ವಿಶೇಷವಾಗಿ ಗ್ರಾಮಾಂತರ ಭಾಗಗಳಲ್ಲಿನ ಜನರು ಹೆಚ್ಚಿನ ಆತಂಕಕ್ಕೆ ಒಳಗಾಗಿದ್ದಾರೆ. ಸೋಮವಾರದಿಂದ ಕಟ್ಟುನಿಟ್ಟಿನ ಲಾಕ್ಡೌನ್ ಇರುವುದರಿಂದ ಭಾನುವಾರವೇ ಹಲವು ಗ್ರಾಮಗಳಿಗೆ ಸರಕು ಸಾಗಣೆ ವಾಹನಗಳಲ್ಲಿ, ಬೈಕ್ಗಳಲ್ಲಿ ಬೆಂಗಳೂರು ಹಾಗೂ ಇತರ ಜಿಲ್ಲೆಗಳಲ್ಲಿ ವಾಸವಿರುವ ಜನರು ಬಂದರು. ಕಳೆದ ಕೆಲ ದಿನಗಳ ಹಿಂದೆ ಜನತಾ ಕರ್ಫ್ಯೂ ಘೋಷಣೆಯಾದ ಬಳಿಕವೂ ಹಳ್ಳಿಗಳಿಗೆ ಇತರೆ ಜಿಲ್ಲೆಗಳಲ್ಲಿ ವಾಸವಿದ್ದವರು ಬಂದರು. ನಂತರ, ಕೊರೊನಾ ಸೋಂಕು ಹಳ್ಳಿಗಳಲ್ಲಿ ಉಲ್ಬಣಿಸಿತು. ಈಗಲೂ ಇದೇ ರೀತಿ ಆಗಲಿದೆಯೇ ಎಂಬ ಆತಂಕ ಜನರನ್ನು ಕಾಡುತ್ತಿದೆ.