ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ‘ಸಂಪುಟ ವಿಸ್ತರಣೆ ಮಾಡುವುದು ಮುಖ್ಯಮಂತ್ರಿಯವರ ಅಧಿಕಾರ. ಅದನ್ನು ಅವರು ನಿರ್ವಹಿಸುತ್ತಾರೆ. ಪಕ್ಷದ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷರ ಜವಾಬ್ದಾರಿ. ಅದನ್ನು ಅವರು ನಿರ್ವಹಿಸುತ್ತಾರೆ. ಮುಜರಾಯಿ ಸಚಿವನಾಗಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವನಾಗಿ ಅತ್ಯಂತ ಜವಾಬ್ದಾರಿಯಾಗಿ ಕರ್ತವ್ಯ ನಿರ್ವಹಿಸುವುದು ನನ್ನ ಹೊಣೆ. ನಾನು ಅದನ್ನು ನಿಭಾಯಿಸುತ್ತಿದ್ದೇನೆ’ ಎಂದು ಉತ್ತರಿಸಿದರು.