ಚಾಮರಾಜನಗರ: ಗುಂಡ್ಲುಪೇಟೆಯ ಮಹೇಶ್ ಹಾಗೂ ಕೊಳ್ಳೇಗಾಲದ ಸಹನಾ ಎಂಬುವವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂಬ ಸುದ್ದಿ ಟಿವಿ ವಾಹಿನಿಯೊಂದರಲ್ಲಿ ಬಿತ್ತರವಾದಂತಿರುವ ಫೋಟೊ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.
ಇದು ಸುಳ್ಳು ಸುದ್ದಿಯಾಗಿದ್ದು, ಹರಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ಅವರು ಎಸ್ ಪಿ ಎಚ್.ಡಿ.ಆನಂದ ಕುಮಾರ್ ಅವರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಒಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.