<p><strong>ಚಾಮರಾಜನಗರ: </strong>ಎರಡೂವರೆ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ನಗರದ ನ್ಯಾಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿ ಕೆಲವು ದಿನಗಳ ಹಿಂದೆ ಆರಂಭವಾಗಿದ್ದು, ಒಂಬತ್ತು ಮನೆಗಳ ಮಾಲೀಕರು ರಸ್ತೆ ಅಭಿವೃದ್ಧಿಗಾಗಿ ತಮ್ಮ ಮನೆಗಳನ್ನು ತೆರವುಗೊಳಿಸಲು ಒಪ್ಪಿಗೆ ನೀಡಿದ್ದಾರೆ.</p>.<p>9 ಮನೆಗಳಿರುವ ನಿವೇಶನ ಸೇರಿದಂತೆ 23 ಜನರಿಗೆ ಸೇರಿದ ಜಮೀನುಗಳನ್ನು ಸ್ವಾಧೀನ ಮಾಡಿಕೊಳ್ಳಬೇಕಾಗಿದ್ದು, ಅವರಿಗೆ ಪರಿಹಾರ ನೀಡಲು ನಗರಸಭೆ ₹3.34 ಕೋಟಿ ವೆಚ್ಚ ಮಾಡಬೇಕಾಗಿದೆ.</p>.<p>ನಗರೋತ್ಥಾನ ಯೋಜನೆಯ ಅಡಿಯಲ್ಲಿ ಲೋಕೋಪಯೋಗಿ ಇಲಾಖೆಯು ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಡಿವೈಎಸ್ಪಿ ಕಚೇರಿಯಿಂದ ನ್ಯಾಯಾಲಯದ ಎದುರಾಗಿ ಹಾದು ಹೋಗಿ ಸತ್ಯಮಂಗಲ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ₹8 ಕೋಟಿ ವೆಚ್ಚದಲ್ಲಿ 60 ಅಡಿಯ ಕಾಂಕ್ರೀಟ್ ರಸ್ತೆಯನ್ನಾಗಿ ಮಾಡುವಕಾಮಗಾರಿಕೈಗೊಂಡಿತ್ತು.</p>.<p>ಡಿವೈಎಸ್ಪಿ ಕಚೇರಿಯಿಂದ ಜಿಲ್ಲಾ ಕಾರಾಗೃಹದವರೆಗೆ ಒಂದು ಕಿ.ಮೀ ಮತ್ತು ಸತ್ಯಮಂಗಲ ರಸ್ತೆಯಿಂದ (ಪ್ರವಾಸಿ ಮಂದಿರದ ಎದುರಿನಿಂದ) ಅಂಬೇಡ್ಕರ್ ಭವನದವರೆಗೆ ಈಗಾಗಲೇ 60 ಅಡಿಗಳ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಕಾರಾಗೃಹದಿಂದ ಅಂಬೇಡ್ಕರ್ ಭವನದವರೆಗೆ ರಸ್ತೆ ನಿರ್ಮಿಸುವುದು ಬಾಕಿ ಇತ್ತು. ಈಗ ಆಗಿರುವ ಕಾಮಗಾರಿಗೆ₹8 ಕೋಟಿ ವೆಚ್ಚವಾಗಿದೆ.</p>.<p>ಭೂಸ್ವಾಧೀನ ವಿಚಾರವಾಗಿ ಸಮಸ್ಯೆ ಇದ್ದುದರಿಂದ ರಸ್ತೆ ಕಾಮಗಾರಿ ಪೂರ್ಣವಾಗಿರಲಿಲ್ಲ.ಯೋಜನೆಗೆ ಹೆಚ್ಚುವರಿ ಅನುದಾನ ಬೇಕಾಗಿದ್ದರಿಂದಲೂ ಕಾಮಗಾರಿ ವಿಳಂಬವಾಗಿತ್ತು.</p>.<p>‘ಬಾಕಿ ಉಳಿದಿರುವ ಕಾಮಗಾರಿ ನಡೆಸಲು 23 ಮಂದಿಗೆ ಸೇರಿದ ಜಮೀನುಗಳನ್ನು ಸ್ವಾಧೀನ ಪಡಿಸಿಕೊಳ್ಳಬೇಕಾಗುತ್ತದೆ. ಈ ಪೈಕಿ ಒಂಬತ್ತು ಮನೆಗಳಿವೆ. ಎಲ್ಲ ಮನೆ ಮಾಲೀಕರು ತೆರವಿಗೆ ಲಿಖಿತವಾಗಿ ಒಪ್ಪಿಗೆ ನೀಡಿದ್ದಾರೆ. ಜಮೀನು ಹಾಗೂ ಮನೆಗಳ ಮಾಲೀಕರಿಗೆ ಪರಿಹಾರ ನೀಡುವುದಕ್ಕಾಗಿ ₹3.34 ಕೋಟಿ ವೆಚ್ಚವಾಗಲಿದೆ’ ಎಂದು ನಗರಸಭೆ ಆಯುಕ್ತ ಎಂ.ರಾಜಣ್ಣ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಉಳಿದ ರಸ್ತೆ ಕಾಮಗಾರಿಗಾಗಿ ಹೆಚ್ಚುವರಿ ₹3.5 ಕೋಟಿ ಅನುದಾನ ಬಿಡುಗಡೆಯಾಗಿದೆ. ಈಗಾಗಲೇ ಕಾಮಗಾರಿ ಆರಂಭವಾಗಿದೆ. ಇದರಲ್ಲಿ ಚರಂಡಿ ನಿರ್ಮಾಣಕ್ಕೆ ಅವಕಾಶ ಇಲ್ಲದಿರುವುದರಿಂದ ಅದಕ್ಕಾಗಿ ನಗರಸಭೆಯು ಪ್ರತ್ಯೇಕ ಯೋಜನೆ ರೂಪಿಸಲಾಗಿದೆ. ಅದಕ್ಕೆ ₹1.80 ಕೋಟಿ ವೆಚ್ಚವಾಗಲಿದೆ. ಟೆಂಡರ್ ಆಗಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p class="Briefhead"><strong>ಹಿಗ್ಗಿದ ಯೋಜನಾ ವೆಚ್ಚ</strong></p>.<p>ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗೆ ₹8 ಕೋಟಿ ವೆಚ್ಚವಾಗಿದೆ.ಬಾಕಿ ಉಳಿದ ಕಾಮಗಾರಿಗಾಗಿ, ನಗರೋತ್ಥಾನ ಯೋಜನೆ ಅಡಿಯಲ್ಲಿ ಹೆಚ್ಚುವರಿ ₹3.5 ಕೋಟಿ ಅನುದಾನ ಬಿಡುಗಡೆಯಾಗಿದೆ. ಜಮೀನು ಮಾಲೀಕರಿಗೆ ಪರಿಹಾರ ನೀಡುವುದಕ್ಕೆ ₹3.34 ಕೋಟಿ ಅಗತ್ಯವಿದೆ. ಇದಲ್ಲದೇ, ಕಾಂಕ್ರೀಟ್ ಚರಂಡಿ ನಿರ್ಮಾಣಕ್ಕಾಗಿ ನಗರಸಭೆ ಪ್ರತ್ಯೇಕವಾಗಿ ₹1.80 ಕೋಟಿ ವೆಚ್ಚವನ್ನೂ ಮಾಡುತ್ತಿದೆ. ಹಾಗಾಗಿ, ಡಿವೈಎಸ್ಪಿ ಕಚೇರಿಯಿಂದ ಸತ್ಯಮಂಗಲ ರಸ್ತೆಯವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಒಟ್ಟು ₹16.64 ಕೋಟಿ ವೆಚ್ಚ ಮಾಡಿದಂತಾಗುತ್ತದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಎರಡೂವರೆ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ನಗರದ ನ್ಯಾಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿ ಕೆಲವು ದಿನಗಳ ಹಿಂದೆ ಆರಂಭವಾಗಿದ್ದು, ಒಂಬತ್ತು ಮನೆಗಳ ಮಾಲೀಕರು ರಸ್ತೆ ಅಭಿವೃದ್ಧಿಗಾಗಿ ತಮ್ಮ ಮನೆಗಳನ್ನು ತೆರವುಗೊಳಿಸಲು ಒಪ್ಪಿಗೆ ನೀಡಿದ್ದಾರೆ.</p>.<p>9 ಮನೆಗಳಿರುವ ನಿವೇಶನ ಸೇರಿದಂತೆ 23 ಜನರಿಗೆ ಸೇರಿದ ಜಮೀನುಗಳನ್ನು ಸ್ವಾಧೀನ ಮಾಡಿಕೊಳ್ಳಬೇಕಾಗಿದ್ದು, ಅವರಿಗೆ ಪರಿಹಾರ ನೀಡಲು ನಗರಸಭೆ ₹3.34 ಕೋಟಿ ವೆಚ್ಚ ಮಾಡಬೇಕಾಗಿದೆ.</p>.<p>ನಗರೋತ್ಥಾನ ಯೋಜನೆಯ ಅಡಿಯಲ್ಲಿ ಲೋಕೋಪಯೋಗಿ ಇಲಾಖೆಯು ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಡಿವೈಎಸ್ಪಿ ಕಚೇರಿಯಿಂದ ನ್ಯಾಯಾಲಯದ ಎದುರಾಗಿ ಹಾದು ಹೋಗಿ ಸತ್ಯಮಂಗಲ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ₹8 ಕೋಟಿ ವೆಚ್ಚದಲ್ಲಿ 60 ಅಡಿಯ ಕಾಂಕ್ರೀಟ್ ರಸ್ತೆಯನ್ನಾಗಿ ಮಾಡುವಕಾಮಗಾರಿಕೈಗೊಂಡಿತ್ತು.</p>.<p>ಡಿವೈಎಸ್ಪಿ ಕಚೇರಿಯಿಂದ ಜಿಲ್ಲಾ ಕಾರಾಗೃಹದವರೆಗೆ ಒಂದು ಕಿ.ಮೀ ಮತ್ತು ಸತ್ಯಮಂಗಲ ರಸ್ತೆಯಿಂದ (ಪ್ರವಾಸಿ ಮಂದಿರದ ಎದುರಿನಿಂದ) ಅಂಬೇಡ್ಕರ್ ಭವನದವರೆಗೆ ಈಗಾಗಲೇ 60 ಅಡಿಗಳ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಕಾರಾಗೃಹದಿಂದ ಅಂಬೇಡ್ಕರ್ ಭವನದವರೆಗೆ ರಸ್ತೆ ನಿರ್ಮಿಸುವುದು ಬಾಕಿ ಇತ್ತು. ಈಗ ಆಗಿರುವ ಕಾಮಗಾರಿಗೆ₹8 ಕೋಟಿ ವೆಚ್ಚವಾಗಿದೆ.</p>.<p>ಭೂಸ್ವಾಧೀನ ವಿಚಾರವಾಗಿ ಸಮಸ್ಯೆ ಇದ್ದುದರಿಂದ ರಸ್ತೆ ಕಾಮಗಾರಿ ಪೂರ್ಣವಾಗಿರಲಿಲ್ಲ.ಯೋಜನೆಗೆ ಹೆಚ್ಚುವರಿ ಅನುದಾನ ಬೇಕಾಗಿದ್ದರಿಂದಲೂ ಕಾಮಗಾರಿ ವಿಳಂಬವಾಗಿತ್ತು.</p>.<p>‘ಬಾಕಿ ಉಳಿದಿರುವ ಕಾಮಗಾರಿ ನಡೆಸಲು 23 ಮಂದಿಗೆ ಸೇರಿದ ಜಮೀನುಗಳನ್ನು ಸ್ವಾಧೀನ ಪಡಿಸಿಕೊಳ್ಳಬೇಕಾಗುತ್ತದೆ. ಈ ಪೈಕಿ ಒಂಬತ್ತು ಮನೆಗಳಿವೆ. ಎಲ್ಲ ಮನೆ ಮಾಲೀಕರು ತೆರವಿಗೆ ಲಿಖಿತವಾಗಿ ಒಪ್ಪಿಗೆ ನೀಡಿದ್ದಾರೆ. ಜಮೀನು ಹಾಗೂ ಮನೆಗಳ ಮಾಲೀಕರಿಗೆ ಪರಿಹಾರ ನೀಡುವುದಕ್ಕಾಗಿ ₹3.34 ಕೋಟಿ ವೆಚ್ಚವಾಗಲಿದೆ’ ಎಂದು ನಗರಸಭೆ ಆಯುಕ್ತ ಎಂ.ರಾಜಣ್ಣ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಉಳಿದ ರಸ್ತೆ ಕಾಮಗಾರಿಗಾಗಿ ಹೆಚ್ಚುವರಿ ₹3.5 ಕೋಟಿ ಅನುದಾನ ಬಿಡುಗಡೆಯಾಗಿದೆ. ಈಗಾಗಲೇ ಕಾಮಗಾರಿ ಆರಂಭವಾಗಿದೆ. ಇದರಲ್ಲಿ ಚರಂಡಿ ನಿರ್ಮಾಣಕ್ಕೆ ಅವಕಾಶ ಇಲ್ಲದಿರುವುದರಿಂದ ಅದಕ್ಕಾಗಿ ನಗರಸಭೆಯು ಪ್ರತ್ಯೇಕ ಯೋಜನೆ ರೂಪಿಸಲಾಗಿದೆ. ಅದಕ್ಕೆ ₹1.80 ಕೋಟಿ ವೆಚ್ಚವಾಗಲಿದೆ. ಟೆಂಡರ್ ಆಗಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p class="Briefhead"><strong>ಹಿಗ್ಗಿದ ಯೋಜನಾ ವೆಚ್ಚ</strong></p>.<p>ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗೆ ₹8 ಕೋಟಿ ವೆಚ್ಚವಾಗಿದೆ.ಬಾಕಿ ಉಳಿದ ಕಾಮಗಾರಿಗಾಗಿ, ನಗರೋತ್ಥಾನ ಯೋಜನೆ ಅಡಿಯಲ್ಲಿ ಹೆಚ್ಚುವರಿ ₹3.5 ಕೋಟಿ ಅನುದಾನ ಬಿಡುಗಡೆಯಾಗಿದೆ. ಜಮೀನು ಮಾಲೀಕರಿಗೆ ಪರಿಹಾರ ನೀಡುವುದಕ್ಕೆ ₹3.34 ಕೋಟಿ ಅಗತ್ಯವಿದೆ. ಇದಲ್ಲದೇ, ಕಾಂಕ್ರೀಟ್ ಚರಂಡಿ ನಿರ್ಮಾಣಕ್ಕಾಗಿ ನಗರಸಭೆ ಪ್ರತ್ಯೇಕವಾಗಿ ₹1.80 ಕೋಟಿ ವೆಚ್ಚವನ್ನೂ ಮಾಡುತ್ತಿದೆ. ಹಾಗಾಗಿ, ಡಿವೈಎಸ್ಪಿ ಕಚೇರಿಯಿಂದ ಸತ್ಯಮಂಗಲ ರಸ್ತೆಯವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಒಟ್ಟು ₹16.64 ಕೋಟಿ ವೆಚ್ಚ ಮಾಡಿದಂತಾಗುತ್ತದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>