<p><strong>ಗುಂಡ್ಲುಪೇಟೆ: </strong>ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ತಾಲ್ಲೂಕಿನ ಪ್ರವಾಸೋದ್ಯಮ ನೆಲ ಕಚ್ಚಿದೆ. ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ಸಫಾರಿ, ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬರುವವರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.</p>.<p>ಕೇರಳ ಮತ್ತು ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯದ ವಿವಿಧ ಭಾಗಗಳಿಂದ ಬಂಡೀಪುರ ಸಫಾರಿಗೆ ಜನರು ಬರುತ್ತಿದ್ದರು. ಕಳೆದ ವರ್ಷ ಲಾಕ್ಡೌನ್ ಪೂರ್ಣವಾಗಿ ತೆರವುಗೊಳಿಸಿದ ನಂತರ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆಯಾಗಿತ್ತು. ಈ ವರ್ಷದ ಆರಂಭದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ತಲುಪಿತ್ತು. ಮತ್ತೆ ಪ್ರಕರಣಗಳು ಏರುಮುಖವಾಗುತ್ತಿರುವುದರಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ.</p>.<p>ತಾಲ್ಲೂಕಿನಲ್ಲಿ ಪ್ರವಾಸ್ಯೋದ್ಯಮವನ್ನು ಹಲವರು ಅವಲಂಬಿಸಿದ್ದಾರೆ.ಎರಡು ವಾರಗಳಿಂದ ಕೇರಳ ಮತ್ತು ತಮಿಳುನಾಡಿನ ಭಾಗದಿಂದ ಬರುವವರು ತೀವ್ರ ಪ್ರಮಾಣದಲ್ಲಿ ಕಡಿಮೆ ಆಗಿರುವುದರಿಂದ ತಾಲ್ಲೂಕಿನ ಹೊಟೇಲ್, ರೆಸಾರ್ಟ್ ಮತ್ತು ಮದ್ಯದಂಗಡಿ ಹಾಗೂ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೊಂದರೆಯಾಗಿದೆ.</p>.<p>‘ಬೇಸಿಗೆ ಆಗಿರುವುದರಿಂದ ವಾಹನಗಳು ಹೆಚ್ಚಿದ್ದರೆ ಪ್ರತಿದಿನ ನೂರಕ್ಕೂ ಹೆಚ್ಚಿನ ಎಳನೀರು ಮಾರಾಟ ಆಗುತ್ತಿತ್ತು. ಒಂದು ವಾರದಿಂದ ಐದು ಎಳನೀರು ಕೂಡ ವ್ಯಾಪಾರ ಆಗುತ್ತಿಲ್ಲ’ ಎಂದು ಎಳನೀರು ವ್ಯಾಪಾರಿ ಕಲ್ಲಿಗೌಡನಹಳ್ಳಿ ಲಿಂಗರಾಜ ತಿಳಿಸಿದರು.</p>.<p>‘ಕಳೆದ ವರ್ಷದಂತೆ ಈ ವರ್ಷವೂ ಸಹ ವಸತಿ ಗೃಹ ಖಾಲಿ ಇದೆ. ಜನವರಿ ನಂತರ ಪ್ರವಾಸೋದ್ಯಮ ಚೇತರಿಕೆ ಆಗುತ್ತದೆ ಎಂಬ ನಂಬಿಕೆಯಲ್ಲಿ ಇದ್ದೆವು. ಆದರೆ ಎಲ್ಲವೂ ಹುಸಿಯಾಯಿತು. ಸಿಬ್ಬಂದಿಗೆ ಸಂಬಳ ನೀಡಲೂ ತೊಂದರೆಯಾಗುತ್ತಿದೆ’ ಎಂದು ಖಾಸಗಿ ರೆಸಾರ್ಟ್ ವ್ಯವಸ್ಥಾಪಕರೊಬ್ಬರು ತಿಳಿಸಿದರು.</p>.<p>ಕೋವಿಡ್ ಕಾರಣದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬೀದಿಬದಿ ವ್ಯಾಪಾರಿಗಳು, ಬೇಕರಿ ಉದ್ಯಮ ಮತ್ತು ಹೋಂ ಸ್ಟೇಗಳು ನಷ್ಟ ಅನುಭವಿಸುವಂತಾಗಿದೆ.</p>.<p>‘ಕಳೆದ ತಿಂಗಳಿನವರೆಗೂ ಸಫಾರಿಗೆ ಬರುವವರ ಸಂಖ್ಯೆ ಹೆಚ್ಚಿತ್ತು. ಆದರೆ ಕೇರಳ ಮತ್ತು ತಮಿಳುನಾಡಿನ ವಿವಿಧ ಭಾಗಗಳಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಕಾರಣ ಈಗ ಪ್ರವಾಸಿಗರು ಬರುತ್ತಿಲ್ಲ’ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್.ಆರ್.ನಟೇಶ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸೋಮವಾರ ಕೇವಲ 12 ಮಂದಿ ಸಫಾರಿಗೆ ಬಂದಿದ್ದಾರೆ. ಶನಿವಾರ ಮತ್ತು ಭಾನುವಾರವೂ ಪ್ರವಾಸಿಗರ ಸಂಖ್ಯೆ ಭಾರಿ ಕಡಿಮೆ ಇತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ: </strong>ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ತಾಲ್ಲೂಕಿನ ಪ್ರವಾಸೋದ್ಯಮ ನೆಲ ಕಚ್ಚಿದೆ. ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ಸಫಾರಿ, ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬರುವವರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.</p>.<p>ಕೇರಳ ಮತ್ತು ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯದ ವಿವಿಧ ಭಾಗಗಳಿಂದ ಬಂಡೀಪುರ ಸಫಾರಿಗೆ ಜನರು ಬರುತ್ತಿದ್ದರು. ಕಳೆದ ವರ್ಷ ಲಾಕ್ಡೌನ್ ಪೂರ್ಣವಾಗಿ ತೆರವುಗೊಳಿಸಿದ ನಂತರ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆಯಾಗಿತ್ತು. ಈ ವರ್ಷದ ಆರಂಭದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ತಲುಪಿತ್ತು. ಮತ್ತೆ ಪ್ರಕರಣಗಳು ಏರುಮುಖವಾಗುತ್ತಿರುವುದರಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ.</p>.<p>ತಾಲ್ಲೂಕಿನಲ್ಲಿ ಪ್ರವಾಸ್ಯೋದ್ಯಮವನ್ನು ಹಲವರು ಅವಲಂಬಿಸಿದ್ದಾರೆ.ಎರಡು ವಾರಗಳಿಂದ ಕೇರಳ ಮತ್ತು ತಮಿಳುನಾಡಿನ ಭಾಗದಿಂದ ಬರುವವರು ತೀವ್ರ ಪ್ರಮಾಣದಲ್ಲಿ ಕಡಿಮೆ ಆಗಿರುವುದರಿಂದ ತಾಲ್ಲೂಕಿನ ಹೊಟೇಲ್, ರೆಸಾರ್ಟ್ ಮತ್ತು ಮದ್ಯದಂಗಡಿ ಹಾಗೂ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೊಂದರೆಯಾಗಿದೆ.</p>.<p>‘ಬೇಸಿಗೆ ಆಗಿರುವುದರಿಂದ ವಾಹನಗಳು ಹೆಚ್ಚಿದ್ದರೆ ಪ್ರತಿದಿನ ನೂರಕ್ಕೂ ಹೆಚ್ಚಿನ ಎಳನೀರು ಮಾರಾಟ ಆಗುತ್ತಿತ್ತು. ಒಂದು ವಾರದಿಂದ ಐದು ಎಳನೀರು ಕೂಡ ವ್ಯಾಪಾರ ಆಗುತ್ತಿಲ್ಲ’ ಎಂದು ಎಳನೀರು ವ್ಯಾಪಾರಿ ಕಲ್ಲಿಗೌಡನಹಳ್ಳಿ ಲಿಂಗರಾಜ ತಿಳಿಸಿದರು.</p>.<p>‘ಕಳೆದ ವರ್ಷದಂತೆ ಈ ವರ್ಷವೂ ಸಹ ವಸತಿ ಗೃಹ ಖಾಲಿ ಇದೆ. ಜನವರಿ ನಂತರ ಪ್ರವಾಸೋದ್ಯಮ ಚೇತರಿಕೆ ಆಗುತ್ತದೆ ಎಂಬ ನಂಬಿಕೆಯಲ್ಲಿ ಇದ್ದೆವು. ಆದರೆ ಎಲ್ಲವೂ ಹುಸಿಯಾಯಿತು. ಸಿಬ್ಬಂದಿಗೆ ಸಂಬಳ ನೀಡಲೂ ತೊಂದರೆಯಾಗುತ್ತಿದೆ’ ಎಂದು ಖಾಸಗಿ ರೆಸಾರ್ಟ್ ವ್ಯವಸ್ಥಾಪಕರೊಬ್ಬರು ತಿಳಿಸಿದರು.</p>.<p>ಕೋವಿಡ್ ಕಾರಣದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬೀದಿಬದಿ ವ್ಯಾಪಾರಿಗಳು, ಬೇಕರಿ ಉದ್ಯಮ ಮತ್ತು ಹೋಂ ಸ್ಟೇಗಳು ನಷ್ಟ ಅನುಭವಿಸುವಂತಾಗಿದೆ.</p>.<p>‘ಕಳೆದ ತಿಂಗಳಿನವರೆಗೂ ಸಫಾರಿಗೆ ಬರುವವರ ಸಂಖ್ಯೆ ಹೆಚ್ಚಿತ್ತು. ಆದರೆ ಕೇರಳ ಮತ್ತು ತಮಿಳುನಾಡಿನ ವಿವಿಧ ಭಾಗಗಳಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಕಾರಣ ಈಗ ಪ್ರವಾಸಿಗರು ಬರುತ್ತಿಲ್ಲ’ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್.ಆರ್.ನಟೇಶ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸೋಮವಾರ ಕೇವಲ 12 ಮಂದಿ ಸಫಾರಿಗೆ ಬಂದಿದ್ದಾರೆ. ಶನಿವಾರ ಮತ್ತು ಭಾನುವಾರವೂ ಪ್ರವಾಸಿಗರ ಸಂಖ್ಯೆ ಭಾರಿ ಕಡಿಮೆ ಇತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>