<p><strong>ಚಾಮರಾಜನಗರ:</strong> ಜಿಲ್ಲೆಯ ಯಳಂದೂರು ವನ್ಯಜೀವಿ ಉಪವಿಭಾಗದ 122 ಗುತ್ತಿಗೆ ಸಿಬ್ಬಂದಿಗೆ ಸಕಾಲದಲ್ಲಿ ವೇತನ, ಭವಿಷ್ಯನಿಧಿ, ಇಎಸ್ಐ ಪಾವತಿಸದ ಆರೋಪದಲ್ಲಿ, ಮೈಸೂರಿನ ಆರ್.ಸಿ ಬಿಸಿನೆಸ್ ಸಲ್ಯೂಷನ್ ಕಂಪೆನಿಯನ್ನು ಎರಡು ವರ್ಷಗಳ ಅವಧಿಗೆ ಕಪ್ಪುಪಟ್ಟಿಗೆ ಸೇರಿಸಿ ಬಿರ್ಟಿ ಉಪ ಸಂರಕ್ಷಣಾಧಿಕಾರಿ ಶ್ರೀಪತಿ ಆದೇಶಿಸಿದ್ದಾರೆ.</p>.<p>ಸೆಪ್ಟೆಂಬರ್ 2024ರಿಂದ ಮಾರ್ಚ್ 2025ರವರೆಗೂ ಇಪಿಎಫ್, ಇಎಸ್ಐ ಪಾವತಿಸಿಲ್ಲವೆಂದು ಆರೋಪಿಸಿ ನೌಕರರು ಸಲ್ಲಿಸಿದ್ದ ದೂರನ್ನು ಪರಿಶೀಲಿಸಿದ ಅಧಿಕಾರಿಗಳು ಕಂಪನಿಗೆ ನೋಟಿಸ್ ಜಾರಿಗೊಳಿಸಿ, ಪಾವತಿ ರಶೀದಿ ಸಲ್ಲಿಸುವಂತೆ ಸೂಚಿಸಿದ್ದರು. ಕಂಪನಿಯು ದಾಖಲೆಗಳನ್ನು ಸಲ್ಲಿಸಿತ್ತು. ಬಳಿಕ ಆ ಬಗ್ಗೆ ದಾಖಲೆ ನೀಡುವಂತೆ ಅಧಿಕಾರಿಗಳು ಭವಿಷ್ಯನಿಧಿ ಕಚೇರಿಗೆ ಪತ್ರ ಬರೆದಿದ್ದರು. ಪರಿಶೀಲನೆ ವೇಳೆ, ಪಿಎಫ್ ಪಾವತಿಸಲು ಚಲನ್ ಮಾತ್ರ ತುಂಬಿದ್ದ ಕಂಪನಿಯು ಹಣ ಪಾವತಿಸದಿರುವುದು ಕಂಡುಬಂತು. ಯಳಂದೂರು ಎಸಿಎಫ್ ನೇತೃತ್ವದಲ್ಲಿ ಸಮಿತಿ ರಚಿಸಿ, ತನಿಖೆ ನಡೆಸಿದಾಗ ಲೋಪ ಖಚಿತಪಟ್ಟಿತ್ತು.</p>.<p>‘ಟೆಂಡರ್ ಸಮಯದಲ್ಲಿ ಕಂಪನಿಯಿಂದ ಪಡೆದಿದ್ದ ಭದ್ರತಾ ಠೇವಣಿಯನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ’ ಎಂದುಡಿಸಿಎಫ್ ಶ್ರೀಪತಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸಿಬ್ಬಂದಿಗೆ ಇಪಿಎಫ್, ಇಎಸ್ಐ ವಂತಿಗೆ ಪಾವತಿಸದಿರುವುದು ದುರದೃಷ್ಟಕರ. ಸರ್ಕಾರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ವನ್ಯಜೀವಿ ಸಂರಕ್ಷಣಾವಾದಿ ಗಿರಿಧರ ಕುಲಕರ್ಣಿ ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಜಿಲ್ಲೆಯ ಯಳಂದೂರು ವನ್ಯಜೀವಿ ಉಪವಿಭಾಗದ 122 ಗುತ್ತಿಗೆ ಸಿಬ್ಬಂದಿಗೆ ಸಕಾಲದಲ್ಲಿ ವೇತನ, ಭವಿಷ್ಯನಿಧಿ, ಇಎಸ್ಐ ಪಾವತಿಸದ ಆರೋಪದಲ್ಲಿ, ಮೈಸೂರಿನ ಆರ್.ಸಿ ಬಿಸಿನೆಸ್ ಸಲ್ಯೂಷನ್ ಕಂಪೆನಿಯನ್ನು ಎರಡು ವರ್ಷಗಳ ಅವಧಿಗೆ ಕಪ್ಪುಪಟ್ಟಿಗೆ ಸೇರಿಸಿ ಬಿರ್ಟಿ ಉಪ ಸಂರಕ್ಷಣಾಧಿಕಾರಿ ಶ್ರೀಪತಿ ಆದೇಶಿಸಿದ್ದಾರೆ.</p>.<p>ಸೆಪ್ಟೆಂಬರ್ 2024ರಿಂದ ಮಾರ್ಚ್ 2025ರವರೆಗೂ ಇಪಿಎಫ್, ಇಎಸ್ಐ ಪಾವತಿಸಿಲ್ಲವೆಂದು ಆರೋಪಿಸಿ ನೌಕರರು ಸಲ್ಲಿಸಿದ್ದ ದೂರನ್ನು ಪರಿಶೀಲಿಸಿದ ಅಧಿಕಾರಿಗಳು ಕಂಪನಿಗೆ ನೋಟಿಸ್ ಜಾರಿಗೊಳಿಸಿ, ಪಾವತಿ ರಶೀದಿ ಸಲ್ಲಿಸುವಂತೆ ಸೂಚಿಸಿದ್ದರು. ಕಂಪನಿಯು ದಾಖಲೆಗಳನ್ನು ಸಲ್ಲಿಸಿತ್ತು. ಬಳಿಕ ಆ ಬಗ್ಗೆ ದಾಖಲೆ ನೀಡುವಂತೆ ಅಧಿಕಾರಿಗಳು ಭವಿಷ್ಯನಿಧಿ ಕಚೇರಿಗೆ ಪತ್ರ ಬರೆದಿದ್ದರು. ಪರಿಶೀಲನೆ ವೇಳೆ, ಪಿಎಫ್ ಪಾವತಿಸಲು ಚಲನ್ ಮಾತ್ರ ತುಂಬಿದ್ದ ಕಂಪನಿಯು ಹಣ ಪಾವತಿಸದಿರುವುದು ಕಂಡುಬಂತು. ಯಳಂದೂರು ಎಸಿಎಫ್ ನೇತೃತ್ವದಲ್ಲಿ ಸಮಿತಿ ರಚಿಸಿ, ತನಿಖೆ ನಡೆಸಿದಾಗ ಲೋಪ ಖಚಿತಪಟ್ಟಿತ್ತು.</p>.<p>‘ಟೆಂಡರ್ ಸಮಯದಲ್ಲಿ ಕಂಪನಿಯಿಂದ ಪಡೆದಿದ್ದ ಭದ್ರತಾ ಠೇವಣಿಯನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ’ ಎಂದುಡಿಸಿಎಫ್ ಶ್ರೀಪತಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸಿಬ್ಬಂದಿಗೆ ಇಪಿಎಫ್, ಇಎಸ್ಐ ವಂತಿಗೆ ಪಾವತಿಸದಿರುವುದು ದುರದೃಷ್ಟಕರ. ಸರ್ಕಾರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ವನ್ಯಜೀವಿ ಸಂರಕ್ಷಣಾವಾದಿ ಗಿರಿಧರ ಕುಲಕರ್ಣಿ ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>