ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಒಂದೇ ದಿನ 794 ಮಂದಿ ಗುಣಮುಖ

Last Updated 16 ಮೇ 2021, 3:00 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 6 ಗಂಟೆಯಿಂದ ಶನಿವಾರ ಸಂಜೆ 6 ಗಂಟೆಯವರೆಗೆ ಒಟ್ಟು 18 ಮಂದಿ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಮೃತರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದರೂ ಸೋಂಕಿತರ ಸಂಖ್ಯೆಯಲ್ಲಿ ಒಂದಿಷ್ಟು ನಿಯಂತ್ರಣ ಕಂಡು ಬಂದಿರುವುದು ಸಮಾಧಾನ ತರಿಸಿದೆ.

ಗುರುವಾರ 799, ಶುಕ್ರವಾರ 622 ಮಂದಿ ಸೋಂಕಿತರಾಗಿದ್ದರು. ಶನಿವಾರ ಇವರ ಸಂಖ್ಯೆ 535ಕ್ಕೆ ಇಳಿಕೆಯಾಗಿದೆ. 794 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಶನಿವಾರ 629 ಮಂದಿಯನ್ನು ಹೋಂ ಐಸೋಲೇಷನ್‌ಗೆ ಕಳುಹಿಸಲಾಗಿದೆ. ಒಟ್ಟು 2,262 ಮಂದಿ ಹೋಂ ಐಸೋಲೇಷನ್‌ಲ್ಲಿಯೇ ಇದ್ದಾರೆ. 50 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸ ಸೋಂಕಿತರ ಪೈಕಿ 76 ಮಂದಿ ಮಾತ್ರವೇ ಪಟ್ಟಣ ಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಇನ್ನುಳಿದ 459 ಮಂದಿ ವಿವಿಧ ಹಳ್ಳಿಗಳಿಗೆ ಸೇರಿದವರೇ ಆಗಿದ್ದಾರೆ. ಇವರಲ್ಲಿ 34 ಮಂದಿ ಮಕ್ಕಳೂ ಸೇರಿದ್ದಾರೆ.

ಚಾಮರಾಜನಗರ ತಾಲ್ಲೂಕಿನಲ್ಲಿ 180, ಗುಂಡ್ಲುಪೇಟೆಯಲ್ಲಿ 124, ಕೊಳ್ಳೇಗಾಲದಲ್ಲಿ 120, ಹನೂರಿನಲ್ಲಿ 84, ಯಳಂದೂರಿನಲ್ಲಿ 26 ಹಾಗೂ ಹೊರಜಿಲ್ಲೆಯ ಒಬ್ಬರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT