<p><strong>ಚಾಮರಾಜನಗರ</strong>: ಮುಂಬರುವ ವಿಧಾನಸಭಾ ಚುನಾವಣೆಗಾಗಿ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಪೈಕಿ ಮೂರಕ್ಕೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ.</p>.<p>ಎಐಸಿಸಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ, ಚಾಮರಾಜನಗರ ಕ್ಷೇತ್ರಕ್ಕೆ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಹನೂರು ಕ್ಷೇತ್ರಕ್ಕೆ ಹಾಲಿ ಶಾಸಕ ಆರ್.ನರೇಂದ್ರ ಮತ್ತು ಗುಂಡ್ಲುಪೇಟೆ ಕ್ಷೇತ್ರಕ್ಕೆ ಯುವ ಮುಖಂಡ ಎಚ್.ಎಂ.ಗಣೇಶ್ ಪ್ರಸಾದ್ ಅವರ ಹೆಸರುಗಳನ್ನು ಘೋಷಿಸಲಾಗಿದೆ.</p>.<p>ಮೂವರು ಆಕಾಂಕ್ಷಿಗಳಿರುವ ಕೊಳ್ಳೇಗಾಲ ಕ್ಷೇತ್ರದ ಅಭ್ಯರ್ಥಿ ಹೆಸರು ಇನ್ನೂ ಅಂತಿಮಗೊಂಡಿಲ್ಲ.</p>.<p>ಕೆಪಿಸಿಸಿಯು ಆಕಾಂಕ್ಷಿಗಳಿಂದ ಟಿಕೆಟ್ ಗಾಗಿ ಅರ್ಜಿ ಆಹ್ವಾನಿಸಿದಾಗ ಚಾಮರಾಜನಗರದಿಂದ ಪುಟ್ಟರಂಗಶೆಟ್ಟಿ ಒಬ್ಬರೇ ಅರ್ಜಿ ಹಾಕಿದ್ದರು.</p>.<p>ಗುಂಡ್ಲುಪೇಟೆಯಿಂದ ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಮಗ ಗಣೇಶ್ ಪ್ರಸಾದ್ ಹಾಗೂ ಮತ್ತೊಬ್ಬ ಮುಖಂಡ ಎಚ್.ಎಸ್.ನಂಜಪ್ಪ ಅರ್ಜಿ ಸಲ್ಲಿಸಿದ್ದರು. ಹನೂರಿನಿಂದ ಆರ್.ನರೇಂದ್ರ ಮತ್ತು ಮುಖಂಡ ನಾಗೇಂದ್ರ ಎಂಬುವವರು ಟಿಕೆಟ್ ಬಯಸಿದ್ದರು.</p>.<p>ವರಿಷ್ಠರು ಎರಡು ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಹಾಗೂ ಗುಂಡ್ಲುಪೇಟೆಯಲ್ಲಿ ಮಹದೇವ ಪ್ರಸಾದ್ ಅವರ ಮಗನಿಗೆ ಮಣೆ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಮುಂಬರುವ ವಿಧಾನಸಭಾ ಚುನಾವಣೆಗಾಗಿ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಪೈಕಿ ಮೂರಕ್ಕೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ.</p>.<p>ಎಐಸಿಸಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ, ಚಾಮರಾಜನಗರ ಕ್ಷೇತ್ರಕ್ಕೆ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಹನೂರು ಕ್ಷೇತ್ರಕ್ಕೆ ಹಾಲಿ ಶಾಸಕ ಆರ್.ನರೇಂದ್ರ ಮತ್ತು ಗುಂಡ್ಲುಪೇಟೆ ಕ್ಷೇತ್ರಕ್ಕೆ ಯುವ ಮುಖಂಡ ಎಚ್.ಎಂ.ಗಣೇಶ್ ಪ್ರಸಾದ್ ಅವರ ಹೆಸರುಗಳನ್ನು ಘೋಷಿಸಲಾಗಿದೆ.</p>.<p>ಮೂವರು ಆಕಾಂಕ್ಷಿಗಳಿರುವ ಕೊಳ್ಳೇಗಾಲ ಕ್ಷೇತ್ರದ ಅಭ್ಯರ್ಥಿ ಹೆಸರು ಇನ್ನೂ ಅಂತಿಮಗೊಂಡಿಲ್ಲ.</p>.<p>ಕೆಪಿಸಿಸಿಯು ಆಕಾಂಕ್ಷಿಗಳಿಂದ ಟಿಕೆಟ್ ಗಾಗಿ ಅರ್ಜಿ ಆಹ್ವಾನಿಸಿದಾಗ ಚಾಮರಾಜನಗರದಿಂದ ಪುಟ್ಟರಂಗಶೆಟ್ಟಿ ಒಬ್ಬರೇ ಅರ್ಜಿ ಹಾಕಿದ್ದರು.</p>.<p>ಗುಂಡ್ಲುಪೇಟೆಯಿಂದ ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಮಗ ಗಣೇಶ್ ಪ್ರಸಾದ್ ಹಾಗೂ ಮತ್ತೊಬ್ಬ ಮುಖಂಡ ಎಚ್.ಎಸ್.ನಂಜಪ್ಪ ಅರ್ಜಿ ಸಲ್ಲಿಸಿದ್ದರು. ಹನೂರಿನಿಂದ ಆರ್.ನರೇಂದ್ರ ಮತ್ತು ಮುಖಂಡ ನಾಗೇಂದ್ರ ಎಂಬುವವರು ಟಿಕೆಟ್ ಬಯಸಿದ್ದರು.</p>.<p>ವರಿಷ್ಠರು ಎರಡು ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಹಾಗೂ ಗುಂಡ್ಲುಪೇಟೆಯಲ್ಲಿ ಮಹದೇವ ಪ್ರಸಾದ್ ಅವರ ಮಗನಿಗೆ ಮಣೆ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>