<p><strong>ಚಾಮರಾಜನಗರ</strong>: ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರಿಗೆ ಅನುಕೂಲ ಮಾಡಿದೆ. ಹಾಗಾಗಿ, ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್ ಬೆಂಬಲಿಸಬೇಕು’ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಸಾಂಸ್ಕೃತಿಕ ಸಮಿತಿ ಅಧ್ಯಕ್ಷೆ ಶ್ವೇತಾ ಮಡಪ್ಪಾಡಿ ಬುಧವಾರ ಹೇಳಿದರು. </p>.<p>ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಸರ್ಕಾರ ಶಕ್ತಿ ಯೋಜನೆಯಡಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ತಿಂಗಳಿಗೆ ₹2000 ನೀಡುತ್ತಿದೆ. ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ’ ಎಂದು ಹೇಳಿದರು. </p>.<p>'ಕೇಂದ್ರದ ಬಿಜೆಪಿ ಸರ್ಕಾರ ಮಹಿಳೆಯರ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿಲ್ಲ. 2019ರಿಂದ 2021ರವರೆಗೆ ದೇಶದಲ್ಲಿ 13.13 ಲಕ್ಷ ಮಹಿಳೆಯರು ಕಾಣೆಯಾಗಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರ ಮಾತನಾಡುತ್ತಿಲ್ಲ. ಮಹಿಳೆಯರ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ. ಕ್ರೀಡಾಕೂಟಗಳಲ್ಲಿ ದೇಶಕ್ಕೆ ಗೌರವ ತಂದು ಕೊಟ್ಟ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದರೆ, ಆರೋಪ ಹೊತ್ತ ವ್ಯಕ್ತಿಗಳನ್ನು ಬಿಜೆಪಿ ಬೆಂಬಲಿಸಿದೆ’ ಎಂದು ದೂರಿದರು. </p>.<p>‘ಬಿಜೆಪಿ ಸಂವಿಧಾನದ ವಿರುದ್ಧವಾಗಿ ಮಾತನಾಡುತ್ತಿದೆ. ಸಂವಿಧಾನದ ಆಶಯಗಳಾದ ಜಾತ್ಯತೀತ, ಪ್ರಜಾಸತ್ತಾತ್ಮಕ ನಿಲುವಿಗೆ ವಿರುದ್ಧವಾಗಿ ಆಡಳಿತವನ್ನೇ ಧಾರ್ಮಿಕೀಕರಣಗೊಳಿಸಲು ಹೊರಟಿದೆ. ಬಿಜೆಪಿಗೆ ಮತ ಹಾಕಿದರೆ ದೇಶದ ಆರ್ಥಿಕ ಸ್ಥಿತಿ ಕ್ಷೀಣಿಸಿ ಸಾಮಾಜಿಕ ಅನ್ಯಾಯ ಹೆಚ್ಚಾಗಲಿದೆ’ ಎಂದು ಶ್ವೇತಾ ಹೇಳಿದರು. </p>.<p>‘ಚಾಮರಾಜನಗರದ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ರಾಜಕೀಯ ಹಿನ್ನಲೆ ಇದೆ. ಅವರಿಗೆ ಜನರ ಬೇಕು ಬೇಡಗಳು ಅರ್ಥವಾಗುತ್ತವೆ. ಹಾಗಾಗಿ ಬೋಸ್ ಅವರನ್ನು ಗೆಲ್ಲಿಸಿ, ಈ ದೇಶದ ಗೆಲುವಿಗೆ ಕ್ಷೇತ್ರದ ಜನರು ಕಾರಣರಾಗಬೇಕು. ಜಿಲ್ಲೆಯ ಜನರ ಮೇಲೆ ಸಿದ್ದರಾಮಯ್ಯ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಅದನ್ನು ಮತದಾರರು ಉಳಿಸಿಕೊಳ್ಳಬೇಕಿದೆ. ಹಾಗಾಗಿ, ನಮ್ಮ ಅಭ್ಯರ್ಥಿಯನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು. </p>.<p>ದರ್ಶನ್, ನಾಗರಾಜು, ಪರಶಿವಮೂರ್ತಿ, ವಿಷ್ಣುಪ್ರಿಯ, ಮರಿಯಾಲಹುಂಡಿ ಕುಮಾರ್, ನಟರಾಜು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರಿಗೆ ಅನುಕೂಲ ಮಾಡಿದೆ. ಹಾಗಾಗಿ, ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್ ಬೆಂಬಲಿಸಬೇಕು’ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಸಾಂಸ್ಕೃತಿಕ ಸಮಿತಿ ಅಧ್ಯಕ್ಷೆ ಶ್ವೇತಾ ಮಡಪ್ಪಾಡಿ ಬುಧವಾರ ಹೇಳಿದರು. </p>.<p>ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಸರ್ಕಾರ ಶಕ್ತಿ ಯೋಜನೆಯಡಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ತಿಂಗಳಿಗೆ ₹2000 ನೀಡುತ್ತಿದೆ. ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ’ ಎಂದು ಹೇಳಿದರು. </p>.<p>'ಕೇಂದ್ರದ ಬಿಜೆಪಿ ಸರ್ಕಾರ ಮಹಿಳೆಯರ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿಲ್ಲ. 2019ರಿಂದ 2021ರವರೆಗೆ ದೇಶದಲ್ಲಿ 13.13 ಲಕ್ಷ ಮಹಿಳೆಯರು ಕಾಣೆಯಾಗಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರ ಮಾತನಾಡುತ್ತಿಲ್ಲ. ಮಹಿಳೆಯರ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ. ಕ್ರೀಡಾಕೂಟಗಳಲ್ಲಿ ದೇಶಕ್ಕೆ ಗೌರವ ತಂದು ಕೊಟ್ಟ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದರೆ, ಆರೋಪ ಹೊತ್ತ ವ್ಯಕ್ತಿಗಳನ್ನು ಬಿಜೆಪಿ ಬೆಂಬಲಿಸಿದೆ’ ಎಂದು ದೂರಿದರು. </p>.<p>‘ಬಿಜೆಪಿ ಸಂವಿಧಾನದ ವಿರುದ್ಧವಾಗಿ ಮಾತನಾಡುತ್ತಿದೆ. ಸಂವಿಧಾನದ ಆಶಯಗಳಾದ ಜಾತ್ಯತೀತ, ಪ್ರಜಾಸತ್ತಾತ್ಮಕ ನಿಲುವಿಗೆ ವಿರುದ್ಧವಾಗಿ ಆಡಳಿತವನ್ನೇ ಧಾರ್ಮಿಕೀಕರಣಗೊಳಿಸಲು ಹೊರಟಿದೆ. ಬಿಜೆಪಿಗೆ ಮತ ಹಾಕಿದರೆ ದೇಶದ ಆರ್ಥಿಕ ಸ್ಥಿತಿ ಕ್ಷೀಣಿಸಿ ಸಾಮಾಜಿಕ ಅನ್ಯಾಯ ಹೆಚ್ಚಾಗಲಿದೆ’ ಎಂದು ಶ್ವೇತಾ ಹೇಳಿದರು. </p>.<p>‘ಚಾಮರಾಜನಗರದ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ರಾಜಕೀಯ ಹಿನ್ನಲೆ ಇದೆ. ಅವರಿಗೆ ಜನರ ಬೇಕು ಬೇಡಗಳು ಅರ್ಥವಾಗುತ್ತವೆ. ಹಾಗಾಗಿ ಬೋಸ್ ಅವರನ್ನು ಗೆಲ್ಲಿಸಿ, ಈ ದೇಶದ ಗೆಲುವಿಗೆ ಕ್ಷೇತ್ರದ ಜನರು ಕಾರಣರಾಗಬೇಕು. ಜಿಲ್ಲೆಯ ಜನರ ಮೇಲೆ ಸಿದ್ದರಾಮಯ್ಯ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಅದನ್ನು ಮತದಾರರು ಉಳಿಸಿಕೊಳ್ಳಬೇಕಿದೆ. ಹಾಗಾಗಿ, ನಮ್ಮ ಅಭ್ಯರ್ಥಿಯನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು. </p>.<p>ದರ್ಶನ್, ನಾಗರಾಜು, ಪರಶಿವಮೂರ್ತಿ, ವಿಷ್ಣುಪ್ರಿಯ, ಮರಿಯಾಲಹುಂಡಿ ಕುಮಾರ್, ನಟರಾಜು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>