿರುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ವಕೀಲ ರಾಜೇಶ್ ಕಿಶೋರ್ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಅ.13ರಂದು ಸಂಜೆ 5 ಗಂಟೆಗೆ ಜಿಲ್ಲಾಡಳಿತ ಮುಂಭಾಗ ವಿರೋಧ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು. </p>.<p>ಸಭೆಯಲ್ಲಿ ಸಂಘದ ಗೌರವ ಸಲಹೆಗಾರ ಮಹಾದೇವಸ್ವಾಮಿ, ಉಪಾಧ್ಯಕ್ಷ ಎ.ಎನ್.ಗಜೇಂದ್ರ, ಮಹೇಂದ್ರ, ಸಿ.ಎಂ.ಮುರುಗೇಶ್ ಕುಮಾರ್, ನಂಜುಂಡ, ಬಿ.ರವಿಕುಮಾರ್, ನಾರಾಯಣ್, ಶ್ರೀನಿವಾಸ ಮೂರ್ತಿ, ಜಯಶಂಕರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆಯಲು ಯತ್ನಿಸಿರುವ ಘಟನೆಯನ್ನು ಪರಿಶಿಷ್ಟ ಜಾತಿ ನೌಕರರ ಕ್ಷೇಮಾಭಿವೃದ್ಧಿ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ ಹೇಳಿದರು.</p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವರ್ತನೆ ಖಂಡನೀಯ. ಆರೋಪಿಯನ್ನು ವಕೀಲ ವೃತ್ತಿಯಿಂದ ವಜಾಗೊಳಿಸಿ ದೇಶದಿಂದ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿದರು.</p>.<p>ಮಧ್ಯಪ್ರದೇಶದ ವಕೀಲ ಅನಿಲ್ ಮಿಶ್ರಾ ಎಂಬಾತ ಅಂಬೇಡ್ಕರ್ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದು ಅಂಬೇಡ್ಕರ್, ಸಂವಿಧಾನಕ್ಕೆ ಅಗೌರವ ತೋರಿಸಿರುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ವಕೀಲ ರಾಜೇಶ್ ಕಿಶೋರ್ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಅ.13ರಂದು ಸಂಜೆ 5 ಗಂಟೆಗೆ ಜಿಲ್ಲಾಡಳಿತ ಮುಂಭಾಗ ವಿರೋಧ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು. </p>.<p>ಸಭೆಯಲ್ಲಿ ಸಂಘದ ಗೌರವ ಸಲಹೆಗಾರ ಮಹಾದೇವಸ್ವಾಮಿ, ಉಪಾಧ್ಯಕ್ಷ ಎ.ಎನ್.ಗಜೇಂದ್ರ, ಮಹೇಂದ್ರ, ಸಿ.ಎಂ.ಮುರುಗೇಶ್ ಕುಮಾರ್, ನಂಜುಂಡ, ಬಿ.ರವಿಕುಮಾರ್, ನಾರಾಯಣ್, ಶ್ರೀನಿವಾಸ ಮೂರ್ತಿ, ಜಯಶಂಕರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>