<p><strong>ಕೊಳ್ಳೇಗಾಲ</strong>: ನಟ ಉಪೇಂದ್ರ ಅವರು ಪರಿಶಿಷ್ಟ ಜಾತಿಯನ್ನು ಅವಮಾನಿಸಿದ್ದು ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ಆದಿ ದ್ರಾವಿಡ ಮೂಲ ನಿವಾಸಿಗಳ ಹೋರಾಟ ಸಮಿತಿಯವರು ಐದನೇ ದಿನವಾದ ಸೋಮವಾರವೂ ಪ್ರತಿಭಟನೆ ಮಾಡಿದರು.</p>.<p>ನಗರದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಸಮಿತಿಯವರು ಧರಣಿ ನಡೆಸಿ ಘೋಷಣೆ ಕೂಗಿದರು. ನಂತರ ಭೀಮ ನಗರದ ಮುಖಂಡ ಸಿದ್ದಾರ್ಥ ಮಾತನಾಡಿ, ನಿರಂತರವಾಗಿ ಧರಣಿ ಮಾಡಿದರು ಸಹ ಉಪೇಂದ್ರರನ್ನು ಬಂಧಿಸಿಲ್ಲ ಹಾಗಾಗಿ ದಲಿತ ಸಮುದಾಯಕ್ಕೆ ತುಂಬಾ ನೋವುಂಟಾಗಿದೆ ಈ ಕೂಡಲೇ ಉಪೇಂದ್ರರನ್ನು ಬಂಧಿಸದಿದ್ದರೇ ಪ್ರತಿನಿತ್ಯ ವಿನೂತನವಾಗಿ ಪ್ರತಿಭಟನೆ ನಡೆಸುವ ಮೂಲಕ ಹೋರಾಟ ನಡೆಸಲಾಗುವುದು ಎಂದರು.</p>.<p>ಪ್ರತಿಭಟನೆಯಲ್ಲಿ ಆದಿದ್ರಾವಿಡ ಮೂಲನಿವಾಸಿಗಳ ಹೋರಾಟ ಸಮಿತಿ ಸದಸ್ಯರು ಸಿದ್ದಯ್ಯನಪುರ ಕೆಂಪರಾಜು, ಸುರೇಶ್, ಸತ್ತೇಗಾಲ ನಂಜುಂಡಸ್ವಾಮಿ, ಕಣ್ಣೂರು ಶ್ರೀಕಂಠಮೂರ್ತಿ, ನಾಗರಾಜು ಹರಳೆ, ಪೂಜಾಯ್ಯ, ರಾಮಕೃಷ್ಣ, ದಶರಥ, ಬಸವರಾಜು, ಮರಯ್ಯ, ಲಿಂಗರಾಜು, ರಾಜಪ್ಪ, ಚಾಮರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ</strong>: ನಟ ಉಪೇಂದ್ರ ಅವರು ಪರಿಶಿಷ್ಟ ಜಾತಿಯನ್ನು ಅವಮಾನಿಸಿದ್ದು ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ಆದಿ ದ್ರಾವಿಡ ಮೂಲ ನಿವಾಸಿಗಳ ಹೋರಾಟ ಸಮಿತಿಯವರು ಐದನೇ ದಿನವಾದ ಸೋಮವಾರವೂ ಪ್ರತಿಭಟನೆ ಮಾಡಿದರು.</p>.<p>ನಗರದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಸಮಿತಿಯವರು ಧರಣಿ ನಡೆಸಿ ಘೋಷಣೆ ಕೂಗಿದರು. ನಂತರ ಭೀಮ ನಗರದ ಮುಖಂಡ ಸಿದ್ದಾರ್ಥ ಮಾತನಾಡಿ, ನಿರಂತರವಾಗಿ ಧರಣಿ ಮಾಡಿದರು ಸಹ ಉಪೇಂದ್ರರನ್ನು ಬಂಧಿಸಿಲ್ಲ ಹಾಗಾಗಿ ದಲಿತ ಸಮುದಾಯಕ್ಕೆ ತುಂಬಾ ನೋವುಂಟಾಗಿದೆ ಈ ಕೂಡಲೇ ಉಪೇಂದ್ರರನ್ನು ಬಂಧಿಸದಿದ್ದರೇ ಪ್ರತಿನಿತ್ಯ ವಿನೂತನವಾಗಿ ಪ್ರತಿಭಟನೆ ನಡೆಸುವ ಮೂಲಕ ಹೋರಾಟ ನಡೆಸಲಾಗುವುದು ಎಂದರು.</p>.<p>ಪ್ರತಿಭಟನೆಯಲ್ಲಿ ಆದಿದ್ರಾವಿಡ ಮೂಲನಿವಾಸಿಗಳ ಹೋರಾಟ ಸಮಿತಿ ಸದಸ್ಯರು ಸಿದ್ದಯ್ಯನಪುರ ಕೆಂಪರಾಜು, ಸುರೇಶ್, ಸತ್ತೇಗಾಲ ನಂಜುಂಡಸ್ವಾಮಿ, ಕಣ್ಣೂರು ಶ್ರೀಕಂಠಮೂರ್ತಿ, ನಾಗರಾಜು ಹರಳೆ, ಪೂಜಾಯ್ಯ, ರಾಮಕೃಷ್ಣ, ದಶರಥ, ಬಸವರಾಜು, ಮರಯ್ಯ, ಲಿಂಗರಾಜು, ರಾಜಪ್ಪ, ಚಾಮರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>