ತಾಲ್ಲೂಕಿನ ಹೆಗ್ಗವಾಡಿಯಲ್ಲಿ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಅನಂತ ಕುಮಾರ್ ಹೆಗಡೆ ಸಾಮಾನ್ಯ ವ್ಯಕ್ತಿಯಲ್ಲ. ಐದು ಬಾರಿ ಸಂಸದರಾದವರು. ಕೇಂದ್ರ ಸಚಿವರಾಗಿದ್ದವರು. ಅವರು ಇಂತಹ ಹೇಳಿಕೆ ನೀಡುತ್ತಾರೆ ಎಂದರೆ, ಪಕ್ಷದ ತೀರ್ಮಾನ ಇಲ್ಲದೆಯೇ ಹೇಳುವುದಕ್ಕಾಗುತ್ತದೆಯಾ? ಈ ಹಿಂದೆಯೂ, ತಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಿಸಲು ಎಂದು ಹೇಳಿಕೆ ನೀಡಿದ್ದರು. ಈಗ ಮೂರನೇ ಎರಡರಷ್ಟು ಬಹುಮತ ಬಂದರೆ ಸಂವಿಧಾನ ಬದಲಿಸುತ್ತೇವೆ ಎಂದಿದ್ದಾರೆ’ ಎಂದು ಟೀಕಿಸಿದರು.