ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 822 ಮಂದಿ ಗುಣಮುಖ

Last Updated 17 ಮೇ 2021, 3:35 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಕೊರೊನಾ ಸೋಂಕಿತರು ಮಾತ್ರವಲ್ಲ ಮರಣ ಹೊಂದುವವರ ಸಂಖ್ಯೆಯಲ್ಲೂ ಇಳಿಕೆ ಕಂಡು ಬಂದಿದ್ದು, ಜನಸಾಮಾನ್ಯರಲ್ಲಿ ತುಸು ನೆಮ್ಮದಿ ತರಿಸಿದೆ.

ಶನಿವಾರ ಸಂಜೆ 6 ಗಂಟೆಯಿಂದ ಭಾನುವಾರ ಸಂಜೆ 6 ಗಂಟೆಯವರೆಗೆ ಒಟ್ಟು 6 ಮಂದಿ ಕೋವಿಡ್ ರೋಗಿಗಳು ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ. ಗುರುವಾರ 799, ಶುಕ್ರವಾರ 622, ಶನಿವಾರ 535 ಮಂದಿ ಸೋಂಕಿತರಾಗಿದ್ದರು. ಭಾನುವಾರ ಇವರ ಸಂಖ್ಯೆ 444ಕ್ಕೆ ಇಳಿಕೆಯಾಗಿದೆ. 822 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಭಾನುವಾರ ಒಟ್ಟು 931 ಮಂದಿಯನ್ನು ಹೋಂಐಸೋಲೇಷನ್‌ಗೆ ಕಳುಹಿಸಲಾಗಿದೆ. ಒಟ್ಟು 2,386 ಮಂದಿ ಹೋಂ ಐಸೋಲೇಷನ್‌ಲ್ಲಿಯೇ ಇದ್ದಾರೆ. 50 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸ ಸೋಂಕಿತರ ಪೈಕಿ 96 ಮಂದಿ ಮಾತ್ರವೇ ಪಟ್ಟಣ ಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಇನ್ನುಳಿದ 348 ಮಂದಿ ವಿವಿಧ ಹಳ್ಳಿಗಳಿಗೆ ಸೇರಿದವರೇ ಆಗಿದ್ದಾರೆ. ಇವರಲ್ಲಿ 12 ಮಂದಿ ಮಕ್ಕಳೂ ಸೇರಿದ್ದಾರೆ.

ಚಾಮರಾಜನಗರ ತಾಲ್ಲೂಕಿನಲ್ಲಿ 170, ಕೊಳ್ಳೇಗಾಲದಲ್ಲಿ 108, ಹನೂರಿನಲ್ಲಿ 68, ಗುಂಡ್ಲುಪೇಟೆಯಲ್ಲಿ 67, ಯಳಂದೂರಿನಲ್ಲಿ 26 ಹಾಗೂ ಹೊರಜಿಲ್ಲೆಯ ಐವರಲ್ಲಿ ಹೊಸದಾಗಿ ಸೋಂಕು
ಕಾಣಿಸಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT