‘ಘಟಕ ಈಗಾಗಲೇ ಕಾರ್ಯಾರಂಭ ಮಾಡಿದೆ. ಉತ್ಪನ್ನಗಳನ್ನೂ ತಯಾರಿಸುತ್ತಿದ್ದೇವೆ. ಸಚಿವರ ಮೂಲಕ ಅಧಿಕೃತವಾಗಿ ಉದ್ಘಾಟನೆ ಮಾಡುತ್ತಿದ್ದೇವೆ. ಕನಿಷ್ಠ 50 ಸಾವಿರ ತೆಂಗಿನಕಾಯಿಗಳನ್ನು ಸಂಸ್ಕರಿಸುವ ಸಾಮರ್ಥ್ಯ ಇದ್ದರೂ, ಕೋವಿಡ್ ಕಾರಣದಿಂದ 15 ಸಾವಿರದಿಂದ 20 ಸಾವಿರದಷ್ಟು ತೆಂಗಿನಕಾಯಿಗಳನ್ನು ಸಂಸ್ಕರಣೆ ಮಾಡುತ್ತಿದ್ದೇವೆ’ ಎಂದು ತಾಲ್ಲೂಕು ತೆಂಗು ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಂಘದ ಅಧ್ಯಕ್ಷ ಮಹೇಶ್ ಪ್ರಭು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.