‘ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಐದು ವರ್ಷಗಳ ಹಿಂದೆ ನಮ್ಮ ಕುಟುಂಬಕ್ಕೆ ಸಮುದಾಯದವರು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಹಾಗಾಗಿ, ನಾವು ತೋಟದ ಮನೆಯಲ್ಲಿ ವಾಸಿಸುತ್ತಿದ್ದೇವೆ. ಅಣ್ಣ ಮೃತಪಟ್ಟಿದ್ದು, ಅವನ ಅಂತ್ಯಸಂಸ್ಕಾರವನ್ನು ಗೌರವಯುತವಾಗಿ ನಡೆಸುವುದಕ್ಕೆ ಅವಕಾಶ ಕೊಡುತ್ತಿಲ್ಲ. ಜಮೀನು ವಿಚಾರದಲ್ಲಿ ತಾವು ಹೇಳಿದಂತೆ ನಡೆದರೆ ಮಾತ್ರ ಬರುವುದಾಗಿ ಹೇಳುತ್ತಿದ್ದಾರೆ’ ಎಂದು ಗುಂಡಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದರು.