<p><strong>ಚಾಮರಾಜನಗರ: </strong>ಜಿಲ್ಲೆಯ ಠಾಣೆಯೊಂದರ ಎಎಸ್ಐಯೊಬ್ಬರು ಸೇರಿದಂತೆ ಇಬ್ಬರು ಕೋವಿಡ್ ಸೋಂಕಿತರು ಗುರುವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೈನಿಕರೊಬ್ಬರು ಮೃತಪಟ್ಟ ಮೊದಲ ಪ್ರಕರಣ ಇದು.</p>.<p>ಗುರುವಾರ ವರದಿಯಾದ ಎರಡೂ ಸಾವಿನ ಪ್ರಕರಣಗಳನ್ನು ಜಿಲ್ಲಾಡಳಿತವು ಕೋವಿಡ್ಯೇತರ ಕಾರಣದಿಂದ ಮೃತಪಟ್ಟವರ ಪಟ್ಟಿಗೆ ಸೇರಿಸಿದೆ.</p>.<p>56 ವರ್ಷದ ಎಎಸ್ಐ ಅವರು (ರೋಗಿಸಂಖ್ಯೆ 1,35,728) ಜುಲೈ 30ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಟೈಫಾಯ್ಡ್ನಿಂದಲೂ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸ್ವಲ್ಪ ಚೇತರಿಸಿದ್ದರು. ಗುರುವಾರ ಮೃತಪಟ್ಟಿದ್ದಾರೆ.</p>.<p>ಸರ್ಕಾರದ ಶಿಷ್ಟಾಚಾರದಂತೆ ಅವರ ಸ್ವಗ್ರಾಮ, ಗುಂಡ್ಲುಪೇಟೆ ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆದಿದೆ.</p>.<p>ಮೃತಪಟ್ಟ ಇನ್ನೊಬ್ಬರು ಹನೂರು ತಾಲ್ಲೂಕಿನ ಎಲ್ಲೇಮಾಳದ 64 ವರ್ಷದ ಮಹಿಳೆ (ರೋಗಿ ಸಂಖ್ಯೆ–2,06,844). ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ಇವರು, ಕೋಮಾದಲ್ಲಿದ್ದರು. ಬುಧವಾರ ಮನೆಯಲ್ಲಿ ಮೃತಪಟ್ಟಿದ್ದಾರೆ. ನಂತರ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೋವಿಡ್ ಇರುವುದು ದೃಢಪಟ್ಟಿದೆ.</p>.<p>ಈ ಎರಡು ಸಾವಿನ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಮೃತಪಟ್ಟ ಕೋವಿಡ್ ಸೋಂಕಿತರ ಸಂಖ್ಯೆ 28ಕ್ಕೆ ಏರಿದೆ.</p>.<p>ಜಿಲ್ಲಾಡಳಿತದ ಅಂಕಿ ಅಂಶಗಳ ಪ್ರಕಾರ,ಕೋವಿಡ್ ಕಾರಣದಿಂದ 17 ಜನರು ಮೃತಪಟ್ಟಿದ್ದರೆ, ಸೋಂಕು ಖಚಿತವಾಗಿದ್ದರೂ ಬೇರೆ ಅನಾರೋಗ್ಯದಿಂದಾಗಿ 11 ಮಂದಿ ಪ್ರಾಣಕಳೆದುಕೊಂಡಿದ್ದಾರೆ.</p>.<p class="Subhead">60 ಹೊಸ ಪ್ರಕರಣ: ಜಿಲ್ಲೆಯಲ್ಲಿ ಗುರುವಾರ 60 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದೆ. 54 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗಿನ ಸೋಂಕಿತರ ಸಂಖ್ಯೆ 1,432ಕ್ಕೆ, ಗುಣಮುಖರಾದವರ ಸಂಖ್ಯೆ 979ಕ್ಕೆ ಏರಿಕೆಯಾಗಿದೆ.</p>.<p>425 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ ಗುರುವಾರ ಇಬ್ಬರು ಸೇರಿದಂತೆ ಒಟ್ಟು 114 ಮಂದಿ ಹೋಂ ಐಸೊಲೇಷನ್ನಲ್ಲಿ ಇದ್ದಾರೆ. 22 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಜಿಲ್ಲೆಯಲ್ಲಿ ಗುರುವಾರ 588 ಮಂದಿಯ ಗಂಟಲು ದ್ರವದ ಮಾದರಿ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 577 ಪರೀಕ್ಷೆಗಳನ್ನು ಆರ್ಟಿಪಿಸಿಆರ್ ಹಾಗೂ 11 ಟ್ರು ನಾಟ್ ಪರೀಕ್ಷೆ ನಡೆಸಲಾಗಿದೆ. 528 ಮಂದಿಯ ವರದಿ ನೆಗೆಟಿವ್ ಬಂದಿದೆ.</p>.<p>ದೃಢಪಟ್ಟ 60 ಪ್ರಕರಣಗಳ ಪೈಕಿ, ಚಾಮರಾಜನಗರ ತಾಲ್ಲೂಕಿನಲ್ಲಿ 22, ಗುಂಡ್ಲುಪೇಟೆ 14, ಕೊಳ್ಳೇಗಾಲ ಮತ್ತು ಹನೂರು ತಾಲ್ಲೂಕುಗಳಲ್ಲಿ ತಲಾ 11, ಯಳಂದೂರು ತಾಲ್ಲೂಕಿನಲ್ಲಿ ಒಂದು ಪ್ರಕರಣ ವರದಿಯಾಗಿವೆ. ಸೋಂಕಿತರದಲ್ಲಿ ಹೊರ ಜಿಲ್ಲೆಯ ಇಬ್ಬರಿದ್ದಾರೆ.</p>.<p>ಗುಣಮುಖರಾದ 54 ಜನರ ಪೈಕಿ ಚಾಮರಾಜನಗರ ತಾಲ್ಲೂಕಿನ 22, ಗುಂಡ್ಲುಪೇಟೆಯ 14, ಯಳಂದೂರು ತಾಲ್ಲೂಕಿನ ಒಂಬತ್ತು, ಕೊಳ್ಳೇಹಾಲದ ಎಂಟು ಹಾಗೂ ಹನೂರು ತಾಲ್ಲೂಕಿನ ಒಬ್ಬರು ಇದ್ದಾರೆ.</p>.<p class="Briefhead"><strong>ಚಾಮರಾಜನಗರದಲ್ಲಿ ಹೆಚ್ಚು ಸಕ್ರಿಯ ಪ್ರಕರಣ</strong></p>.<p>ಜಿಲ್ಲೆಯಲ್ಲಿರುವ 425 ಸಕ್ರಿಯ ಪ್ರಕರಣಗಳ ಪೈಕಿ ಚಾಮರಾಜನಗರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂದರೆ 129 ಪ್ರಕರಣಗಳು ಇವೆ. 122 ಪ್ರಕರಣಗಳು ಕೊಳ್ಳೇಗಾಲದಲ್ಲಿದೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 83, ಯಳಂದೂರು 51, ಹನೂರು ತಾಲ್ಲೂಕಿನಲ್ಲಿ 38 ಸಕ್ರಿಯ ಪ್ರಕರಣಗಳಿವೆ. ಇನ್ನೆರಡು ಪ್ರಕರಣಗಳು ಹೊರ ಜಿಲ್ಲೆಯದ್ದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಜಿಲ್ಲೆಯ ಠಾಣೆಯೊಂದರ ಎಎಸ್ಐಯೊಬ್ಬರು ಸೇರಿದಂತೆ ಇಬ್ಬರು ಕೋವಿಡ್ ಸೋಂಕಿತರು ಗುರುವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೈನಿಕರೊಬ್ಬರು ಮೃತಪಟ್ಟ ಮೊದಲ ಪ್ರಕರಣ ಇದು.</p>.<p>ಗುರುವಾರ ವರದಿಯಾದ ಎರಡೂ ಸಾವಿನ ಪ್ರಕರಣಗಳನ್ನು ಜಿಲ್ಲಾಡಳಿತವು ಕೋವಿಡ್ಯೇತರ ಕಾರಣದಿಂದ ಮೃತಪಟ್ಟವರ ಪಟ್ಟಿಗೆ ಸೇರಿಸಿದೆ.</p>.<p>56 ವರ್ಷದ ಎಎಸ್ಐ ಅವರು (ರೋಗಿಸಂಖ್ಯೆ 1,35,728) ಜುಲೈ 30ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಟೈಫಾಯ್ಡ್ನಿಂದಲೂ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸ್ವಲ್ಪ ಚೇತರಿಸಿದ್ದರು. ಗುರುವಾರ ಮೃತಪಟ್ಟಿದ್ದಾರೆ.</p>.<p>ಸರ್ಕಾರದ ಶಿಷ್ಟಾಚಾರದಂತೆ ಅವರ ಸ್ವಗ್ರಾಮ, ಗುಂಡ್ಲುಪೇಟೆ ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆದಿದೆ.</p>.<p>ಮೃತಪಟ್ಟ ಇನ್ನೊಬ್ಬರು ಹನೂರು ತಾಲ್ಲೂಕಿನ ಎಲ್ಲೇಮಾಳದ 64 ವರ್ಷದ ಮಹಿಳೆ (ರೋಗಿ ಸಂಖ್ಯೆ–2,06,844). ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ಇವರು, ಕೋಮಾದಲ್ಲಿದ್ದರು. ಬುಧವಾರ ಮನೆಯಲ್ಲಿ ಮೃತಪಟ್ಟಿದ್ದಾರೆ. ನಂತರ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೋವಿಡ್ ಇರುವುದು ದೃಢಪಟ್ಟಿದೆ.</p>.<p>ಈ ಎರಡು ಸಾವಿನ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಮೃತಪಟ್ಟ ಕೋವಿಡ್ ಸೋಂಕಿತರ ಸಂಖ್ಯೆ 28ಕ್ಕೆ ಏರಿದೆ.</p>.<p>ಜಿಲ್ಲಾಡಳಿತದ ಅಂಕಿ ಅಂಶಗಳ ಪ್ರಕಾರ,ಕೋವಿಡ್ ಕಾರಣದಿಂದ 17 ಜನರು ಮೃತಪಟ್ಟಿದ್ದರೆ, ಸೋಂಕು ಖಚಿತವಾಗಿದ್ದರೂ ಬೇರೆ ಅನಾರೋಗ್ಯದಿಂದಾಗಿ 11 ಮಂದಿ ಪ್ರಾಣಕಳೆದುಕೊಂಡಿದ್ದಾರೆ.</p>.<p class="Subhead">60 ಹೊಸ ಪ್ರಕರಣ: ಜಿಲ್ಲೆಯಲ್ಲಿ ಗುರುವಾರ 60 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದೆ. 54 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗಿನ ಸೋಂಕಿತರ ಸಂಖ್ಯೆ 1,432ಕ್ಕೆ, ಗುಣಮುಖರಾದವರ ಸಂಖ್ಯೆ 979ಕ್ಕೆ ಏರಿಕೆಯಾಗಿದೆ.</p>.<p>425 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ ಗುರುವಾರ ಇಬ್ಬರು ಸೇರಿದಂತೆ ಒಟ್ಟು 114 ಮಂದಿ ಹೋಂ ಐಸೊಲೇಷನ್ನಲ್ಲಿ ಇದ್ದಾರೆ. 22 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಜಿಲ್ಲೆಯಲ್ಲಿ ಗುರುವಾರ 588 ಮಂದಿಯ ಗಂಟಲು ದ್ರವದ ಮಾದರಿ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 577 ಪರೀಕ್ಷೆಗಳನ್ನು ಆರ್ಟಿಪಿಸಿಆರ್ ಹಾಗೂ 11 ಟ್ರು ನಾಟ್ ಪರೀಕ್ಷೆ ನಡೆಸಲಾಗಿದೆ. 528 ಮಂದಿಯ ವರದಿ ನೆಗೆಟಿವ್ ಬಂದಿದೆ.</p>.<p>ದೃಢಪಟ್ಟ 60 ಪ್ರಕರಣಗಳ ಪೈಕಿ, ಚಾಮರಾಜನಗರ ತಾಲ್ಲೂಕಿನಲ್ಲಿ 22, ಗುಂಡ್ಲುಪೇಟೆ 14, ಕೊಳ್ಳೇಗಾಲ ಮತ್ತು ಹನೂರು ತಾಲ್ಲೂಕುಗಳಲ್ಲಿ ತಲಾ 11, ಯಳಂದೂರು ತಾಲ್ಲೂಕಿನಲ್ಲಿ ಒಂದು ಪ್ರಕರಣ ವರದಿಯಾಗಿವೆ. ಸೋಂಕಿತರದಲ್ಲಿ ಹೊರ ಜಿಲ್ಲೆಯ ಇಬ್ಬರಿದ್ದಾರೆ.</p>.<p>ಗುಣಮುಖರಾದ 54 ಜನರ ಪೈಕಿ ಚಾಮರಾಜನಗರ ತಾಲ್ಲೂಕಿನ 22, ಗುಂಡ್ಲುಪೇಟೆಯ 14, ಯಳಂದೂರು ತಾಲ್ಲೂಕಿನ ಒಂಬತ್ತು, ಕೊಳ್ಳೇಹಾಲದ ಎಂಟು ಹಾಗೂ ಹನೂರು ತಾಲ್ಲೂಕಿನ ಒಬ್ಬರು ಇದ್ದಾರೆ.</p>.<p class="Briefhead"><strong>ಚಾಮರಾಜನಗರದಲ್ಲಿ ಹೆಚ್ಚು ಸಕ್ರಿಯ ಪ್ರಕರಣ</strong></p>.<p>ಜಿಲ್ಲೆಯಲ್ಲಿರುವ 425 ಸಕ್ರಿಯ ಪ್ರಕರಣಗಳ ಪೈಕಿ ಚಾಮರಾಜನಗರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂದರೆ 129 ಪ್ರಕರಣಗಳು ಇವೆ. 122 ಪ್ರಕರಣಗಳು ಕೊಳ್ಳೇಗಾಲದಲ್ಲಿದೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 83, ಯಳಂದೂರು 51, ಹನೂರು ತಾಲ್ಲೂಕಿನಲ್ಲಿ 38 ಸಕ್ರಿಯ ಪ್ರಕರಣಗಳಿವೆ. ಇನ್ನೆರಡು ಪ್ರಕರಣಗಳು ಹೊರ ಜಿಲ್ಲೆಯದ್ದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>