ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಸದಾಶಿವ ಎಸ್.ಸುಲ್ತಾನಪುರಿ ಅವರು, ‘ಜಿಲ್ಲೆಯಲ್ಲಿ ಕೋವಿಡ್ ವೇಗವಾಗಿ ಹರಡುತ್ತಿದೆ. ಈ ಸಂದರ್ಭದಲ್ಲಿಉದ್ಭವಿಸಬಹುದಾದ ಹಾಸಿಗೆ ಸಮಸ್ಯೆ, ವೆಂಟಿಲೇಟರ್, ಆಮ್ಲಜನಕ, ವೈದ್ಯರ ಲೋಪದೋಷ ಸೇರಿದಂತೆ ಇತರೆ ಕಾನೂನು ಸಮಸ್ಯೆಗಳ ಕುರಿತು ಸಾರ್ವಜನಿಕರಿಗೆ ಸಲಹೆ ಹಾಗೂ ಪರಿಹಾರ ನೀಡಲು ಸಹಾಯವಾಣಿ ಆರಂಭಿಸಲಾಗಿದೆ. ಸಹಾಯವಾಣಿ ಸಂಖ್ಯೆ 9449547372 ಗೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಪರಿಹಾರ ಪಡೆಯಬಹುದು’ ಎಂದು ತಿಳಿಸಿದರು.