‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಬಸ್ ಯಾತ್ರೆ ಬರಲಿದ್ದು, ಟೋಲ್ಗೇಟ್ ಬಳಿ ಸ್ವಾಗತಿಸಿ, ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಡಿವಿಯೇಷನ್ ರಸ್ತೆ, ಸುಲ್ತಾನ್ ಷರೀಫ್ ರಸ್ತೆ, ದೊಡ್ಡಂಗಡಿ ಬೀದಿ ಮಾರ್ಗವಾಗಿ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ನಂತರ ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತದ ಮೂಲಕ ರೇಷ್ಮೆ ಕಾರ್ಖಾನೆಯ ಹತ್ತಿರ ಮೈದಾನದಲ್ಲಿರುವ ಹಾಕಿರುವ ಬೃಹತ್ ವೇದಿಕೆಯಲ್ಲಿ ಸಮಾವೇಶ ನಡೆಯಲಿದೆ’ ಎಂದರು.