<p><strong>ಚಾಮರಾಜನಗರ:</strong> ‘ಸಂವಿಧಾನ ಹಾಗೂ ನೆಲದ ಕಾನೂನುಗಳನ್ನು ಗೌರವಿಸಿ ಪರಿಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ’ ಎಂದು ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ತಿಳಿಸಿದರು.</p>.<p>ತಾಲ್ಲೂಕಿನ ಅಮಚವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘1949 ನ.26ರಂದು ಸಂವಿಧಾನ ಅಂಗೀಕಾರವಾಗಿದ್ದು 1950ರ ಜ.26ರಂದು ಜಾರಿಗೆ ತರಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಪರಿಶ್ರಮದಿಂದ ದೇಶಕ್ಕೆ ಉತ್ತಮ ಸಂವಿಧಾನ ದೊರೆತಿದೆ’ ಎಂದರು.</p>.<p>‘ಸಂವಿಧಾನದಲ್ಲಿ ಪ್ರಯೊಬ್ಬರಿಗೂ ಹಕ್ಕುಗಳನ್ನು ನೀಡಲಾಗಿದ್ದು, ಅವುಗಳ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಜನರು ಹಕ್ಕುಗಳನ್ನು ಅನುಭವಿಸುವಂತೆ ಕರ್ತವ್ಯಗಳನ್ನೂ ಸರಿಯಾಗಿ ನಿರ್ವಹಿಸಬೇಕು’ ಎಂದರು.</p>.<p>ಉಪನ್ಯಾಸಕ ಸುರೇಶ್ ಎನ್.ಋಗ್ವೇದಿ ಮಾತನಾಡಿ, ‘ಅಂಬೇಡ್ಕರ್ ವಿಶ್ವದ ಜ್ಞಾನ ಭಂಡಾರವಾಗಿದ್ದು ಅವರು ಕೊಟ್ಟ ಸಂವಿಧಾನ ವಿಶಿಷ್ಟ ಹಾಗೂ ವಿಭಿನ್ನವಾಗಿದೆ. ಅವರ ವಿಚಾರಧಾರೆಗಳ ಅರಿವು ಪ್ರತಿಯೊಬ್ಬರಿಗೂ ಆಗಬೇಕಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ತರಬೇತಿ ಸಂಯೋಜಕ ಟಿ.ಜೆ.ಸುರೇಶ್ ಮಾತನಾಡಿ, ‘ಸಂವಿಧಾನ ಒಂದು ಸಮುದಾಯಕ್ಜೆ ಸೀಮಿತವಾಗದೆ ಸರ್ವರಿಗೂ ದಾರಿದೀಪವಾಗಿದೆ. ಪ್ರತಿಯೊಬ್ಬರೂ ಸಂವಿಧಾನದ ಪೀಠಿಕೆಯನ್ನು ಅರ್ಥೈಸಿಕೊಂಡು ಪರಿಪಾಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ತ್ರಿವೇಣಿ ಮಾತನಾಡಿ ‘ಮಹಿಳೆಯರು ಮತ್ತು ಮಕ್ಕಳಿಗೆ ನೀಡಿರುವ ಹಕ್ಕುಗಳನ್ನು ಅಗತ್ಯಬಿದ್ದಾಗ ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.</p><p>ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶಿವನಂಜಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿರು. ಉಪನ್ಯಾಸಕರಾದ ಮೂರ್ತಿ, ಬಸವಣ್ಣ, ಸುರೇಶ್, ಕಾವ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ‘ಸಂವಿಧಾನ ಹಾಗೂ ನೆಲದ ಕಾನೂನುಗಳನ್ನು ಗೌರವಿಸಿ ಪರಿಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ’ ಎಂದು ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ತಿಳಿಸಿದರು.</p>.<p>ತಾಲ್ಲೂಕಿನ ಅಮಚವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘1949 ನ.26ರಂದು ಸಂವಿಧಾನ ಅಂಗೀಕಾರವಾಗಿದ್ದು 1950ರ ಜ.26ರಂದು ಜಾರಿಗೆ ತರಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಪರಿಶ್ರಮದಿಂದ ದೇಶಕ್ಕೆ ಉತ್ತಮ ಸಂವಿಧಾನ ದೊರೆತಿದೆ’ ಎಂದರು.</p>.<p>‘ಸಂವಿಧಾನದಲ್ಲಿ ಪ್ರಯೊಬ್ಬರಿಗೂ ಹಕ್ಕುಗಳನ್ನು ನೀಡಲಾಗಿದ್ದು, ಅವುಗಳ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಜನರು ಹಕ್ಕುಗಳನ್ನು ಅನುಭವಿಸುವಂತೆ ಕರ್ತವ್ಯಗಳನ್ನೂ ಸರಿಯಾಗಿ ನಿರ್ವಹಿಸಬೇಕು’ ಎಂದರು.</p>.<p>ಉಪನ್ಯಾಸಕ ಸುರೇಶ್ ಎನ್.ಋಗ್ವೇದಿ ಮಾತನಾಡಿ, ‘ಅಂಬೇಡ್ಕರ್ ವಿಶ್ವದ ಜ್ಞಾನ ಭಂಡಾರವಾಗಿದ್ದು ಅವರು ಕೊಟ್ಟ ಸಂವಿಧಾನ ವಿಶಿಷ್ಟ ಹಾಗೂ ವಿಭಿನ್ನವಾಗಿದೆ. ಅವರ ವಿಚಾರಧಾರೆಗಳ ಅರಿವು ಪ್ರತಿಯೊಬ್ಬರಿಗೂ ಆಗಬೇಕಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ತರಬೇತಿ ಸಂಯೋಜಕ ಟಿ.ಜೆ.ಸುರೇಶ್ ಮಾತನಾಡಿ, ‘ಸಂವಿಧಾನ ಒಂದು ಸಮುದಾಯಕ್ಜೆ ಸೀಮಿತವಾಗದೆ ಸರ್ವರಿಗೂ ದಾರಿದೀಪವಾಗಿದೆ. ಪ್ರತಿಯೊಬ್ಬರೂ ಸಂವಿಧಾನದ ಪೀಠಿಕೆಯನ್ನು ಅರ್ಥೈಸಿಕೊಂಡು ಪರಿಪಾಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ತ್ರಿವೇಣಿ ಮಾತನಾಡಿ ‘ಮಹಿಳೆಯರು ಮತ್ತು ಮಕ್ಕಳಿಗೆ ನೀಡಿರುವ ಹಕ್ಕುಗಳನ್ನು ಅಗತ್ಯಬಿದ್ದಾಗ ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.</p><p>ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶಿವನಂಜಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿರು. ಉಪನ್ಯಾಸಕರಾದ ಮೂರ್ತಿ, ಬಸವಣ್ಣ, ಸುರೇಶ್, ಕಾವ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>