<p><strong>ಚಾಮರಾಜನಗರ: </strong>ಕೋವಿಡ್ ಹರುಡುವಿಕೆ ತಡೆಯುವ ಉದ್ದೇಶದಿಂದ ಸರ್ಕಾರದ ಸೂಚನೆಯಂತೆ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿರುವ ಜಿಲ್ಲಾಡಳಿತ, ನ್ಯಾಯಬೆಲೆ ಅಂಗಡಿಗಳಲ್ಲೂ ರೋಗ ಲಕ್ಷಣಗಳುಳ್ಳ ಗ್ರಾಹಕರನ್ನು ಪರೀಕ್ಷೆಗೆ ಒಳಪಡಿಸುತ್ತಿದೆ.</p>.<p>ರಾಜ್ಯ ಸರ್ಕಾರವು ಜಿಲ್ಲಾಡಳಿತಕ್ಕೆ ಪ್ರತಿ ದಿನ 3,000 ಪರೀಕ್ಷೆಗಳನ್ನು ನಡೆಸಲು ಗುರಿ ನೀಡಿದೆ. ಪರೀಕ್ಷೆ ಗುರಿ ತಲುಪುವ ಉದ್ದೇಶ ಹಾಗೂ ಸೋಂಕು ಹರಡುವಿಕೆ ತಡೆಯುವ ಪ್ರಯತ್ನವಾಗಿ ನ್ಯಾಯಬೆಲೆ ಅಂಗಡಿಗಳಲ್ಲೂ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳುತ್ತಾರೆ ಅಧಿಕಾರಿಗಳು.</p>.<p>ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಜಿಲ್ಲೆಯಾದ್ಯಂತ 450 ನ್ಯಾಯಬೆಲೆ ಅಂಗಡಿಗಳಿದ್ದು, ಸಿಂಹಪಾಲು ಅಂಗಡಿಗಳು ಗ್ರಾಮೀಣ ಭಾಗಗಳಲ್ಲಿವೆ.</p>.<p>ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಸೂಚನೆಯ ಮೇರೆಗೆ ಪಡಿತರ ಕಾರ್ಡ್ದಾರರಿಗೂ ಕೋವಿಡ್ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಯೋಗಾನಂದ್ ಅವರು ’ಪ್ರಜಾವಾಣಿ‘ಗೆ ತಿಳಿಸಿದರು.</p>.<p>ಪ್ರತಿವಾರ ಪಡಿತರ ವಿತರಿಸುವ ನಿಗದಿತ ದಿನದಂದು ಸ್ಥಳೀಯ ಆರೋಗ್ಯ ಇಲಾಖೆ ಸಿಬ್ಬಂದಿ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಗ್ರಾಹಕರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸುತ್ತಿದ್ದಾರೆ.</p>.<p>‘ಸರ್ಕಾರ ನೀಡಿರುವ ಪರೀಕ್ಷಾ ಗುರಿಯನ್ನು ನಾವು ತಲುಪಬೇಕಿದೆ. ಇದು ಒಂದು ಕಾರಣ. ಇದಲ್ಲದೇ, ಹೆಚ್ಚು ಪರೀಕ್ಷೆ ನಡೆಸುವುದರಿಂದ ಪ್ರಕರಣಗಳು ಬೇಗ ಬೇಗ ಪತ್ತೆಯಾಗುತ್ತವೆ. ಚಿಕಿತ್ಸೆಗೂ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಜನರು ಸೇರುವ ಪ್ರದೇಶಗಳಾದ ಎಪಿಎಂಸಿ, ರೈತ ಸಂಪರ್ಕ ಕೇಂದ್ರ, ನ್ಯಾಯಬೆಲೆ ಅಂಗಡಿಗಳಲ್ಲಿ ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾ<br />ರಿಗಳಿಗೆ ಸೂಚಿಸಲಾಗಿತ್ತು‘ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ ಅವರು ’ಪ್ರಜಾವಾಣಿ‘ಗೆ ತಿಳಿಸಿದರು.</p>.<p class="Subhead"><strong>ಮಕ್ಕಳ ಪರೀಕ್ಷೆಗೂ ಒತ್ತು: </strong>ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಕೋವಿಡ್ ಪರೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ ಅವರು, ’ಸರ್ಕಾರ ನಮಗೆ ಪ್ರತಿ ದಿನ ₹1,500 ಆರ್ಟಿಪಿಸಿಆರ್, 1,000 ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ನಡೆಸಲು ಸೂಚಿಸಿದೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ನಾವು ಪ್ರತಿ ದಿನ 2,000ಕ್ಕೂ ಹೆಚ್ಚು ಆರ್ಟಿಪಿಸಿಆರ್ ಹಾಗೂ 1,000ದಷ್ಟು ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ಮಾಡುತ್ತಿದ್ದೇವೆ. ಪ್ರತಿ ದಿನ ನಮ್ಮ ಪರೀಕ್ಷೆ ಸಂಖ್ಯೆ 3,000ಕ್ಕೂ ಹೆಚ್ಚಿದೆ‘ ಎಂದರು.</p>.<p>’ರೋಗ ಲಕ್ಷಣ ಹೊಂದಿರುವ ಎಲ್ಲರನ್ನೂ ಪರೀಕ್ಷೆ ನಡೆಸಬೇಕು ಎಂಬ ಗುರಿಯೊಂದಿಗೆ ಕೆಲಸ ಮಾಡುತ್ತಿದ್ದೇವೆ. ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಅಭಿಪ್ರಾಯ ಇರುವುದರಿಂದ ಯಾವುದೇ ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿ/ವಿದ್ಯಾರ್ಥಿನಿಗೆ ರೋಗ ಲಕ್ಷಣ ಕಂಡು ಬಂದರೆ ಅಥವಾ ಸೋಂಕು ದೃಢಪಟ್ಟರೆ ಆ ಶಾಲೆಯ ಎಲ್ಲ ಮಕ್ಕಳನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಜನರ ವಿಚಾರದಲ್ಲೂ ಅಷ್ಟೇ. ರೋಗ ಲಕ್ಷಣ ಇರುವವರಿಗೆ ಎಲ್ಲರಿಗೂ ಪರೀಕ್ಷೆ ಮಾಡತ್ತಿದ್ದೇವೆ. ಜಿಲ್ಲಾ ಪಂಚಾಯಿತಿ ಸಿಇಒ ಅವರ ಸಲಹೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲೂ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ‘ ಎಂದು ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಕೋವಿಡ್ ಹರುಡುವಿಕೆ ತಡೆಯುವ ಉದ್ದೇಶದಿಂದ ಸರ್ಕಾರದ ಸೂಚನೆಯಂತೆ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿರುವ ಜಿಲ್ಲಾಡಳಿತ, ನ್ಯಾಯಬೆಲೆ ಅಂಗಡಿಗಳಲ್ಲೂ ರೋಗ ಲಕ್ಷಣಗಳುಳ್ಳ ಗ್ರಾಹಕರನ್ನು ಪರೀಕ್ಷೆಗೆ ಒಳಪಡಿಸುತ್ತಿದೆ.</p>.<p>ರಾಜ್ಯ ಸರ್ಕಾರವು ಜಿಲ್ಲಾಡಳಿತಕ್ಕೆ ಪ್ರತಿ ದಿನ 3,000 ಪರೀಕ್ಷೆಗಳನ್ನು ನಡೆಸಲು ಗುರಿ ನೀಡಿದೆ. ಪರೀಕ್ಷೆ ಗುರಿ ತಲುಪುವ ಉದ್ದೇಶ ಹಾಗೂ ಸೋಂಕು ಹರಡುವಿಕೆ ತಡೆಯುವ ಪ್ರಯತ್ನವಾಗಿ ನ್ಯಾಯಬೆಲೆ ಅಂಗಡಿಗಳಲ್ಲೂ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳುತ್ತಾರೆ ಅಧಿಕಾರಿಗಳು.</p>.<p>ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಜಿಲ್ಲೆಯಾದ್ಯಂತ 450 ನ್ಯಾಯಬೆಲೆ ಅಂಗಡಿಗಳಿದ್ದು, ಸಿಂಹಪಾಲು ಅಂಗಡಿಗಳು ಗ್ರಾಮೀಣ ಭಾಗಗಳಲ್ಲಿವೆ.</p>.<p>ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಸೂಚನೆಯ ಮೇರೆಗೆ ಪಡಿತರ ಕಾರ್ಡ್ದಾರರಿಗೂ ಕೋವಿಡ್ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಯೋಗಾನಂದ್ ಅವರು ’ಪ್ರಜಾವಾಣಿ‘ಗೆ ತಿಳಿಸಿದರು.</p>.<p>ಪ್ರತಿವಾರ ಪಡಿತರ ವಿತರಿಸುವ ನಿಗದಿತ ದಿನದಂದು ಸ್ಥಳೀಯ ಆರೋಗ್ಯ ಇಲಾಖೆ ಸಿಬ್ಬಂದಿ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಗ್ರಾಹಕರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸುತ್ತಿದ್ದಾರೆ.</p>.<p>‘ಸರ್ಕಾರ ನೀಡಿರುವ ಪರೀಕ್ಷಾ ಗುರಿಯನ್ನು ನಾವು ತಲುಪಬೇಕಿದೆ. ಇದು ಒಂದು ಕಾರಣ. ಇದಲ್ಲದೇ, ಹೆಚ್ಚು ಪರೀಕ್ಷೆ ನಡೆಸುವುದರಿಂದ ಪ್ರಕರಣಗಳು ಬೇಗ ಬೇಗ ಪತ್ತೆಯಾಗುತ್ತವೆ. ಚಿಕಿತ್ಸೆಗೂ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಜನರು ಸೇರುವ ಪ್ರದೇಶಗಳಾದ ಎಪಿಎಂಸಿ, ರೈತ ಸಂಪರ್ಕ ಕೇಂದ್ರ, ನ್ಯಾಯಬೆಲೆ ಅಂಗಡಿಗಳಲ್ಲಿ ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾ<br />ರಿಗಳಿಗೆ ಸೂಚಿಸಲಾಗಿತ್ತು‘ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ ಅವರು ’ಪ್ರಜಾವಾಣಿ‘ಗೆ ತಿಳಿಸಿದರು.</p>.<p class="Subhead"><strong>ಮಕ್ಕಳ ಪರೀಕ್ಷೆಗೂ ಒತ್ತು: </strong>ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಕೋವಿಡ್ ಪರೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ ಅವರು, ’ಸರ್ಕಾರ ನಮಗೆ ಪ್ರತಿ ದಿನ ₹1,500 ಆರ್ಟಿಪಿಸಿಆರ್, 1,000 ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ನಡೆಸಲು ಸೂಚಿಸಿದೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ನಾವು ಪ್ರತಿ ದಿನ 2,000ಕ್ಕೂ ಹೆಚ್ಚು ಆರ್ಟಿಪಿಸಿಆರ್ ಹಾಗೂ 1,000ದಷ್ಟು ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ಮಾಡುತ್ತಿದ್ದೇವೆ. ಪ್ರತಿ ದಿನ ನಮ್ಮ ಪರೀಕ್ಷೆ ಸಂಖ್ಯೆ 3,000ಕ್ಕೂ ಹೆಚ್ಚಿದೆ‘ ಎಂದರು.</p>.<p>’ರೋಗ ಲಕ್ಷಣ ಹೊಂದಿರುವ ಎಲ್ಲರನ್ನೂ ಪರೀಕ್ಷೆ ನಡೆಸಬೇಕು ಎಂಬ ಗುರಿಯೊಂದಿಗೆ ಕೆಲಸ ಮಾಡುತ್ತಿದ್ದೇವೆ. ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಅಭಿಪ್ರಾಯ ಇರುವುದರಿಂದ ಯಾವುದೇ ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿ/ವಿದ್ಯಾರ್ಥಿನಿಗೆ ರೋಗ ಲಕ್ಷಣ ಕಂಡು ಬಂದರೆ ಅಥವಾ ಸೋಂಕು ದೃಢಪಟ್ಟರೆ ಆ ಶಾಲೆಯ ಎಲ್ಲ ಮಕ್ಕಳನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಜನರ ವಿಚಾರದಲ್ಲೂ ಅಷ್ಟೇ. ರೋಗ ಲಕ್ಷಣ ಇರುವವರಿಗೆ ಎಲ್ಲರಿಗೂ ಪರೀಕ್ಷೆ ಮಾಡತ್ತಿದ್ದೇವೆ. ಜಿಲ್ಲಾ ಪಂಚಾಯಿತಿ ಸಿಇಒ ಅವರ ಸಲಹೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲೂ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ‘ ಎಂದು ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>