ಅಭಿವೃದ್ಧಿ ಕೆಲಸ ಪ್ರತಿ ಮನೆಗೂ ತಲುಪಿಸಿ
ಸರ್ಕಾರದ ಯೋಜನೆ ಹಾಗೂ ಅಭಿವೃದ್ಧಿ ಕೆಲಸಗಳ ಬಗ್ಗೆ ಗ್ರಾಮದ ಪ್ರತಿ ಮನೆ ಮನೆಗೂ ತಿಳಿಸುವ ಕೆಲಸ ಮಾಡಬೇಕು. ಇದರಿಂದ ಪಕ್ಷ ಸಂಘಟನೆಗೆ ಮುಂದಿನ ದಿನಗಳಲ್ಲಿ ಅನುಕೂಲವಾಗಲಿದೆ. ಜೊತೆಗೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರಲು ಸಹಕಾರಿಯಾಗುತ್ತದೆ. ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷ ಅಧಿಕಾರಕ್ಕೆ ತಂದರೆ ನಮ್ಮ ಕೆಲಸ ಜನರಿಗೆ ತಲುಪಿದೆ ಎಂದು ರಾಜ್ಯ ನಾಯಕರಿಗೆ ಸಂದೇಶ ಕೊಡಬಹದು. ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಯನ್ನು ಎಲ್ಲರ ಅಭಿಪ್ರಾಯ ಸಂಗ್ರಹಿಸಿಯೇ ಆಯ್ಕೆ ಮಾಡಿರುತ್ತೇವೆ. ಅವರನ್ನು ಬೆಂಬಲಿಸಬೇಕು. ಜೊತೆಗೆ ಸಂಘಟನೆ ವಿಚಾರದಲ್ಲಿ ಶಕ್ತಿ ಮೀರಿ ಕೆಲಸ ಮಾಡಬೇಕು ಎಂದು ಗಣೇಶ್ ಪ್ರಸಾದ್ ಸಲಹೆ ನೀಡಿದರು.