ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿವೃದ್ಧಿ ಪ್ರಾಧಿಕಾರ ರಚಿಸಿ, ದೊಡ್ಡ ಮೊತ್ತದ ಅನುದಾನ ನೀಡಿದ್ದರು. ಈಗ ಸರ್ಕಾರ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುತ್ತಿದೆ. ಕೆಲವೇ ದಿನಗಳಲ್ಲಿ ಮಲೆ ಮಹದೇಶ್ವರ ಕ್ಷೇತ್ರಕ್ಕೆ ಭೇಟಿನೀಡಿ, ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.