ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿಯಾಗಿರುವಇಮ್ಮಡಿ ಮಹದೇವಸ್ವಾಮಿ ಅವರು ಜೈಲಿನಲ್ಲಿ ಇದ್ದಾರೆ. ಘಟನೆಯ ನಂತರ ಮಠದ ಭಕ್ತ ಮಂಡಳಿ, 20 ಹಳ್ಳಿಗಳು ಮತ್ತು ತಮಿಳುನಾಡಿನ 33 ಹಳ್ಳಿಗಳ ಬೇಡಗಂಪಣ ಮುಖಂಡರು ಸಭೆ ನಡೆಸಿ ಇಮ್ಮಡಿ ಮಹದೇವಸ್ವಾಮಿ ಅವರನ್ನು ಪೀಠದಿಂದ ಇಳಿಸಬೇಕು ಎಂದು ಒತ್ತಾಯಿಸಿದ್ದರು. ಇದರ ನಡುವೆಯೇ ಉತ್ತರಾಧಿಕಾರಿ ಆಯ್ಕೆಗೆ ಸಮಿತಿಯನ್ನೂ ರಚಿಸಲಾಗಿತ್ತು.