<p><strong>ಚಾಮರಾಜನಗರ:</strong> ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಶನಿವಾರ ಅಭಿಪ್ರಾಯಪಟ್ಟರು.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ, ರಂಗವಾಹಿನಿ ಹಾಗೂ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ‘ನಿಮ್ಮ ಸಂವಿಧಾನವನ್ನು ತಿಳಿದುಕೊಳ್ಳಿ: ನಾಗರಿಕ ಜಾಗೃತಿ ಸಂವಿಧಾನದ ದಿನ-2022’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘1949ರ ನ.26 ರಂದು ದೇಶದ ಸಂವಿಧಾನ ಅಂಗೀಕಾರ ಮಾಡಲಾಯಿತು. ಇದನ್ನು 1970 ಜನವರಿ 26 ರಂದು ಜಾರಿಗೆ ಬಂದಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮದಿಂದ ದೇಶಕ್ಕೆ ಉತ್ತಮ ಸಂವಿಧಾನ ರಚನೆಯಾಗಿದೆ’ ಎಂದರು.</p>.<p>‘ಶ್ರೇಷ್ಠವಾದ ಸಂವಿಧಾನ ರಚಿಸಿದ ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಅಲ್ಲದೇ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಹಕ್ಕುಗಳನ್ನು ನೀಡಿದ್ದು, ಅವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಜನರು ತಮ್ಮ ಹಕ್ಕುಗಳನ್ನು ಅನುಭವಿಸುವುದರ ಜೊತೆಗೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ದೇಶದಲ್ಲಿನ ಎಲ್ಲ ವರ್ಗದವರಿಗೂ ಸಂವಿಧಾನದಲ್ಲಿ ಸಮಾನವಾದ ಅವಕಾಶ ಕಲ್ಪಿಸಲಾಗಿದೆ. ಸಂವಿಧಾನದಡಿ ಸರ್ಕಾರಗಳು ಜನರಿಗೆ ಹಲವು ಸವಲತ್ತುಗಳನ್ನು ನೀಡುತ್ತಿದ್ದು, ಇದನ್ನು ಪ್ರತಿಯೊಬ್ಬರೂ ಸದ್ಬಳಕೆ ಮಾಡಿಕೊಳ್ಳಬೇಕು. ಆ ಮೂಲಕ ಎಲ್ಲರೂ ಒಂದೇ ಭಾವನೆ ಹೊಂದಬೇಕು’ ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.</p>.<p>ಮೈಸೂರು ಮಹಾರಾಜ ಕಾಲೇಜಿನ ಅರ್ಥಶಾಸ್ತ ವಿಭಾಗದ ಪ್ರಾಧ್ಯಾಪಕ ಪ್ರೊ. ವಿ. ಷಣ್ಮುಗಂ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪಿ.ದೇವರಾಜು, ರಂಗವಾಹಿನಿ ಟ್ರಸ್ಟ್ ಅಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ, ಪ್ರಾಧ್ಯಾಪಕಿ ಚಂದ್ರಮ್ಮ ಇತರರು ಇದ್ದರು.</p>.<p>ಸಂವಿಧಾನ ಗೌರವಿಸಿ:ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು ಎಂದು ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ನಿಶಾ ತಿಳಿಸಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ‘ಅಂಬೇಡ್ಕರ್ ಅವರು ದೇಶಕ್ಕೆ ಉತ್ತಮ ಸಂವಿಧಾನ ನೀಡಿದ್ದಾರೆ. ಸಂವಿಧಾನದ ಪೀಠಿಕೆಯನ್ನು ಪ್ರತಿಯೊಬ್ಬ ನಾಗರಿಕನೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆ ಮೂಲಕ ಉತ್ತಮ ವ್ಯಕ್ತಿಯಾಗಿ ಜೀವನ ಸಾಗಿಸಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ ಮಾತನಾಡಿ, ‘ದೇಶದ ಪ್ರತಿಯೊಬ್ಬ ನಾಗರಿಕನೂ ಸಂವಿಧಾನದ ಬಗ್ಗೆ ಅರಿವು ಹೊಂದಬೇಕು. ಅಲ್ಲದೆ ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯ ಪಾಲಿಸಬೇಕು. ಸಂವಿಧಾನದ ಆಶಯಗಳಿಗೆ ಧಕ್ಕೆಯಾಗದಂತೆ ಸಮಾಜದಲ್ಲಿ ಉತ್ತಮ ಜೀವನ ನಡೆಸಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ.ವಿರೂಪಾಕ್ಷಸ್ವಾಮಿ, ಪ್ರಾಧಿಕಾರದ ಸಿಬ್ಬಂದಿ, ನ್ಯಾಯಾಲಯದ ಸಿಬ್ಬಂದಿ, ಅರೆ ಕಾಲಿಕ ಕಾನೂನು ಸ್ವಯಂ ಸೇವಕರು ಇದ್ದರು.</p>.<p class="Briefhead">ಜಿಲ್ಲಾಡಳಿತದಿಂದಲೂ ಆಚರಣೆ</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.</p>.<p>ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ ಸೇರಿದಂತೆ ಇತರರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ನೆರವೇರಿಸಿದರು.</p>.<p>ಜಿಲ್ಲಾಧಿಕಾರಿ ರಮೇಶ್ ಭಾರತ ಸಂವಿಧಾನ ಪ್ರಸ್ತಾವನೆಯ ಪೀಠಿಕೆಯನ್ನು ಬೋಧಿಸಿದರು. ಇದೇ ವೇಳೆ ಗಣ್ಯರು ಸಮಾಜ ಕಲ್ಯಾಣ ಇಲಾಖೆ ಡಾ. ಬಿ.ಆರ್.ಅಂಬೇಡ್ಕರ್ ಸಂಶೋಧನಾ ಕೇಂದ್ರವು ಪ್ರಕಟಿಸಿರುವ ಭಾರತ ಸಂವಿಧಾನ ಪುಸ್ತಕ ಬಿಡುಗಡೆಗೊಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ್, ತಹಶೀಲ್ದಾರ್ ಬಸವರಾಜು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಶನಿವಾರ ಅಭಿಪ್ರಾಯಪಟ್ಟರು.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ, ರಂಗವಾಹಿನಿ ಹಾಗೂ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ‘ನಿಮ್ಮ ಸಂವಿಧಾನವನ್ನು ತಿಳಿದುಕೊಳ್ಳಿ: ನಾಗರಿಕ ಜಾಗೃತಿ ಸಂವಿಧಾನದ ದಿನ-2022’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘1949ರ ನ.26 ರಂದು ದೇಶದ ಸಂವಿಧಾನ ಅಂಗೀಕಾರ ಮಾಡಲಾಯಿತು. ಇದನ್ನು 1970 ಜನವರಿ 26 ರಂದು ಜಾರಿಗೆ ಬಂದಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮದಿಂದ ದೇಶಕ್ಕೆ ಉತ್ತಮ ಸಂವಿಧಾನ ರಚನೆಯಾಗಿದೆ’ ಎಂದರು.</p>.<p>‘ಶ್ರೇಷ್ಠವಾದ ಸಂವಿಧಾನ ರಚಿಸಿದ ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಅಲ್ಲದೇ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಹಕ್ಕುಗಳನ್ನು ನೀಡಿದ್ದು, ಅವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಜನರು ತಮ್ಮ ಹಕ್ಕುಗಳನ್ನು ಅನುಭವಿಸುವುದರ ಜೊತೆಗೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ದೇಶದಲ್ಲಿನ ಎಲ್ಲ ವರ್ಗದವರಿಗೂ ಸಂವಿಧಾನದಲ್ಲಿ ಸಮಾನವಾದ ಅವಕಾಶ ಕಲ್ಪಿಸಲಾಗಿದೆ. ಸಂವಿಧಾನದಡಿ ಸರ್ಕಾರಗಳು ಜನರಿಗೆ ಹಲವು ಸವಲತ್ತುಗಳನ್ನು ನೀಡುತ್ತಿದ್ದು, ಇದನ್ನು ಪ್ರತಿಯೊಬ್ಬರೂ ಸದ್ಬಳಕೆ ಮಾಡಿಕೊಳ್ಳಬೇಕು. ಆ ಮೂಲಕ ಎಲ್ಲರೂ ಒಂದೇ ಭಾವನೆ ಹೊಂದಬೇಕು’ ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.</p>.<p>ಮೈಸೂರು ಮಹಾರಾಜ ಕಾಲೇಜಿನ ಅರ್ಥಶಾಸ್ತ ವಿಭಾಗದ ಪ್ರಾಧ್ಯಾಪಕ ಪ್ರೊ. ವಿ. ಷಣ್ಮುಗಂ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪಿ.ದೇವರಾಜು, ರಂಗವಾಹಿನಿ ಟ್ರಸ್ಟ್ ಅಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ, ಪ್ರಾಧ್ಯಾಪಕಿ ಚಂದ್ರಮ್ಮ ಇತರರು ಇದ್ದರು.</p>.<p>ಸಂವಿಧಾನ ಗೌರವಿಸಿ:ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು ಎಂದು ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ನಿಶಾ ತಿಳಿಸಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ‘ಅಂಬೇಡ್ಕರ್ ಅವರು ದೇಶಕ್ಕೆ ಉತ್ತಮ ಸಂವಿಧಾನ ನೀಡಿದ್ದಾರೆ. ಸಂವಿಧಾನದ ಪೀಠಿಕೆಯನ್ನು ಪ್ರತಿಯೊಬ್ಬ ನಾಗರಿಕನೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆ ಮೂಲಕ ಉತ್ತಮ ವ್ಯಕ್ತಿಯಾಗಿ ಜೀವನ ಸಾಗಿಸಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ ಮಾತನಾಡಿ, ‘ದೇಶದ ಪ್ರತಿಯೊಬ್ಬ ನಾಗರಿಕನೂ ಸಂವಿಧಾನದ ಬಗ್ಗೆ ಅರಿವು ಹೊಂದಬೇಕು. ಅಲ್ಲದೆ ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯ ಪಾಲಿಸಬೇಕು. ಸಂವಿಧಾನದ ಆಶಯಗಳಿಗೆ ಧಕ್ಕೆಯಾಗದಂತೆ ಸಮಾಜದಲ್ಲಿ ಉತ್ತಮ ಜೀವನ ನಡೆಸಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ.ವಿರೂಪಾಕ್ಷಸ್ವಾಮಿ, ಪ್ರಾಧಿಕಾರದ ಸಿಬ್ಬಂದಿ, ನ್ಯಾಯಾಲಯದ ಸಿಬ್ಬಂದಿ, ಅರೆ ಕಾಲಿಕ ಕಾನೂನು ಸ್ವಯಂ ಸೇವಕರು ಇದ್ದರು.</p>.<p class="Briefhead">ಜಿಲ್ಲಾಡಳಿತದಿಂದಲೂ ಆಚರಣೆ</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.</p>.<p>ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ ಸೇರಿದಂತೆ ಇತರರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ನೆರವೇರಿಸಿದರು.</p>.<p>ಜಿಲ್ಲಾಧಿಕಾರಿ ರಮೇಶ್ ಭಾರತ ಸಂವಿಧಾನ ಪ್ರಸ್ತಾವನೆಯ ಪೀಠಿಕೆಯನ್ನು ಬೋಧಿಸಿದರು. ಇದೇ ವೇಳೆ ಗಣ್ಯರು ಸಮಾಜ ಕಲ್ಯಾಣ ಇಲಾಖೆ ಡಾ. ಬಿ.ಆರ್.ಅಂಬೇಡ್ಕರ್ ಸಂಶೋಧನಾ ಕೇಂದ್ರವು ಪ್ರಕಟಿಸಿರುವ ಭಾರತ ಸಂವಿಧಾನ ಪುಸ್ತಕ ಬಿಡುಗಡೆಗೊಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ್, ತಹಶೀಲ್ದಾರ್ ಬಸವರಾಜು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>